AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್​ ಸೋಂಕಿತರಿಗೆ ನೆರವಾದ ಡಿ-ಬಾಸ್​; ಆಮ್ಲಜನಕ ನೀಡೋ ಕಾಯಕಕ್ಕೆ ಕೈ ಜೋಡಿಸಿದ ದರ್ಶನ್​

ದರ್ಶನ್​ ಕೇವಲ ನಟನೆಯಲ್ಲಿ ಮಾತ್ರವಲ್ಲದೆ ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಾಣಿಗಳನ್ನು ದತ್ತು ಪಡೆದು ಅವನ್ನು ಸಾಕುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ.

ಕೊವಿಡ್​ ಸೋಂಕಿತರಿಗೆ ನೆರವಾದ ಡಿ-ಬಾಸ್​; ಆಮ್ಲಜನಕ ನೀಡೋ ಕಾಯಕಕ್ಕೆ ಕೈ ಜೋಡಿಸಿದ ದರ್ಶನ್​
ದರ್ಶನ್​
ರಾಜೇಶ್ ದುಗ್ಗುಮನೆ
|

Updated on: May 22, 2021 | 8:45 PM

Share

ಕೊವಿಡ್​ ಎರಡನೇ ಅಲೆ ಮಿತಿಮೀರಿ ಹರಡುತ್ತಿದೆ. ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಿದ್ದರಿಂದ ಆಸ್ಪತ್ರೆಗಳಲ್ಲಿ ವೈದ್ಯಕೀಯ ಆಮ್ಲಜನಕದ ಕೊರತೆ ತೀವ್ರವಾಗಿ ಕಾಡುತ್ತಿದೆ. ಸೋನು ಸೂದ್ ಸೇರಿ ಸಾಕಷ್ಟು ಸೆಲೆಬ್ರಿಟಿಗಳು ಈ ಸಮಸ್ಯೆಗೆ ಸ್ಪಂದಿಸುತ್ತಿದ್ದಾರೆ. ಈಗ ಬಾಕ್ಸ್ ಆಫೀಸ್​ ಸುಲ್ತಾನ್​ ದರ್ಶನ್​ ಕೂಡ ವೈದ್ಯಕೀಯ ಆಮ್ಲಜನಕ ಪೂರೈಕೆ ಮಾಡಲು ಕೈ ಜೋಡಿಸಿದ್ದಾರೆ.

ದರ್ಶನ್​ ಕೇವಲ ನಟನೆಯಲ್ಲಿ ಮಾತ್ರವಲ್ಲದೆ ಸಾಕಷ್ಟು ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಪ್ರಾಣಿಗಳನ್ನು ದತ್ತು ಪಡೆದು ಅವನ್ನು ಸಾಕುವ ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಇದಲ್ಲದೆ, ಕಷ್ಟ ಎಂದು ಹೇಳಿಕೊಂಡು ಬರುವವರಿಗೆ ಸಹಾಯ ಮಾಡಿದ್ದಾರೆ. ಈಗ ಅವರು ಆಮ್ಲಜನಕ ನೀಡುವ ಕಾಯಕಕ್ಕೆ ದರ್ಶನ್​ ಮುಂದಾಗಿದ್ದಾರೆ.

‘ಉಸಿರು’ ಹೆಸರಿನ ಕೊವಿಡ್​ ಆಕ್ಸಿಜನ್​ ಕೇರ್​ಗೆ ದರ್ಶನ್​ ಬೆಂಬಲವಾಗಿ ನಿಂತಿದ್ದಾರೆ. ಈ ಬಗ್ಗೆ ಪೋಸ್ಟ್​ ಹಾಕಿರುವ ಉಸಿರು ತಂಡ, ಉಸಿರು ತಂಡಕ್ಕೆ ಗಜ ಬಲ. ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ನಮ್ಮ ಜತೆ ಕೈ ಜೋಡಿಸಲು ಸಿದ್ಧರಾಗಿದ್ದಾರೆ ಎಂದು ಬರೆದುಕೊಂಡಿದೆ.

ಕೊವಿಡ್​ ರೋಗಿಗಳಿಗೆ ಉಸಿರಾಟದ ಸಮಸ್ಯೆ ಇದ್ದರೆ ಅಂಥವರಿಗೆ ಆಮ್ಲಜನಕದ ವ್ಯವಸ್ಥೆಯನ್ನು ಮನೆಯಲ್ಲೇ ಮಾಡಿಕೊಡಲಾಗುತ್ತದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿ ಬಳಗದ ಸಹಯೋಗದೊಂದಿಗೆ ಮೈಸೂರಿನಲ್ಲಿ ಉಸಿರು ತಂಡದ ಮೊದಲ ಸೇವೆ ಒದಗಿಸಿದೆ. ಈ ಬಗ್ಗೆ ಉಸಿರು ತಂಡ ಸೋಶಿಯಲ್​ ಮೀಡಿಯಾದಲ್ಲಿ ಅಧಿಕೃತ ಘೋಷಣೆ ಮಾಡಿದೆ.

ನಟ ಸೋನು ಸೂದ್​ ಅವರಂತೂ ಅನೇಕರ ಪಾಲಿಗೆ ರಿಯಲ್​ ಹೀರೋ ಆಗಿದ್ದಾರೆ. ಕಷ್ಟ ಎಂದು ಹೇಳಿದ ಎಲ್ಲರಿಗೂ ಅವರು ಸಹಾಯ ಮಾಡುತ್ತಿದ್ದಾರೆ. ಸದ್ಯದ ಕೊರೊನಾ ಸಂಕಷ್ಟದಲ್ಲಿ ಹಗಲಿರುಳು ಅವರು ಶ್ರಮಿಸುತ್ತಿದ್ದಾರೆ. ಕೊರೊನಾದಿಂದ ಅತಿ ಹೆಚ್ಚು ಕಷ್ಟ ಅನುಭವಿಸುತ್ತಿರುವ ನಾಲ್ಕು ರಾಜ್ಯಗಳಲ್ಲಿ ಆಕ್ಸಿಜನ್​ ಪ್ಲಾಂಟ್​ಗಳನ್ನು ಸ್ಥಾಪಿಸಲು ಸೋನು ಸೂದ್​ ತೀರ್ಮಾನಿಸಿದ್ದರು. ಅದಕ್ಕಾಗಿ ಅವರು ಆಕ್ಸಿಜನ್​ ಪ್ಲಾಂಟ್​ಗಳನ್ನು ಫ್ರಾನ್ಸ್​ನಿಂದ ಆಮದು ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿದ್ದರು. ಈಗ ದರ್ಶನ್​ ಕೂಡ ಸಹಾಯಕ್ಕೆ ನಿಂತಿದ್ದಾರೆ.

ಇದನ್ನೂ ಓದಿ: ದರ್ಶನ್​-ವಿಜಯಲಕ್ಷ್ಮಿ ದಂಪತಿಗೆ ವಿವಾಹ ವಾರ್ಷಿಕೋತ್ಸವದ ಸಂಭ್ರಮ; ವೈರಲ್​ ಆಯ್ತು ಮದುವೆ ಆಮಂತ್ರಣ ಪತ್ರ  

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