Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಸಿನಿಮಾದಲ್ಲಿ ಜೋಡಿಯಾಗಿ ನಟಿಸಲಿರುವ ನಿವೇದಿತಾ ಗೌಡ, ಚಂದನ್​ ಶೆಟ್ಟಿ

ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಜೋಡಿಯಾಗಿ ನಟಿಸಲಿರುವ ಈ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸೈಕಲಾಜಿಕಲ್​-ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾಕ್ಕೆ ಪುನೀತ್ ಶ್ರೀನಿವಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಎಲ್. ಮೋಹನ್ ಕುಮಾರ್ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಹೊಸ ಸಿನಿಮಾದಲ್ಲಿ ಜೋಡಿಯಾಗಿ ನಟಿಸಲಿರುವ ನಿವೇದಿತಾ ಗೌಡ, ಚಂದನ್​ ಶೆಟ್ಟಿ
ಜೋಡಿಯಾಗಿ ನಟಿಸಲಿರುವ ನಿವೇದಿತಾ ಗೌಡ, ಚಂದನ್​ ಶೆಟ್ಟಿ
Follow us
ಮದನ್​ ಕುಮಾರ್​
|

Updated on: Dec 11, 2023 | 5:56 PM

ಸೋಶಿಯಲ್​ ಮೀಡಿಯಾದಲ್ಲಿ ನಿವೇದಿತಾ ಗೌಡ (Niveditha Gowda) ಫೇಮಸ್​ ಆಗಿದ್ದರೆ, ಚಂದನ್​ ಶೆಟ್ಟಿ ಅವರು ಸಂಗೀತ ನಿರ್ದೇಶಕನಾಗಿ ಸ್ಯಾಂಡಲ್​ವುಡ್​ನಲ್ಲಿ ಫೇಮಸ್​ ಆಗಿದ್ದಾರೆ. ‘ಬಿಗ್​ ಬಾಸ್​ ಕನ್ನಡ’ ಶೋನಲ್ಲಿ ಪರಸ್ಪರ ಪರಿಚಯ ಆದ ಇವರಿಬ್ಬರು ನಂತರ ಪತಿ-ಪತ್ನಿ ಆದರು. ಈಗ ಸಿನಿಮಾದಲ್ಲೂ ಅವರಿಗೆ ಜೋಡಿಯಾಗಿ ನಟಿಸುವ ಅವಕಾಶ ಸಿಕ್ಕಿದೆ. ಈ ಬಗ್ಗೆ ಸುದ್ದಿ ಬಹಿರಂಗ ಆಗಿದೆ. ಇದೇ ಮೊದಲ ಬಾರಿಗೆ ಸಿನಿಮಾದಲ್ಲಿ ಚಂದನ್​ ಶೆಟ್ಟಿ (Chandan Shetty) ಮತ್ತು ನಿವೇದಿತಾ ಗೌಡ ಅವರು ಜೋಡಿಯಾಗಿ ನಟಿಸುತ್ತಿರುವುದರಿಂದ ಈ ಚಿತ್ರ ವಿಶೇಷ ಎನಿಸಿಕೊಳ್ಳಲಿದೆ.

ಬಿಗ್ ಬಾಸ್ ಟ್ರೋಫಿ ಗೆದ್ದ ಬಳಿಕ ಚಂದನ್​ ಶೆಟ್ಟಿ ಅವರ ಖ್ಯಾತಿ ಹೆಚ್ಚಾಯಿತು. ಗಾಯಕನಾಗಿ, ಸಂಗೀತ ನಿರ್ದೇಶಕನಾಗಿ ಮಾತ್ರವಲ್ಲದೇ ನಟನಾಗಿಯೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಅದೇ ರೀತಿ, ನಿವೇದಿತಾ ಗೌಡ ಅವರು ಬಿಗ್​ ಬಾಸ್​ ಮಾತ್ರವಲ್ಲದೇ ಬೇರೆ ಬೇರೆ ಶೋಗಳಲ್ಲಿ ಕಾಣಿಸಿಕೊಂಡು ಜನಮನ ಗೆದ್ದರು. ರೀಲ್ಸ್​ ಮೂಲಕ ಅವರು ಅಭಿಮಾನಿಗಳನ್ನು ರಂಜಿಸುತ್ತಾರೆ. ಈಗ ಇದೇ ಮೊದಲ ಬಾರಿಗೆ ನಿವೇದಿತಾ ಗೌಡ ಮತ್ತು ಚಂದನ್​ ಶೆಟ್ಟಿ ಅವರು ಸಿನಿಮಾದಲ್ಲಿ ತೆರೆ ಹಂಚಿಕೊಳ್ಳಲು ಸಜ್ಜಾಗಿದ್ದಾರೆ.

