AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್​ ಧರಿಸಿ ಹಸೆಮಣೆ ಏರಿದ ಚಂದನ್​ ಕುಮಾರ್​-ಕವಿತಾ ಗೌಡ; ಲಾಕ್​ಡೌನ್​ ಮಧ್ಯೆಯೇ ಸಿಂಪಲ್​ ವಿವಾಹ

Chandan Kumar Kavitha Gowda Marriage: ಕೊರೊನಾ ವೈರಸ್​ ಮಿತಿ ಮೀತಿ ಹರಡುತ್ತಿರುವುದರಿಂದ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಅಲ್ಲದೆ, ಮದುವೆಗೆ 40 ಮಂದಿ ಮಾತ್ರ ಅತಿಥಿಗಳು ಬರಬಹುದು ಎಂದು ಹೇಳಿದೆ. ಇದೇ ನಿಯಮದಂತೆ ಚಂದನ್​ ಜೋಡಿ ಮದುವೆ ಆಗಿದೆ.

ಮಾಸ್ಕ್​ ಧರಿಸಿ ಹಸೆಮಣೆ ಏರಿದ ಚಂದನ್​ ಕುಮಾರ್​-ಕವಿತಾ ಗೌಡ; ಲಾಕ್​ಡೌನ್​ ಮಧ್ಯೆಯೇ ಸಿಂಪಲ್​ ವಿವಾಹ
ಹಸೆಮಣೆ ಏರಿದ ಚಂದನ್​-ಕವಿತಾ
ರಾಜೇಶ್ ದುಗ್ಗುಮನೆ
| Edited By: |

Updated on:May 14, 2021 | 6:49 PM

Share

ನಟ ಚಂದನ್​ ಕುಮಾರ್​ ಹಾಗೂ ನಟಿ ಕವಿತಾ ಗೌಡ ಏಪ್ರಿಲ್​ 1ರಂದು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಆದರೆ, ಮದುವೆ ದಿನಾಂಕದ ಬಗ್ಗೆ ಅವರು ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ಈಗ ಲಾಕ್​ಡೌನ್​ ಮಧ್ಯೆಯೇ ಕೊವಿಡ್​ ನಿಯಮ ಪಾಲಿಸಿ ಹಸೆಮಣೆ ಏರಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿರುವುದರಿಂದ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಅಲ್ಲದೆ, ಮದುವೆಗೆ 40 ಅತಿಥಿಗಳಿಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಇದೇ ನಿಯಮದಂತೆ ಚಂದನ್​-ಕವಿತಾ ಜೋಡಿ ಮದುವೆ ಆಗಿದೆ. ಹಸೆಮಣೆ ಏರುವಾಗ ಅವರು ಮಾಸ್ಕ ಧರಿಸಿದ್ದು ವಿಶೇಷವಾಗಿತ್ತು. ಕೇವಲ ಆಪ್ತರಿಗೆ ಮಾತ್ರ ಮದುವೆಗೆ ಆಮಂತ್ರಣವಿತ್ತು.

‘ಮನೆ ಮದುವೆ, ಮದುವೆ ಮನೆ. ಗ್ಲೋರಿಯಸ್​ ಆಗಿಲ್ಲ, ಆದರೆ, ಸಂತಸದಿಂದ ತುಂಬಿದೆ ಎಂದು ಚಂದನ್ ಬರೆದುಕೊಂಡಿದ್ದಾರೆ. ಚಂದನ್​ ಮದುವೆ ಆಗಿರುವ ಫೋಟೋ ಹಾಕುತ್ತಿದ್ದಂತೆ ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಬಂದಿದೆ.

