AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ಚಿರು ಜೊತೆಗಿನ ಪೋಟೋ ಶೇರ್ ಮಾಡಿ ಸ್ನೇಹದ ನೆನಪು ಹಂಚಿಕೊಂಡ ದರ್ಶನ್

ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ.

Darshan: ಚಿರು ಜೊತೆಗಿನ ಪೋಟೋ ಶೇರ್ ಮಾಡಿ ಸ್ನೇಹದ ನೆನಪು ಹಂಚಿಕೊಂಡ ದರ್ಶನ್
ದರ್ಶನ್​-ಚಿರು
ರಾಜೇಶ್ ದುಗ್ಗುಮನೆ
|

Updated on: Jun 07, 2021 | 8:52 PM

Share

ಚಿರಂಜೀವಿ ಸರ್ಜಾ ಅವರು ಮೃತಪಟ್ಟು ಇಂದಿಗೆ (ಜೂನ್​ 7) ಒಂದು ವರ್ಷವಾಗಿದೆ. ಈ ದಿನದಂದು ಅನೇಕರು ಚಿರಂಜೀವಿ ಸರ್ಜಾ ಅವರ ನೆನಪನ್ನು ಹಂಚಿಕೊಳ್ಳುತ್ತಿದ್ದಾರೆ. ಈಗ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕೂಡ ಚಿರು ಅವರನ್ನು ನೆನಪಿಸಿಕೊಂಡಿದ್ದಾರೆ.

2020 ಇಡೀ ಜಗತ್ತಿನ ಪಾಲಿಗೆ ಕೆಟ್ಟ ವರ್ಷ ಎಂದು ಪರಿಗಣಿಸಲ್ಪಟ್ಟಿದೆ. 2020ರ ಆರಂಭದಲ್ಲಿ ಕೊರೊನಾ ವೈರಸ್​ ವಿಶ್ವಾದ್ಯಂತ ಹರಡಿತ್ತು. ಅಲ್ಲದೆ, ಸಾಕಷ್ಟು ಸೆಲೆಬ್ರಿಟಿಗಳು ಕೂಡ ಮೃತಪಟ್ಟಿದ್ದು ಸಿನಿಪ್ರಿಯರಿಗೆ ತೀವ್ರ ನೋವಾಗಿತ್ತು. ಅದೆ ರೀತಿ ಜೂನ್​ 7ರಂದು ಚಿರು ಹೃದಯಾಘಾತದಿಂದ ಮೃತಪಟ್ಟರು. ಇದನ್ನು ಅರಗಿಸಿಕೊಳ್ಳೋಕೆ ಅವರ ಪತ್ನಿ ಮೇಘನಾ ರಾಜ್​ ತುಂಬಾನೇ ಕಷ್ಟಪಟ್ಟಿದ್ದಾರೆ.

ಕೊರೊನಾ ವೈರಸ್​ ಎರಡನೇ ಅಲೆ ನಿಯಂತ್ರಿಸಲು ಎಲ್ಲಾ ಕಡೆಗಳಲ್ಲಿ ಲಾಕ್​ಡೌನ್​ ಜಾರಿಯಲ್ಲಿ ಇರುವುದರಿಂದ ಚಿರು ಮೊದಲ ವರ್ಷದ ಪುಣ್ಯತಿಥಿಯನ್ನು ಸರಳವಾಗಿ ಆಚರಣೆ ಮಾಡಲಾಗಿದೆ. ಕೇವಲ ಕುಟುಂಬದ ಸದಸ್ಯರು ಮಾತ್ರ ಸಮಾಧಿ ಬಳಿ ತೆರಳಿ ಪೂಜೆ ಸಲ್ಲಿಸಿದ್ದಾರೆ. ಕನಕಪುರ ರಸ್ತೆಯ ನೆಲಗುಳಿ ಬಳಿ ಇರುವ ಬೃಂದಾವನ ಫಾರ್ಮ್​ಹೌಸ್​ನಲ್ಲಿ ಚಿರು ಅಂತ್ಯಸಂಸ್ಕಾರ ನೆರವೇರಿಸಲಾಗಿತ್ತು. ಅದೇ ಸ್ಥಳಕ್ಕೆ ತೆರಳಿ ಕುಟುಂಬಸ್ಥರು ಪೂಜೆ ಸಲ್ಲಿಸಿದ್ದಾರೆ.

ಇನ್ನು, ಸಾಕಷ್ಟು ಜನರು ಚಿರು ಜತೆಗಿನ ನೆನಪನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ದರ್ಶನ್​, ನೀನು ಯಾವಾಗಲೂ ನೆನಪಿನಲ್ಲಿರುತ್ತೀಯಾ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ, ಚಿರು ಜತೆಗಿನ ಫೋಟೋ ಕೂಡ ಹಂಚಿಕೊಂಡಿದ್ದಾರೆ.

 ಇದನ್ನೂ ಓದಿ: Chiranjeevi Sarja: ಮೇಘನಾ ರಾಜ್​ ಜೊತೆ ಚಿರಂಜೀವಿ ಸರ್ಜಾ ಸಮಾಧಿಗೆ ಪೂಜೆ ಸಲ್ಲಿಸಿದ ಜ್ಯೂ. ಚಿರು

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!