AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ದರ್ಶನ್​ ಕೊಟ್ಟ ಆ ಒಂದು ಕರೆಗೆ ಅಭಿಮಾನಿಗಳಿಂದ ಬಂತು ಅಭೂತಪೂರ್ವ ಪ್ರತಿಕ್ರಿಯೆ; ಸಾಕ್ಷಿ ತೋರಿಸಿದ ಡಿ ಬಾಸ್

ಕೊವಿಡ್​ನಿಂದ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಪ್ರವಾಸಿ ಸ್ಥಳಗಳು, ಝೂಗಳು ಕ್ಲೋಸ್​ ಆಗಿವೆ. ಝೂಗಳಿಗೆ ಯಾವುದೇ ಆದಾಯ ಬರುತ್ತಿಲ್ಲ. ಇದರಿಂದ ಅಲ್ಲಿರುವ ಪ್ರಾಣಿಗಳ ನಿರ್ವಹಣೆ ಕಷ್ಟವಾಗುತ್ತಿದೆ.

Darshan: ದರ್ಶನ್​ ಕೊಟ್ಟ ಆ ಒಂದು ಕರೆಗೆ ಅಭಿಮಾನಿಗಳಿಂದ ಬಂತು ಅಭೂತಪೂರ್ವ ಪ್ರತಿಕ್ರಿಯೆ; ಸಾಕ್ಷಿ ತೋರಿಸಿದ ಡಿ ಬಾಸ್
ನಟ ದರ್ಶನ್
ರಾಜೇಶ್ ದುಗ್ಗುಮನೆ
| Edited By: |

Updated on: Jun 06, 2021 | 4:33 PM

Share

ನಟ ದರ್ಶನ್​ ಹೇಳಿದ್ದನ್ನು ಅಭಿಮಾನಿಗಳು ಚಾಚೂತಪ್ಪದೆ ಪಾಲಿಸುತ್ತಾರೆ. ಈ ಮೊದಲು ಕರ್ನಾಟಕದಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ‘ನನ್ನ ಬರ್ತ್​ಡೇ ಆಚರಣೆ ಬೇಡ. ಬದಲಿಗೆ ದಿನಸಿ ತಂದುಕೊಡಿ. ಅದನ್ನು ಪ್ರವಾಹ ಪೀಡಿತ ಪ್ರದೇಶಕ್ಕೆ ತಲುಪಿಸುತ್ತೇವೆ’ ಎಂದು ದರ್ಶನ್​ ಹೇಳಿದ್ದರು. ಇದನ್ನು ಅಭಿಮಾನಿಗಳು ಮಾಡಿದ್ದರು. ಈಗ ಕೊವಿಡ್​ ಸಂದರ್ಭದಲ್ಲಿ ಪ್ರಾಣಿಗಳನ್ನು ದತ್ತು ಪಡೆಯುವಂತೆ ದರ್ಶನ್​ ಮನವಿ ಮಾಡಿದ್ದು, ಅವರ ಕರೆಗೆ ಅಭೂತಪೂರ್ವ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೊವಿಡ್​ನಿಂದ ಲಾಕ್​ಡೌನ್​ ಘೋಷಣೆ ಮಾಡಲಾಗಿದೆ. ಹೀಗಾಗಿ, ಪ್ರವಾಸಿ ಸ್ಥಳಗಳು, ಝೂಗಳು ಕ್ಲೋಸ್​ ಆಗಿವೆ. ಹೀಗಾಗಿ ಝೂಗಳಿಗೆ ಯಾವುದೇ ಆದಾಯ ಬರುತ್ತಿಲ್ಲ. ಇದರಿಂದ ಅಲ್ಲಿರುವ ಪ್ರಾಣಿಗಳ ನಿರ್ವಹಣೆ ಕಷ್ಟವಾಗುತ್ತಿದೆ. ಇದು ದರ್ಶನ್​ ಗಮನಕ್ಕೆ ಬಂದಿದೆ. ಕರ್ನಾಟಕದಲ್ಲಿ 9 ಝೂಗಳಿವೆ. ಎಲ್ಲಾ ಪ್ರಾಣಿ ಸಂಗ್ರಹಾಲಯದ ಪರಿಸ್ಥಿತಿಯೂ ಒಂದೇ ರೀತಿ ಇದೆ. ಹಾಗಾಗಿ ನಿಮ್ಮ ಕೈಲಾದ ಪ್ರಾಣಿಗಳನ್ನ ದತ್ತು ಪಡೆಯಿರಿ ಎಂದು ದರ್ಶನ್ ಮನವಿ ಮಾಡಿದ್ದರು. ಇದಕ್ಕೆ ದೊಡ್ಡ ಮಟ್ಟದಲ್ಲಿ ಪ್ರತಿಕ್ರಿಯೆ ಬಂದಿದೆ.

ದರ್ಶನ್​ ಕರೆ ನೀಡಿದ ಒಂದೇ ದಿನದಲ್ಲಿ ಸಾಕಷ್ಟು ಜನರು ಮುಂದೆ ಬಂದು ಝೂನ ಪ್ರಾಣಿಗಳನ್ನು ದತ್ತು ಪಡೆಯುತ್ತಿದ್ದಾರೆ. ಮೈಸೂರಿನ ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ದರ್ಶನ್ ಹೆಸರಿನ ಸಿಂಹವನ್ನು ನಿರ್ಮಾಪಕರಾದ ಶೈಲಜಾ ನಾಗ್ ದತ್ತು ಪಡೆದಿದ್ದಾರೆ. ಇದಕ್ಕೆ ದರ್ಶನ್​ ಧನ್ಯವಾದ ಅರ್ಪಿಸಿದ್ದಾರೆ.

ಕೆಲವರು ಲವ್​ ಬರ್ಡ್​ ದತ್ತು ಪಡೆದರೆ, ಇನ್ನೂ ಕೆಲವರು ಕಾಳಿಂಗ ಸರ್ಪ ತೆಗೆದುಕೊಂಡಿದ್ದಾರೆ. ಇವರೆಲ್ಲರಿಗೂ ಧನ್ಯವಾದ ಅರ್ಪಿಸುವ ಕೆಲಸವನ್ನು ದರ್ಶನ್​ ಮಾಡಿದ್ದಾರೆ.

ಇದನ್ನೂ ಓದಿ: Darshan: ಪ್ರಾಣಿಗಳನ್ನು ದತ್ತು ಪಡೆಯೋದು ಹೇಗೆ? ದರ್ಶನ್ ವಿಶೇಷ ಮನವಿಯಲ್ಲಿದೆ ಸಂಪೂರ್ಣ ಮಾಹಿತಿ

Challenging Star Darshan Fans : ದರ್ಶನ್‌ ಕರೆಯನ್ನ ಚಾಲೆಂಜಿಂಗ್‌ ಆಗಿ ತಗೊಂಡ ಡಿ ಬಾಸ್‌ ಫ್ಯಾನ್ಸ್‌

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