AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಸೋಂಕಿತರಿಗೆ ನೆರವಾದ ಡಿ-ಬಾಸ್​; ಆಮ್ಲಜನಕ ನೀಡೋ ಕಾಯಕಕ್ಕೆ ಕೈ ಜೋಡಿಸಿದ ದರ್ಶನ್​

ದರ್ಶನ್​ ಕೇವಲ ನಟನೆಯಲ್ಲಿ ಮಾತ್ರವಲ್ಲದೆ ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಾಣಿಗಳನ್ನು ದತ್ತು ಪಡೆದು ಅವನ್ನು ಸಾಕುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ.

ಕೊವಿಡ್​ ಸೋಂಕಿತರಿಗೆ ನೆರವಾದ ಡಿ-ಬಾಸ್​; ಆಮ್ಲಜನಕ ನೀಡೋ ಕಾಯಕಕ್ಕೆ ಕೈ ಜೋಡಿಸಿದ ದರ್ಶನ್​
ದರ್ಶನ್​
ರಾಜೇಶ್ ದುಗ್ಗುಮನೆ
|

Updated on: May 22, 2021 | 8:45 PM

Share

ಕೊವಿಡ್​ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ್ದರಿಂದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ತೀವ್ರವಾಗಿ ಕಾಡುತ್ತಿದೆ. ಸೋನು ಸೂದ್ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಈ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ. ಈಗ ಬಾಕ್ಸ್ ಆಫೀಸ್​ ಸುಲ್ತಾನ್​ ದರ್ಶನ್​ ಕೂಡ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡಲು ಕೈ ಜೋಡಿಸಿದ್ದಾರೆ.

ದರ್ಶನ್​ ಕೇವಲ ನಟನೆಯಲ್ಲಿ ಮಾತ್ರವಲ್ಲದೆ ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಾಣಿಗಳನ್ನು ದತ್ತು ಪಡೆದು ಅವನ್ನು ಸಾಕುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಇದಲ್ಲದೆ, ಕಷ್ಟ ಎಂದು ಹೇಳಿಕೊಂಡು ಬರುವವರಿಗೆ ಸಹಾಯ ಮಾಡಿದ್ದಾರೆ. ಈಗ ಅವರು ಆಮ್ಲಜನಕ ನೀಡುವ ಕಾಯಕಕ್ಕೆ ದರ್ಶನ್​ ಮುಂದಾಗಿದ್ದಾರೆ.

‘ಉಸಿರು’ ಹೆಸರಿನ ಕೊವಿಡ್​ ಆಕ್ಸಿಜನ್​ ಕೇರ್​ಗೆ ದರ್ಶನ್​ ಬೆಂಬಲವಾಗಿ ನಿಂತಿದ್ದಾರೆ. ಈ ಬಗ್ಗೆ ಪೋಸ್ಟ್​ ಹಾಕಿರುವ ಉಸಿರು ತಂಡ, ಉಸಿರು ತಂಡಕ್ಕೆ ಗಜ ಬಲ. ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ನಮ್ಮ ಜತೆ ಕೈ ಜೋಡಿಸಲು ಸಿದ್ಧರಾಗಿದ್ದಾರೆ ಎಂದು ಬರೆದುಕೊಂಡಿದೆ.

ಕೊವಿಡ್​ ರೋಗಿಗಳಿಗೆ ಉಸಿರಾಟದ ಸಮಸ್ಯೆ ಇದ್ದರೆ ಅಂಥವರಿಗೆ ಆಮ್ಲಜನಕದ ವ್ಯವಸ್ಥೆಯನ್ನು ಮನೆಯಲ್ಲೇ ಮಾಡಿಕೊಡಲಾಗುತ್ತದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಬಳಗದ ಸಹಯೋಗದೊಂದಿಗೆ ಮೈಸೂರಿನಲ್ಲಿ ಉಸಿರು ತಂಡದ ಮೊದಲ ಸೇವೆ ಒದಗಿಸಿದೆ. ಈ ಬಗ್ಗೆ ಉಸಿರು ತಂಡ ಸೋಶಿಯಲ್​ ಮೀಡಿಯಾದಲ್ಲಿ ಅಧಿಕೃತ ಘೋಷಣೆ ಮಾಡಿದೆ.

