AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎರಡನೇ ಮದುವೆ ಆಗ್ತೀನಿ’; ಖುಷಿ ಸುದ್ದಿ ಕೊಟ್ಟ ಚಂದನ್ ಶೆಟ್ಟಿ

ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡರಿಂದ ವಿಚ್ಛೇದನ ಪಡೆದ ನಂತರ, ತಮ್ಮ ಎರಡನೇ ಮದುವೆಯ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನ ಒಂದರಲ್ಲಿ ಮಾತನಾಡಿದ, ಅವರು 2027ರ ವೇಳೆಗೆ ವಿವಾಹವಾಗುವುದಾಗಿ ತಿಳಿಸಿದ್ದಾರೆ. ಸದ್ಯ ಹುಡುಗಿ ನೋಡುವ ಪ್ರಕ್ರಿಯೆ ಪ್ರಾರಂಭವಾಗಿಲ್ಲ ಎಂದಿದ್ದು, ವೈಬ್ ಮ್ಯಾಚ್​ಗಾಗಿ ಕಾಯುತ್ತಿದ್ದಾರೆ. 

‘ಎರಡನೇ ಮದುವೆ ಆಗ್ತೀನಿ’; ಖುಷಿ ಸುದ್ದಿ ಕೊಟ್ಟ ಚಂದನ್ ಶೆಟ್ಟಿ
ಚಂದನ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Apr 21, 2026 | 10:37 AM

Share

ಸಂಗೀತ ಸಂಯೋಜಕ, ರ‍್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಅವರು ಈ ಮೊದಲು ನಿವೇದಿತಾ ಗೌಡ ಅವರನ್ನು ಮದುವೆ ಆಗಿದ್ದರು. ಬಿಗ್ ಬಾಸ್​​ನಲ್ಲಿ ಆದ ಪರಿಚಯ ಹಸೆಮಣೆವರೆಗೆ ಇವರನ್ನು ತಂದು ನಿಲ್ಲಿಸಿತು. ಮದುವೆ ಆಗಿ ಕೆಲವೇ ವರ್ಷಗಳಲ್ಲಿ ಇವರು ಬೇರೆ ಆದರು. ಈಗ ಇಬ್ಬರೂ ತಮ್ಮ ತಮ್ಮ ಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. ಈಗ ಚಂದನ್ ಶೆಟ್ಟಿ ಅವರು ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ. ವಿವಾಹ ಯಾವಾಗ ಎಂಬ ವಿಷಯ ರಿವೀಲ್ ಮಾಡಿದ್ದಾರೆ.

ಚಿತ್ರರಂಗದ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ ಸಾಮಾನ್ಯ ಎಂಬಂತಾಗಿದೆ. ಇದನ್ನು ಮುಚ್ಚಿಟ್ಟು ಯಾರೂ ದೂರ ಹೋಗುತ್ತಿಲ್ಲ. ಈ ಬಗ್ಗೆ ಸೆಲೆಬ್ರಿಟಿಗಳು ಓಪನ್ ಆಗಿ ಮಾತನಾಡುತ್ತಿದ್ದಾರೆ. ಚಂದನ್ ಹಾಗೂ ನಿವೇದಿತಾ ಡಿವೋರ್ಸ್ ಆದ ಬಳಿಕ ಇಬ್ಬರೂ ಸುದ್ದಿಗೋಷ್ಠಿ ನಡೆಸಿ ವಿಚ್ಛೇದನದ ಬಗ್ಗೆ ಸ್ಪಷ್ಟನೆ ಕೊಟ್ಟರು. ಹೊಂದಾಣಿಕೆ ಸಾಧ್ಯವಾಗದ ಕಾರಣ ಡಿವೋರ್ಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಈಗ ಚಂದನ್ ಎರಡನೇ ಮದುವೆ ಬಗ್ಗೆ ಆಲೋಚಿಸಿದ್ದಾರೆ.

ವಾಹಿನ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಚಂದನ್ ಮಾತನಾಡಿದ್ದಾರೆ. ‘ಚಂದನ್ ಎರಡನೇ ಮದುವೆ ಆಗ್ತಾರಾ’ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ಮದುವೆ ಆಗುತ್ತೇನೆ. ಆದರೆ, ಈ ವರ್ಷ ಅಲ್ಲ. ಒಂದು ಒಳ್ಳೆಯ ಹುಡುಗಿ ನೋಡಿ ಮುಂದಿನ ವರ್ಷ ವಿವಾಹ ಆಗುತ್ತೇನೆ. ಹುಡುಗಿ ನೋಡುವ ಪ್ರಕ್ರಿಯೆ ಶುರುವಾಗಿಲ್ಲ’ ಎಂದರು ಅವರು.

‘ವೈಬ್ ಮ್ಯಾಚ್ ಆದರೆ ಸಾಕು. ಈ ಬಗ್ಗೆ ಈಗ ಏನನನ್ನೂ ಹೇಳೋಕೆ ಇಷ್ಟಪಡಲ್ಲ. ಮುಂದಿನ ವರ್ಷ ಈ ಬಗ್ಗೆ ಮಾತನಾಡುತ್ತೇನೆ’ ಎಂದು ಚಂದನ್ ಹೇಳಿದ್ದಾರೆ. ಅಂದರೆ, 2027ರ ವೇಳೆಗೆ ಚಂದನ್ ಶೆಟ್ಟಿ ಎರಡನೇ ಬಾರಿಗೆ ಹಸೆಮಣೆ ಏರೋದು ಫಿಕ್ಸ್ ಎಂದು ಹೇಳಲಾಗುತ್ತಾ ಇದೆ. ಅವರು ಮದುವೆ ಆಗುವ ಹುಡುಗಿ ಹೇಗಿರುತ್ತಾರೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ

ಚಂದನ್ ಶೆಟ್ಟಿ ಅವರು ಸದ್ಯ ‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಸುಜಯ್ ಶಾಸ್ತ್ರಿ ನಿರ್ದೇಶನ ಇದೆ. ಏಪ್ರಿಲ್ 24ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಅರ್ಚನಾ ಕೊಟ್ಟಿಗೆ ಚಿತ್ರಕ್ಕೆ ನಾಯಕಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!