AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್​; 2 ತಿಂಗಳಲ್ಲಿ ಇಷ್ಟೊಂದು ಬದಲಾವಣೆ

ಚಂದನ್​ ಕುಮಾರ್​ ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಕೊವಿಡ್​ ಎರಡನೇ ಅಲೆ ಬರುವುದಕ್ಕೂ ಕೆಲ ತಿಂಗಳ ಮೊದಲು ಅವರ ಮದುವೆ ನಿಗದಿ ಆದ ಕಾರಣ ನಟನೆಯಿಂದ ಒಂದು ಬ್ರೇಕ್​ ತೆಗೆದುಕೊಂಡರು.

ನಟ ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್​; 2 ತಿಂಗಳಲ್ಲಿ ಇಷ್ಟೊಂದು ಬದಲಾವಣೆ
ನಟ ಚಂದನ್​ ಕುಮಾರ್​ ಬಾಡಿ ಟ್ರಾನ್ಸ್​ಫಾರ್ಮೇಷನ್​ ನೋಡಿ ಅಚ್ಚರಿಗೊಂಡ ಫ್ಯಾನ್ಸ್​; 2 ತಿಂಗಳಲ್ಲಿ ಇಷ್ಟೊಂದು ಬದಲಾವಣೆ
TV9 Web
| Edited By: |

Updated on:Feb 20, 2024 | 2:55 PM

Share

ಹೀರೋಗಳು ಫಿಟ್​ನೆಸ್​ ಕಾಯ್ದುಕೊಳ್ಳೋಕೆ ಹೆಚ್ಚು ಒತ್ತು ನೀಡುತ್ತಾರೆ. ಈ ಕಾರಣಕ್ಕೆ ನಿತ್ಯ ಜಿಮ್​ನಲ್ಲಿ ಬೆವರು ಹರಿಸುತ್ತಾರೆ. ಆಹಾರ ಕ್ರಮದ ಬಗ್ಗೆ ಹೆಚ್ಚು ಗಮನ ಹರಿಸುತ್ತಾರೆ. ಆದರೆ, ಕೊವಿಡ್​ ಬಂದ ನಂತರದಲ್ಲಿ ಅನೇಕರು ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿದ್ದರಿಂದ ಫಿಟ್​ನೆಸ್​ ಕಳೆದುಕೊಂಡಿದ್ದಾರೆ. ಇದರಲ್ಲಿ ನಟ ಚಂದನ್​ ಕುಮಾರ್​ ಕೂಡ ಒಬ್ಬರು. ಆದರೆ, ಕೇವಲ ಎರಡೇ ತಿಂಗಳಲ್ಲಿ ಅವರ ದೇಹದಲ್ಲಿ ಸಾಕಷ್ಟು ಬದಲಾವಣೆ ಆಗಿದೆ. ಈ ಬಗ್ಗೆ ಅವರು ಸೋಶಿಯಲ್​ ಮೀಡಿಯಾದಲ್ಲಿ ಫೋಟೋ ಹಂಚಿಕೊಂಡಿದ್ದಾರೆ.

ಚಂದನ್​ ಕುಮಾರ್​ ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದರು. ಕೊವಿಡ್​ ಎರಡನೇ ಅಲೆ ಬರುವುದಕ್ಕೂ ಕೆಲ ತಿಂಗಳ ಮೊದಲು ಅವರ ಮದುವೆ ನಿಗದಿ ಆದ ಕಾರಣ ನಟನೆಯಿಂದ ಒಂದು ಬ್ರೇಕ್​ ತೆಗೆದುಕೊಂಡರು. ಈ ಕಾರಣಕ್ಕೆ ತೆಲುಗು ಧಾರಾವಾಹಿಯಿಂದ ಹೊರ ಬಂದರು. ಈ ಮಧ್ಯೆ ಕೊವಿಡ್​ ಕಾಣಿಸಿಕೊಂಡಿತ್ತು. ಹೀಗಾಗಿ, ಚಂದನ್​ ಮನೆಯಲ್ಲೇ ಇರಬೇಕಾದ ಪರಿಸ್ಥಿತಿ ಎದುರಾಗಿತ್ತು. ಅಲ್ಲದೆ, ಅವರಿಗೆ ಜಿಮ್​ಗೆ ತೆರಳೋಕು ಸಾಧ್ಯವಾಗಿರಲಿಲ್ಲ. ಹೀಗಾಗಿ, ಅವರ ದೇಹ ಶೇಪ್​ ಕಳೆದುಕೊಂಡಿತ್ತು.