ನಟ ಸೋನು ಸೂದ್​ ಅವರಂತೂ ಅನೇಕರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ. ಕಷ್ಟ ಎಂದು ಹೇಳಿದ ಎಲ್ಲರಿಗೂ ಅವರು ಸಹಾಯ ಮಾಡುತ್ತಿದ್ದಾರೆ. ಸದ್ಯದ ಕೊರೊನಾ ಸಂಕಷ್ಟದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಕೊರೊನಾದಿಂದ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್​ ಪ್ಲಾಂಟ್​ಗಳನ್ನು ಸ್ಥಾಪಿಸಲು ಸೋನು ಸೂದ್​ ತೀರ್ಮಾನಿಸಿದ್ದರು. ಅದಕ್ಕಾಗಿ ಅವರು ಆಕ್ಸಿಜನ್​ ಪ್ಲಾಂಟ್​ಗಳನ್ನು ಫ್ರಾನ್ಸ್​ನಿಂದ ಆಮದು ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು. ಈಗ ದರ್ಶನ್​ ಕೂಡ ಸಹಾಯಕ್ಕೆ ನಿಂತಿದ್ದಾರೆ.

ಇದನ್ನೂ ಓದಿ: ದರ್ಶನ್​-ವಿಜಯಲಕ್ಷ್ಮಿ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ; ವೈರಲ್​ ಆಯ್ತು ಮದುವೆ ಆಮಂತ್ರಣ ಪತ್ರ  

Follow Us
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಅಭಿವೃದ್ಧಿಯಲ್ಲಿ ಬೆಂಗಳೂರಿಗಿಂತ ದಾವಣಗೆರೆಯೇ ಮುಂದು ಎಂದ ಡಿಕೆಶಿ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಪ್ರೇಮ ವಿವಾಹಕ್ಕೆ ಪೋಷಕರ ವಿರೋಧ! ರಾಜಿ ಆಗೋಣವೆಂದು ಕರೆದು ಹಲ್ಲೆ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಈ ಸರ್ಕಾರದ ಲೂಟಿ ನೋಡಿಯೇ ಕೆಂಪಣ್ಣ ಸತ್ಹೋಗ್ಬಿಟ್ಟ: ಪ್ರತಾಪಸಿಂಹ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಕೋಲಾರ: ಸೆಷನ್ಸ್ ಕೋರ್ಟ್ ಒಳ ಸೇರಿಕೊಂಡಿದ್ದ ಹಾವು! ಆಮೇಲೇನಾಯ್ತು ನೋಡಿ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈಮೇಲೆ ಹರಿದು ಕಾರು, ಕೆಲವೇ ಕ್ಷಣಗಳಲ್ಲಿ ಪವಾಡವೆಂಬಂತೆ ಎದ್ದು ನಿಂತ ಬಾಲಕ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಮೈ ರೋಮಾಂಚನಗೊಳಿಸುವ ಕುಮಾರ - ಸಿರಿ ಭೇಟಿ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಅಯೋಧ್ಯೆಯಲ್ಲಿ ಬಂದೂಕು ತೋರಿಸಿ ಆಭರಣದಂಗಡಿ ದೋಚಿದ ಬುರ್ಖಾಧಾರಿ ಮಹಿಳೆ
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ಆನೇಕಲ್: ಗ್ರಾಮಕ್ಕೆ ನುಗ್ಗಿ ಕಾಡಾನೆಗಳ ನೈಟ್ ರೌಂಡ್ಸ್! ವಿಡಿಯೋ ವೈರಲ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ನಾನು ಸಿಎಂ ಆದ್ರೆ ಮಹಿಳೆಯರಿಗೆ 3,000 ರೂ. ಪುರುಷರಿಗೆ 2,000 ರೂ.: ಯತ್ನಾಳ್
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ
ಬೆಂಕಿ ಹಚ್ಚುವ ಮುಲ್ಲಾಗಳಿಗೆ 6 ಸಾವಿರ ಕೊಡತ್ತೆ ಕಾಂಗ್ರೆಸ್ ಸರ್ಕಾರ: ಯತ್ನಾಳ