ನಟ ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್​; 2 ತಿಂಗಳಲ್ಲಿ ಇಷ್ಟೊಂದು ಬದಲಾವಣೆ

ಚಂದನ್​ ಕುಮಾರ್​ ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಕೊವಿಡ್​ ಎರಡನೇ ಅಲೆ ಬರುವುದಕ್ಕೂ ಕೆಲ ತಿಂಗಳ ಮೊದಲು ಅವರ ಮದುವೆ ನಿಗದಿ ಆದ ಕಾರಣ ನಟನೆಯಿಂದ ಒಂದು ಬ್ರೇಕ್​ ತೆಗೆದುಕೊಂಡರು.

ನಟ ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್​; 2 ತಿಂಗಳಲ್ಲಿ ಇಷ್ಟೊಂದು ಬದಲಾವಣೆ
ನಟ ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್​; 2 ತಿಂಗಳಲ್ಲಿ ಇಷ್ಟೊಂದು ಬದಲಾವಣೆ
Follow us
| Updated By: Digi Tech Desk

Updated on:Feb 20, 2024 | 2:55 PM

ಹೀರೋಗಳು ಫಿಟ್​ನೆಸ್​ ಕಾಯ್ದುಕೊಳ್ಳೋಕೆ ಹೆಚ್ಚು ಒತ್ತು ನೀಡುತ್ತಾರೆ. ಈ ಕಾರಣಕ್ಕೆ ನಿತ್ಯ ಜಿಮ್​ನಲ್ಲಿ ಬೆವರು ಹರಿಸುತ್ತಾರೆ. ಆಹಾರ ಕ್ರಮದ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಆದರೆ, ಕೊವಿಡ್​ ಬಂದ ನಂತರದಲ್ಲಿ ಅನೇಕರು ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದ್ದರಿಂದ ಫಿಟ್​ನೆಸ್​ ಕಳೆದುಕೊಂಡಿದ್ದಾರೆ. ಇದರಲ್ಲಿ ನಟ ಚಂದನ್​ ಕುಮಾರ್​ ಕೂಡ ಒಬ್ಬರು. ಆದರೆ, ಕೇವಲ ಎರಡೇ ತಿಂಗಳಲ್ಲಿ ಅವರ ದೇಹದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಚಂದನ್​ ಕುಮಾರ್​ ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಕೊವಿಡ್​ ಎರಡನೇ ಅಲೆ ಬರುವುದಕ್ಕೂ ಕೆಲ ತಿಂಗಳ ಮೊದಲು ಅವರ ಮದುವೆ ನಿಗದಿ ಆದ ಕಾರಣ ನಟನೆಯಿಂದ ಒಂದು ಬ್ರೇಕ್​ ತೆಗೆದುಕೊಂಡರು. ಈ ಕಾರಣಕ್ಕೆ ತೆಲುಗು ಧಾರಾವಾಹಿಯಿಂದ ಹೊರ ಬಂದರು. ಈ ಮಧ್ಯೆ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಚಂದನ್​ ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿತ್ತು. ಅಲ್ಲದೆ, ಅವರಿಗೆ ಜಿಮ್​ಗೆ ತೆರಳೋಕು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅವರ ದೇಹ ಶೇಪ್​ ಕಳೆದುಕೊಂಡಿತ್ತು.

ಆದರೆ, ಚಂದನ್​ ಕುಮಾರ್​ ಕೈಕಟ್ಟಿ ಕೂತಿಲ್ಲ. ಸತತ ಎರಡು ತಿಂಗಳು ಜಿಮ್​ನಲ್ಲಿ ಬೆವರು ಹರಿಸಿದ್ದಾರೆ. ಈ ಮೂಲಕ ಅವರ ಬಾಡಿಯನ್ನು ಕರಗಿಸಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಚಂದನ್​ ಹಂಚಿಕೊಂಡಿದ್ದಾರೆ.

