AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಸೋಂಕಿತರಿಗೆ ನೆರವಾದ ಡಿ-ಬಾಸ್​; ಆಮ್ಲಜನಕ ನೀಡೋ ಕಾಯಕಕ್ಕೆ ಕೈ ಜೋಡಿಸಿದ ದರ್ಶನ್​

ದರ್ಶನ್​ ಕೇವಲ ನಟನೆಯಲ್ಲಿ ಮಾತ್ರವಲ್ಲದೆ ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಾಣಿಗಳನ್ನು ದತ್ತು ಪಡೆದು ಅವನ್ನು ಸಾಕುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ.

ಕೊವಿಡ್​ ಸೋಂಕಿತರಿಗೆ ನೆರವಾದ ಡಿ-ಬಾಸ್​; ಆಮ್ಲಜನಕ ನೀಡೋ ಕಾಯಕಕ್ಕೆ ಕೈ ಜೋಡಿಸಿದ ದರ್ಶನ್​
ದರ್ಶನ್​
ರಾಜೇಶ್ ದುಗ್ಗುಮನೆ
|

Updated on: May 22, 2021 | 8:45 PM

Share

ಕೊವಿಡ್​ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ್ದರಿಂದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ತೀವ್ರವಾಗಿ ಕಾಡುತ್ತಿದೆ. ಸೋನು ಸೂದ್ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಈ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ. ಈಗ ಬಾಕ್ಸ್ ಆಫೀಸ್​ ಸುಲ್ತಾನ್​ ದರ್ಶನ್​ ಕೂಡ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡಲು ಕೈ ಜೋಡಿಸಿದ್ದಾರೆ.

ದರ್ಶನ್​ ಕೇವಲ ನಟನೆಯಲ್ಲಿ ಮಾತ್ರವಲ್ಲದೆ ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಾಣಿಗಳನ್ನು ದತ್ತು ಪಡೆದು ಅವನ್ನು ಸಾಕುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಇದಲ್ಲದೆ, ಕಷ್ಟ ಎಂದು ಹೇಳಿಕೊಂಡು ಬರುವವರಿಗೆ ಸಹಾಯ ಮಾಡಿದ್ದಾರೆ. ಈಗ ಅವರು ಆಮ್ಲಜನಕ ನೀಡುವ ಕಾಯಕಕ್ಕೆ ದರ್ಶನ್​ ಮುಂದಾಗಿದ್ದಾರೆ.

‘ಉಸಿರು’ ಹೆಸರಿನ ಕೊವಿಡ್​ ಆಕ್ಸಿಜನ್​ ಕೇರ್​ಗೆ ದರ್ಶನ್​ ಬೆಂಬಲವಾಗಿ ನಿಂತಿದ್ದಾರೆ. ಈ ಬಗ್ಗೆ ಪೋಸ್ಟ್​ ಹಾಕಿರುವ ಉಸಿರು ತಂಡ, ಉಸಿರು ತಂಡಕ್ಕೆ ಗಜ ಬಲ. ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ನಮ್ಮ ಜತೆ ಕೈ ಜೋಡಿಸಲು ಸಿದ್ಧರಾಗಿದ್ದಾರೆ ಎಂದು ಬರೆದುಕೊಂಡಿದೆ.

ಕೊವಿಡ್​ ರೋಗಿಗಳಿಗೆ ಉಸಿರಾಟದ ಸಮಸ್ಯೆ ಇದ್ದರೆ ಅಂಥವರಿಗೆ ಆಮ್ಲಜನಕದ ವ್ಯವಸ್ಥೆಯನ್ನು ಮನೆಯಲ್ಲೇ ಮಾಡಿಕೊಡಲಾಗುತ್ತದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಬಳಗದ ಸಹಯೋಗದೊಂದಿಗೆ ಮೈಸೂರಿನಲ್ಲಿ ಉಸಿರು ತಂಡದ ಮೊದಲ ಸೇವೆ ಒದಗಿಸಿದೆ. ಈ ಬಗ್ಗೆ ಉಸಿರು ತಂಡ ಸೋಶಿಯಲ್​ ಮೀಡಿಯಾದಲ್ಲಿ ಅಧಿಕೃತ ಘೋಷಣೆ ಮಾಡಿದೆ.

ನಟ ಸೋನು ಸೂದ್​ ಅವರಂತೂ ಅನೇಕರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ. ಕಷ್ಟ ಎಂದು ಹೇಳಿದ ಎಲ್ಲರಿಗೂ ಅವರು ಸಹಾಯ ಮಾಡುತ್ತಿದ್ದಾರೆ. ಸದ್ಯದ ಕೊರೊನಾ ಸಂಕಷ್ಟದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಕೊರೊನಾದಿಂದ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್​ ಪ್ಲಾಂಟ್​ಗಳನ್ನು ಸ್ಥಾಪಿಸಲು ಸೋನು ಸೂದ್​ ತೀರ್ಮಾನಿಸಿದ್ದರು. ಅದಕ್ಕಾಗಿ ಅವರು ಆಕ್ಸಿಜನ್​ ಪ್ಲಾಂಟ್​ಗಳನ್ನು ಫ್ರಾನ್ಸ್​ನಿಂದ ಆಮದು ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು. ಈಗ ದರ್ಶನ್​ ಕೂಡ ಸಹಾಯಕ್ಕೆ ನಿಂತಿದ್ದಾರೆ.

ಇದನ್ನೂ ಓದಿ: ದರ್ಶನ್​-ವಿಜಯಲಕ್ಷ್ಮಿ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ; ವೈರಲ್​ ಆಯ್ತು ಮದುವೆ ಆಮಂತ್ರಣ ಪತ್ರ  

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