AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಾಸ್ಕ್​ ಧರಿಸಿ ಹಸೆಮಣೆ ಏರಿದ ಚಂದನ್​ ಕುಮಾರ್​-ಕವಿತಾ ಗೌಡ; ಲಾಕ್​ಡೌನ್​ ಮಧ್ಯೆಯೇ ಸಿಂಪಲ್​ ವಿವಾಹ

Chandan Kumar Kavitha Gowda Marriage: ಕೊರೊನಾ ವೈರಸ್​ ಮಿತಿ ಮೀತಿ ಹರಡುತ್ತಿರುವುದರಿಂದ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಅಲ್ಲದೆ, ಮದುವೆಗೆ 40 ಮಂದಿ ಮಾತ್ರ ಅತಿಥಿಗಳು ಬರಬಹುದು ಎಂದು ಹೇಳಿದೆ. ಇದೇ ನಿಯಮದಂತೆ ಚಂದನ್​ ಜೋಡಿ ಮದುವೆ ಆಗಿದೆ.

ಮಾಸ್ಕ್​ ಧರಿಸಿ ಹಸೆಮಣೆ ಏರಿದ ಚಂದನ್​ ಕುಮಾರ್​-ಕವಿತಾ ಗೌಡ; ಲಾಕ್​ಡೌನ್​ ಮಧ್ಯೆಯೇ ಸಿಂಪಲ್​ ವಿವಾಹ
ಹಸೆಮಣೆ ಏರಿದ ಚಂದನ್​-ಕವಿತಾ
ರಾಜೇಶ್ ದುಗ್ಗುಮನೆ
| Edited By: |

Updated on:May 14, 2021 | 6:49 PM

Share

ನಟ ಚಂದನ್​ ಕುಮಾರ್​ ಹಾಗೂ ನಟಿ ಕವಿತಾ ಗೌಡ ಏಪ್ರಿಲ್​ 1ರಂದು ಎಂಗೇಜ್​ಮೆಂಟ್​ ಮಾಡಿಕೊಂಡಿದ್ದರು. ಆದರೆ, ಮದುವೆ ದಿನಾಂಕದ ಬಗ್ಗೆ ಅವರು ಅಧಿಕೃತವಾಗಿ ಘೋಷಣೆ ಮಾಡಿರಲಿಲ್ಲ. ಈಗ ಲಾಕ್​ಡೌನ್​ ಮಧ್ಯೆಯೇ ಕೊವಿಡ್​ ನಿಯಮ ಪಾಲಿಸಿ ಹಸೆಮಣೆ ಏರಿದ್ದಾರೆ. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಕೊರೊನಾ ವೈರಸ್​ ಮಿತಿಮೀರಿ ಹರಡುತ್ತಿರುವುದರಿಂದ ಸರ್ಕಾರ ಲಾಕ್​ಡೌನ್​ ಘೋಷಣೆ ಮಾಡಿದೆ. ಅಲ್ಲದೆ, ಮದುವೆಗೆ 40 ಅತಿಥಿಗಳಿಗೆ ಅವಕಾಶ ನೀಡಿ ಆದೇಶ ಹೊರಡಿಸಿದೆ. ಇದೇ ನಿಯಮದಂತೆ ಚಂದನ್​-ಕವಿತಾ ಜೋಡಿ ಮದುವೆ ಆಗಿದೆ. ಹಸೆಮಣೆ ಏರುವಾಗ ಅವರು ಮಾಸ್ಕ ಧರಿಸಿದ್ದು ವಿಶೇಷವಾಗಿತ್ತು. ಕೇವಲ ಆಪ್ತರಿಗೆ ಮಾತ್ರ ಮದುವೆಗೆ ಆಮಂತ್ರಣವಿತ್ತು.

‘ಮನೆ ಮದುವೆ, ಮದುವೆ ಮನೆ. ಗ್ಲೋರಿಯಸ್​ ಆಗಿಲ್ಲ, ಆದರೆ, ಸಂತಸದಿಂದ ತುಂಬಿದೆ ಎಂದು ಚಂದನ್ ಬರೆದುಕೊಂಡಿದ್ದಾರೆ. ಚಂದನ್​ ಮದುವೆ ಆಗಿರುವ ಫೋಟೋ ಹಾಕುತ್ತಿದ್ದಂತೆ ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಸುರಿಮಳೆ ಬಂದಿದೆ.

ಕಿರುತೆರೆ ಪ್ರೇಕ್ಷಕರ ವಲಯದಲ್ಲಿ ಸಖತ್​ ಜನಪ್ರಿಯವಾಗಿದ್ದ ‘ಲಕ್ಷ್ಮೀ ಬಾರಮ್ಮ’ ಸೀರಿಯಲ್​ನಲ್ಲಿ ಚಂದನ್​ ಕುಮಾರ್​ ಮತ್ತು ಕವಿತಾ ಜೋಡಿಯಾಗಿ ನಟಿಸಿದ್ದರು. ಆಗಿನಿಂದಲೇ ಅವರಿಬ್ಬರ ನಡುವೆ ಸ್ನೇಹ ಚಿಗುರಿತ್ತು. ನಂತರದ ದಿನಗಳಲ್ಲಿ ಅವರಿಬ್ಬರ ಆಪ್ತತೆ ಹೆಚ್ಚಾಯಿತು. ಆದರೆ ಎಂದೂ ಕೂಡ ಅವರು ತಮ್ಮ ಪ್ರೀತಿ ಬಗ್ಗೆ ಬಾಯಿ ಬಿಟ್ಟಿರಲಿಲ್ಲ. ಏಪ್ರಿಲ್​ 1ರಂದು ಕವಿತಾ ಜತೆ ಎಂಗೇಜ್​ಮೆಂಟ್​ ಮಾಡಿಕೊಳ್ಳುತ್ತಿರುವ ಬಗ್ಗೆ ಚಂದನ್​ ಕುಮಾರ್ ಮಾರ್ಚ್​ನಲ್ಲಿ ತಿಳಿಸಿದ್ದರು. ಈ ಮೂಲಕ ಪ್ರೀತಿ ವಿಚಾರವನ್ನು ಅಧಿಕೃತಗೊಳಿಸಿದ್ದರು. ಈಗ ಸಿಂಪಲ್​ ಆಗಿ ಮದುವೆ ಆಗಿ ಹೊಸಬಾಳಿಗೆ ಕಾಲಿಟ್ಟಿದ್ದಾರೆ.

ಟಿವಿ9 ಕನ್ನಡ ಡಿಜಿಟಲ್​ ಜತೆ ಚಂದನ್​ ಮೊಟ್ಟ ಮೊದಲ ಬಾರಿಗೆ ಮದುವೆ ವಿಚಾರವನ್ನು ಮಾತನಾಡಿದ್ದರು. ತೆಲುಗಿನ ‘ಸಾವಿತ್ರಮ್ಮಗಾರಿ ಅಬ್ಬಾಯಿ’ ಧಾರಾವಾಹಿಯ 500ಕ್ಕೂ ಹೆಚ್ಚು ಎಪಿಸೋಡ್​ಗಳಲ್ಲಿ ಚಂದನ್​ ನಟಿಸಿದ್ದರು. ಆ ಧಾರಾವಾಹಿಯಲ್ಲಿ ಅವರ ಪಾತ್ರ ಅಂತ್ಯವಾಗಿತ್ತು. ಅದಕ್ಕೆ ಕಾರಣ ಏನು ಎಂಬ ಬಗ್ಗೆ ಕೇಳಿದ್ದಾಗ ಮದುವೆ ವಿಚಾರ ಹೇಳಿಕೊಂಡಿದ್ದರು.  ‘ನಂಗೆ ಸ್ವಲ್ಪ ಫ್ರೀಡಂ ಬೇಕಾಗಿತ್ತು. ಮದುವೆ ಪ್ಲ್ಯಾನ್​ ಕೂಡ ನಡೆಯುತ್ತಿದೆ. ಪರ್ಸನಲ್​ ಜೀವನದ ಕಡೆಗೆ ಗಮನ ಹರಿಸಬೇಕು’ ಎಂದಿದ್ದರು.

ಇದನ್ನೂ ಓದಿ: Chandan – Kavitha: ಕವಿತಾ ಪ್ರೀತಿಗಾಗಿ ಮಧ್ಯರಾತ್ರಿ ಮನೆಗೆ ಹೋಗಿದ್ದ ಚಂದನ್​! ಆಗಲೇ ಮೂಡಿತ್ತು ಅನುಮಾನ

Published On - 5:55 pm, Fri, 14 May 21

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