ಜೂನ್​ 21ರ ಫೋಟೋದಲ್ಲಿ ಚಂದನ್​ಗೆ ದೊಡ್ಡದಾದ ಹೊಟ್ಟೆ ಬಂದಿದೆ. ಆದರೆ ಆಗಸ್ಟ್​ 26ರ ಫೋಟೋದಲ್ಲಿ ಅವರು ಸಖತ್​ ಫಿಟ್​ ಆಗಿದ್ದಾರೆ. ಈ ಫೋಟೋ ನೋಡಿದ ಫ್ಯಾನ್ಸ್​ ಅಚ್ಚರಿ ಹೊರ ಹಾಕಿದ್ದಾರೆ. ಇನ್ನೂ ಕೆಲವರು ‘ನೀವೇ ನಮಗೆ ಸ್ಫೂರ್ತಿ’ ಎಂದು ಬರೆದುಕೊಂಡಿದ್ದಾರೆ. ಸದ್ಯ, ಈ ಫೋಟೋ ಸಾಕಷ್ಟು ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಚಂದನ್ ಕುಮಾರ್ – ನಟಿ ಕವಿತಾ ಗೌಡ ಸಿಂಪಲ್ ಮದುವೆಯ ಫೋಟೋಗಳು ವೈರಲ್

ಮಾಸ್ಕ್​ ಧರಿಸಿ ಹಸೆಮಣೆ ಏರಿದ ನಟ ಚಂದನ್​ ಕುಮಾರ್​, ನಟಿ ಕವಿತಾ ಗೌಡ…

Published On - 4:54 pm, Thu, 26 August 21

ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಸಚಿವ ಸೋಮಣ್ಣನವರಿಗೆ ಹಾಕಿದ್ದ ಸೇಬು ಹಾರಕ್ಕಾಗಿ ಮುಗಿಬಿದ್ದ ಜನ!
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಫ್ಲಿಪ್​ಕಾರ್ಟ್ ಬಿಗ್ ಬಿಲಿಯನ್ ಡೇ ಆಫರ್ ಸೇಲ್ ದಿನಾಂಕ ಯಾವುದು ಗೊತ್ತಾ?
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಮಸೀದಿ ಮುಂದೆ ಪಟಾಕಿ ಸಿಡಿಸಿದ್ದಕ್ಕೆ ಹಿಂದೂ ಕಾರ್ಯಕರ್ತರ ವಿರುದ್ಧ ಎಫ್​ಐಆರ್
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ಆರ್​ಎಸ್ಎಸ್, ಬಿಜೆಪಿ ವಿರುದ್ಧ ಎಂ ಲಕ್ಷ್ಮಣ್ ಗಂಭೀರ ಆರೋಪ
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
ವಿಡಿಯೋ ನೋಡಿ - ಪಪ್ಪಾಯಿ ಹಣ್ಣಿನಲ್ಲಿ ವಿಚಿತ್ರ ವಿನಾಯಕ!
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
‘ಬೇರೇ ಜೈಲಿಗೆ ಶಿಫ್ಟ್ ಮಾಡಿ ಪ್ಲೀಸ್’; ಬಳ್ಳಾರಿ ಜೈಲಲ್ಲಿ ಸುಸ್ತಾದ ದರ್ಶನ್
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ​​: ಬೆಂಕಿ ಬಿದ್ದಿದ್ದ ಬೈಕ್​ ಶೋರೂಂಗೆ ಹೆಚ್​ಡಿಕೆ ಭೇಟಿ
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ನಾಗಮಂಗಲ ಕೋಮುಗಲಭೆ ಕೇಸ್​​: ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Daily Devotional: ಎಕ್ಕದ ಗಣಪತಿಯ ಮಹತ್ವ ತಿಳಿಯಿರಿ
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು
Nithya Bhavishya: ಈ ರಾಶಿಯವರಿಗೆ ಆಸ್ತಿ ಖರೀದಿಯ ಯೋಜನೆ ಯಶಸ್ವಿಯಾಗಬಹುದು