ಅನ್ನದಾತರು.. ಸೆಲೆಬ್ರಿಟಿಗಳನ್ನ ಪ್ರಚೋದಿಸಬೇಡಿ; ದರ್ಶನ್ ವಾರ್ನಿಂಗ್

ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ‘ದಚ್ಚು-ಕಿಚ್ಚ’ನ ಫ್ಯಾನ್ಸ್ ಕಿತ್ತಾಟ ಜೋರಾಗಿಯೇ ಇದೆ. ದರ್ಶನ್ ಫ್ಯಾನ್ಸ್​ ಸುದೀಪ್ ವಿರುದ್ಧ ಆರೋಪ ಮಾಡಿದ್ರೆ, ಸುದೀಪ್ ಫ್ಯಾನ್ಸ್​ ದರ್ಶನ್ ವಿರುದ್ಧ ಪ್ರತ್ಯಾರೋಪ ಮಾಡ್ತಿದ್ದಾರೆ. ಇದೀಗ ಇವರಿಬ್ಬರ ನಡುವೆ ಫ್ಯಾನ್ಸ್​ ವಾರ್ ಹುಟ್ಟಿಕೊಳ್ಳಲು ಕಾರಣವೇನೆಂದರೆ, ಇತ್ತೀಚೆಗೆ ತೆರೆಕಂಡ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಪೈರಸಿಯಾಗಿತ್ತು. ಇದಕ್ಕೆ ದರ್ಶನ್ ಅಭಿಮಾನಿಗಳೇ ಕಾರಣ ಎಂದು ಸುದೀಪ್ ಅಭಿಮಾನಿಗಳು ದೂರಿದ್ದರು. ಇದರಿಂದ ಕೆರಳಿದ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುದೀಪ್ ಹೆಸರು ಬಳಸದೆ ಬಹಿರಂಗ ಪತ್ರ […]

ಅನ್ನದಾತರು..  ಸೆಲೆಬ್ರಿಟಿಗಳನ್ನ ಪ್ರಚೋದಿಸಬೇಡಿ; ದರ್ಶನ್ ವಾರ್ನಿಂಗ್
ಸಾಧು ಶ್ರೀನಾಥ್​

Updated on: Sep 17, 2019 | 3:16 PM

ಕಳೆದ ಕೆಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ‘ದಚ್ಚು-ಕಿಚ್ಚ’ನ ಫ್ಯಾನ್ಸ್ ಕಿತ್ತಾಟ ಜೋರಾಗಿಯೇ ಇದೆ. ದರ್ಶನ್ ಫ್ಯಾನ್ಸ್​ ಸುದೀಪ್ ವಿರುದ್ಧ ಆರೋಪ ಮಾಡಿದ್ರೆ, ಸುದೀಪ್ ಫ್ಯಾನ್ಸ್​ ದರ್ಶನ್ ವಿರುದ್ಧ ಪ್ರತ್ಯಾರೋಪ ಮಾಡ್ತಿದ್ದಾರೆ.

ಇದೀಗ ಇವರಿಬ್ಬರ ನಡುವೆ ಫ್ಯಾನ್ಸ್​ ವಾರ್ ಹುಟ್ಟಿಕೊಳ್ಳಲು ಕಾರಣವೇನೆಂದರೆ, ಇತ್ತೀಚೆಗೆ ತೆರೆಕಂಡ ಸುದೀಪ್ ಅಭಿನಯದ ಪೈಲ್ವಾನ್ ಸಿನಿಮಾ ಪೈರಸಿಯಾಗಿತ್ತು. ಇದಕ್ಕೆ ದರ್ಶನ್ ಅಭಿಮಾನಿಗಳೇ ಕಾರಣ ಎಂದು ಸುದೀಪ್ ಅಭಿಮಾನಿಗಳು ದೂರಿದ್ದರು. ಇದರಿಂದ ಕೆರಳಿದ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸುದೀಪ್ ಹೆಸರು ಬಳಸದೆ ಬಹಿರಂಗ ಪತ್ರ ಬರೆದು ಪರೋಕ್ಷವಾಗಿ ಟಾಂಗ್ ನೀಡಿದ್ರು. ಇದಕ್ಕೆ ಮತ್ತೆ ಕಿಚ್ಚನ ಫ್ಯಾನ್ಸ್​ ಬಹಿರಂಗ ಪತ್ರ ಬರೆದು ದರ್ಶನ್ ಫ್ಯಾನ್ಸ್​ಗೆ ಟಕ್ಕರ್ ನೀಡಿದ್ದಾರೆ.

ಆದ್ರೆ ಇದೀಗ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಟ್ವಿಟ್ಟರ್​ನಲ್ಲಿ ಪರೋಕ್ಷವಾಗಿ ವಾರ್ನಿಂಗ್ ನೀಡಿದ್ದಾರೆ. ಸದ್ಯಕ್ಕೆ ನಾನು ಬೆಂಗಳೂರಿನಲ್ಲಿ ಇಲ್ಲ, ಶೂಟಿಂಗ್​ನಲ್ಲಿ ಬ್ಯುಸಿಯಾಗಿದ್ದೇನೆ. ನನ್ನ ಅನ್ನದಾತರು, ಸೆಲೆಬ್ರಿಟಿಗಳನ್ನು ಕೆಣಕಲು, ಪ್ರಚೋದಿಸಲು ಬರದಿರಿ ಎಂದು ಕೆಲ ವ್ಯಕ್ತಿಗಳಿಗೆ ದರ್ಶನ್ ಕಿವಿಮಾತು ಹೇಳಿದ್ದಾರೆ.

Published On - 2:57 pm, Tue, 17 September 19

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us