ಇದನ್ನೂ ಓದಿ: ರೀಲ್ಸ್​ನಲ್ಲಿ ಲಕ್ಷಾಂತರ ವೀವ್ಸ್​ ಪಡೆಯುವ ಸುರ ಸುಂದರಿ ನಿವೇದಿತಾ ಗೌಡ

ಈ ಸೆಲೆಬ್ರಿಟಿ ಜೋಡಿ ನಟಿಸಲಿರುವ ಸಿನಿಮಾಗೆ ಇನ್ನೂ ಶೀರ್ಷಿಕೆ ಇಟ್ಟಿಲ್ಲ. ಸೈಕಲಾಜಿಕಲ್​-ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾಕ್ಕೆ ಪುನೀತ್ ಶ್ರೀನಿವಾಸ್ ಅವರು ನಿರ್ದೇಶನ ಮಾಡುತ್ತಿದ್ದಾರೆ. ಕಥೆ ಮತ್ತು ಚಿತ್ರಕಥೆ ಕೂಡ ಅವರೇ ಬರೆದಿದ್ದಾರೆ. ಈ ಮೊದಲು ಅನೇಕ ಸಿನಿಮಾಗಳ ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡಿದ ಅನುಭವ ಅವರಿಗೆ ಇದೆ. ಈಗ ಸ್ವತಂತ್ರ ನಿರ್ದೇಶನದಲ್ಲಿ ಮೊದಲ ಸಿನಿಮಾವನ್ನು ಕೈಗೆತ್ತಿಕೊಂಡಿದ್ದಾರೆ.

ಇದನ್ನೂ ಓದಿ: ಸೆನ್ಸೇಷನ್​ ಸೃಷ್ಟಿಸುವ ಸುಂದರಿ ನಿವೇದಿತಾ ಗೌಡ ಫೋಟೋಗಳು ಇಲ್ಲಿವೆ ನೋಡಿ..

ಎಂ.ಎಸ್. ತ್ಯಾಗರಾಜ್ ಅವರು ಈ ಸಿನಿಮಾಗೆ ಸಂಗೀತ ಸಂಯೋಜನೆ ಮಾಡುತ್ತಿದ್ದಾರೆ. ಛಾಯಾಗ್ರಹಣದ ಜವಾಬ್ದಾರಿ ಕರುಣಾಕರ್ ಅವರದ್ದು. ಸದ್ಯದಲ್ಲೇ ಚಿತ್ರದ ಶೀರ್ಷಿಕೆ ಏನು ಎಂಬುದು ಬಹಿರಂಗ ಆಗಲಿದೆ. 2024ರ ಜನವರಿಯಲ್ಲಿ ಶೂಟಿಂಗ್​ ಆರಂಭ ಆಗಲಿದೆ. ನಿರ್ದೇಶಕ ಪುನೀತ್ ಶ್ರೀನಿವಾಸ್ ಅವರು ಚೊಚ್ಚಲ ಸಿನಿಮಾದಲ್ಲೇ ವಿಭಿನ್ನ ಕಾನ್ಸೆಪ್ಟ್ ಇರುವ ಕಥೆಯನ್ನು ಹೇಳಲಿದ್ದಾರೆ. ‘ಶ್ರೀ ಚೌಡೇಶ್ಬರಿ ಸಿನಿ ಕ್ರಿಯೇಶನ್ಸ್’ ಮೂಲಕ ಈ ಸಿನಿಮಾವನ್ನು ಎಲ್. ಮೋಹನ್ ಕುಮಾರ್ ಅವರು ನಿರ್ಮಾಣ ಮಾಡುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಮ್ಯಾನ್ಮಾರ್​ಗೆ ಸಹಾಯ ಮಾಡುವ ಆಪರೇಷನ್​ಗೆ ಸರ್ಕಾರ ದೇವರ ಹೆಸರಿಟ್ಟಿದ್ದೇಕೆ?
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಕೆಲ ಸೆಕೆಂಡ್​​ಗಳ ರೀಲ್ಸ್​ಗೆ ಬಳಸಿದ ಮಚ್ಚು ಫೈಬರ್​ದ್ದಾಗಿತ್ತು: ವಿನಯ್ ಗೌಡ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಯುಗಾದಿ: ಕೆಆರ್​ ಮಾರುಕಟ್ಟೆಯಲ್ಲಿ ಗ್ರಾಹಕರಿಗೆ ಶಾಕ್, ಹೂವಿನ ದರ ಏರಿಕೆ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಬಿಜೆಪಿ ಎಲ್ಲ ಭಾಷೆಯನ್ನೂ ಗೌರವಿಸುತ್ತದೆ;WITT ಶೃಂಗಸಭೆಯಲ್ಲಿ ಕಿಶನ್ ರೆಡ್ಡಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ಯತ್ನಾಳ್ ಒಬ್ಬ ಒಳ್ಳೆಯ ನಾಯಕ ಅನ್ನೋದ್ರಲ್ಲಿ ಎರಡು ಮಾತಿಲ್ಲ: ತಂಗಡಿಗಿ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ವಿಶ್ವದ ಶೇಕಡಾ 60 ರಷ್ಟು ಖನಿಜಗಳು ನಮ್ಮ ದೇಶದಲ್ಲಿವೆ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಪಕ್ಷದ ಸಂದೇಶ ಮತ್ತು ಸೂಚನೆಗಷ್ಟೇ ನಾವು ಸೀಮಿತವಾಗಿರಬೇಕು: ಸೋಮಣ್ಣ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಬಾಲಕನನ್ನು ಬಲಿ ಪಡೆದ ಬಿಬಿಎಂಪಿ ಲಾರಿಗೆ ಬೆಂಕಿ
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು
ಭಾರತಕ್ಕೆ ತಕ್ಷಣವೇ ವಿಶ್ವಸಂಸ್ಥೆಯ ಸದಸ್ಯತ್ವ ನೀಡಬೇಕು