ಆದರೆ, ಚಂದನ್​ ಕುಮಾರ್​ ಕೈಕಟ್ಟಿ ಕೂತಿಲ್ಲ. ಸತತ ಎರಡು ತಿಂಗಳು ಜಿಮ್​ನಲ್ಲಿ ಬೆವರು ಹರಿಸಿದ್ದಾರೆ. ಈ ಮೂಲಕ ಅವರ ಬಾಡಿಯನ್ನು ಕರಗಿಸಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್​ ಮೀಡಿಯಾದಲ್ಲಿ ಚಂದನ್​ ಹಂಚಿಕೊಂಡಿದ್ದಾರೆ.

ಜೂನ್​ 21ರ ಫೋಟೋದಲ್ಲಿ ಚಂದನ್​ಗೆ ದೊಡ್ಡದಾದ ಹೊಟ್ಟೆ ಬಂದಿದೆ. ಆದರೆ ಆಗಸ್ಟ್​ 26ರ ಫೋಟೋದಲ್ಲಿ ಅವರು ಸಖತ್​ ಫಿಟ್​ ಆಗಿದ್ದಾರೆ. ಈ ಫೋಟೋ ನೋಡಿದ ಫ್ಯಾನ್ಸ್​ ಅಚ್ಚರಿ ಹೊರ ಹಾಕಿದ್ದಾರೆ. ಇನ್ನೂ ಕೆಲವರು ‘ನೀವೇ ನಮಗೆ ಸ್ಫೂರ್ತಿ’ ಎಂದು ಬರೆದುಕೊಂಡಿದ್ದಾರೆ. ಸದ್ಯ, ಈ ಫೋಟೋ ಸಾಕಷ್ಟು ವೈರಲ್​ ಆಗುತ್ತಿದೆ.

ಇದನ್ನೂ ಓದಿ: ಚಂದನ್ ಕುಮಾರ್ – ನಟಿ ಕವಿತಾ ಗೌಡ ಸಿಂಪಲ್ ಮದುವೆಯ ಫೋಟೋಗಳು ವೈರಲ್

ಮಾಸ್ಕ್​ ಧರಿಸಿ ಹಸೆಮಣೆ ಏರಿದ ನಟ ಚಂದನ್​ ಕುಮಾರ್​, ನಟಿ ಕವಿತಾ ಗೌಡ…

Published On - 4:54 pm, Thu, 26 August 21

KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪದ ಹಿಂದಿನ ಅಸಲಿ ಕಾರಣ ಇಲ್ಲಿದೆ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ದಲಿತರಿಗೆ ಯಾಕೆ ಮುಖ್ಯಮಂತ್ರಿ ಸ್ಥಾನ ನೀಡಬಾರದು: ಕೆ.ಎನ್. ರಾಜಣ್ಣ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಭೂಸ್ವಾಧೀನ ಮಾಡಿ ವರ್ಷ ಕಳೆದರೂ ಪರಿಹಾರ ನೀಡದ KBJNL ಕಚೇರಿ ಜಪ್ತಿ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ
ಇದೆಂತಹ ಅವಮಾನ... ಪಾಕಿಸ್ತಾನ್ ತಂಡಕ್ಕೆ 'ಬಾಬರ್' ಭಯ