ಕಿರುತೆರೆ ಪ್ರೇಕ್ಷಕರ ವಲಯದಲ್ಲಿ ಸಖತ್​ ಜನಪ್ರಿಯವಾಗಿದ್ದ ‘ಲಕ್ಷ್ಮೀ ಬಾರಮ್ಮ’ ಸೀರಿಯಲ್​ನಲ್ಲಿ ಚಂದನ್​ ಕುಮಾರ್​ ಮತ್ತು ಕವಿತಾ ಜೋಡಿಯಾಗಿ ನಟಿಸಿದ್ದರು. ಆಗಿನಿಂದಲೇ ಅವರಿಬ್ಬರ ನಡುವೆ ಸ್ನೇಹ ಚಿಗುರಿತ್ತು. ನಂತರದ ದಿನಗಳಲ್ಲಿ ಅವರಿಬ್ಬರ ಆಪ್ತತೆ ಹೆಚ್ಚಾಯಿತು. ಆದರೆ ಎಂದೂ ಕೂಡ ಅವರು ತಮ್ಮ ಪ್ರೀತಿ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಏಪ್ರಿಲ್​ 1ರಂದು ಕವಿತಾ ಜತೆ ಎಂಗೇಜ್​ಮೆಂಟ್​ ಮಾಡಿಕೊಳ್ಳುತ್ತಿರುವ ಬಗ್ಗೆ ಚಂದನ್​ ಕುಮಾರ್ ಮಾರ್ಚ್​ನಲ್ಲಿ ತಿಳಿಸಿದ್ದರು. ಈ ಮೂಲಕ ಪ್ರೀತಿ ವಿಚಾರವನ್ನು ಅಧಿಕೃತಗೊಳಿಸಿದ್ದರು. ಈಗ ಸಿಂಪಲ್​ ಆಗಿ ಮದುವೆ ಆಗಿ ಹೊಸಬಾಳಿಗೆ ಕಾಲಿಟ್ಟಿದ್ದಾರೆ.

ಟಿವಿ9 ಕನ್ನಡ ಡಿಜಿಟಲ್​ ಜತೆ ಚಂದನ್​ ಮೊಟ್ಟ ಮೊದಲ ಬಾರಿಗೆ ಮದುವೆ ವಿಚಾರವನ್ನು ಮಾತನಾಡಿದ್ದರು. ತೆಲುಗಿನ ‘ಸಾವಿತ್ರಮ್ಮಗಾರಿ ಅಬ್ಬಾಯಿ’ ಧಾರಾವಾಹಿಯ 500ಕ್ಕೂ ಹೆಚ್ಚು ಎಪಿಸೋಡ್​ಗಳಲ್ಲಿ ಚಂದನ್​ ನಟಿಸಿದ್ದರು. ಆ ಧಾರಾವಾಹಿಯಲ್ಲಿ ಅವರ ಪಾತ್ರ ಅಂತ್ಯವಾಗಿತ್ತು. ಅದಕ್ಕೆ ಕಾರಣ ಏನು ಎಂಬ ಬಗ್ಗೆ ಕೇಳಿದ್ದಾಗ ಮದುವೆ ವಿಚಾರ ಹೇಳಿಕೊಂಡಿದ್ದರು.  ‘ನಂಗೆ ಸ್ವಲ್ಪ ಫ್ರೀಡಂ ಬೇಕಾಗಿತ್ತು. ಮದುವೆ ಪ್ಲ್ಯಾನ್​ ಕೂಡ ನಡೆಯುತ್ತಿದೆ. ಪರ್ಸನಲ್​ ಜೀವನದ ಕಡೆಗೆ ಗಮನ ಹರಿಸಬೇಕು’ ಎಂದಿದ್ದರು.

ಇದನ್ನೂ ಓದಿ: Chandan – Kavitha: ಕವಿತಾ ಪ್ರೀತಿಗಾಗಿ ಮಧ್ಯರಾತ್ರಿ ಮನೆಗೆ ಹೋಗಿದ್ದ ಚಂದನ್​! ಆಗಲೇ ಮೂಡಿತ್ತು ಅನುಮಾನ

Published On - 5:55 pm, Fri, 14 May 21

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು