AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎರಡನೇ ಮದುವೆ ಆಗ್ತೀನಿ’; ಖುಷಿ ಸುದ್ದಿ ಕೊಟ್ಟ ಚಂದನ್ ಶೆಟ್ಟಿ

ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡರಿಂದ ವಿಚ್ಛೇದನ ಪಡೆದ ನಂತರ, ತಮ್ಮ ಎರಡನೇ ಮದುವೆಯ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನ ಒಂದರಲ್ಲಿ ಮಾತನಾಡಿದ, ಅವರು 2027ರ ವೇಳೆಗೆ ವಿವಾಹವಾಗುವುದಾಗಿ ತಿಳಿಸಿದ್ದಾರೆ. ಸದ್ಯ ಹುಡುಗಿ ನೋಡುವ ಪ್ರಕ್ರಿಯೆ ಪ್ರಾರಂಭವಾಗಿಲ್ಲ ಎಂದಿದ್ದು, ವೈಬ್ ಮ್ಯಾಚ್​ಗಾಗಿ ಕಾಯುತ್ತಿದ್ದಾರೆ. 

‘ಎರಡನೇ ಮದುವೆ ಆಗ್ತೀನಿ’; ಖುಷಿ ಸುದ್ದಿ ಕೊಟ್ಟ ಚಂದನ್ ಶೆಟ್ಟಿ
ಚಂದನ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Apr 21, 2026 | 10:37 AM

Share

ಸಂಗೀತ ಸಂಯೋಜಕ, ರ‍್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಅವರು ಈ ಮೊದಲು ನಿವೇದಿತಾ ಗೌಡ ಅವರನ್ನು ಮದುವೆ ಆಗಿದ್ದರು. ಬಿಗ್ ಬಾಸ್​​ನಲ್ಲಿ ಆದ ಪರಿಚಯ ಹಸೆಮಣೆವರೆಗೆ ಇವರನ್ನು ತಂದು ನಿಲ್ಲಿಸಿತು. ಮದುವೆ ಆಗಿ ಕೆಲವೇ ವರ್ಷಗಳಲ್ಲಿ ಇವರು ಬೇರೆ ಆದರು. ಈಗ ಇಬ್ಬರೂ ತಮ್ಮ ತಮ್ಮ ಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. ಈಗ ಚಂದನ್ ಶೆಟ್ಟಿ ಅವರು ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ. ವಿವಾಹ ಯಾವಾಗ ಎಂಬ ವಿಷಯ ರಿವೀಲ್ ಮಾಡಿದ್ದಾರೆ.

ಚಿತ್ರರಂಗದ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ ಸಾಮಾನ್ಯ ಎಂಬಂತಾಗಿದೆ. ಇದನ್ನು ಮುಚ್ಚಿಟ್ಟು ಯಾರೂ ದೂರ ಹೋಗುತ್ತಿಲ್ಲ. ಈ ಬಗ್ಗೆ ಸೆಲೆಬ್ರಿಟಿಗಳು ಓಪನ್ ಆಗಿ ಮಾತನಾಡುತ್ತಿದ್ದಾರೆ. ಚಂದನ್ ಹಾಗೂ ನಿವೇದಿತಾ ಡಿವೋರ್ಸ್ ಆದ ಬಳಿಕ ಇಬ್ಬರೂ ಸುದ್ದಿಗೋಷ್ಠಿ ನಡೆಸಿ ವಿಚ್ಛೇದನದ ಬಗ್ಗೆ ಸ್ಪಷ್ಟನೆ ಕೊಟ್ಟರು. ಹೊಂದಾಣಿಕೆ ಸಾಧ್ಯವಾಗದ ಕಾರಣ ಡಿವೋರ್ಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಈಗ ಚಂದನ್ ಎರಡನೇ ಮದುವೆ ಬಗ್ಗೆ ಆಲೋಚಿಸಿದ್ದಾರೆ.

ವಾಹಿನ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಚಂದನ್ ಮಾತನಾಡಿದ್ದಾರೆ. ‘ಚಂದನ್ ಎರಡನೇ ಮದುವೆ ಆಗ್ತಾರಾ’ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ಮದುವೆ ಆಗುತ್ತೇನೆ. ಆದರೆ, ಈ ವರ್ಷ ಅಲ್ಲ. ಒಂದು ಒಳ್ಳೆಯ ಹುಡುಗಿ ನೋಡಿ ಮುಂದಿನ ವರ್ಷ ವಿವಾಹ ಆಗುತ್ತೇನೆ. ಹುಡುಗಿ ನೋಡುವ ಪ್ರಕ್ರಿಯೆ ಶುರುವಾಗಿಲ್ಲ’ ಎಂದರು ಅವರು.

‘ವೈಬ್ ಮ್ಯಾಚ್ ಆದರೆ ಸಾಕು. ಈ ಬಗ್ಗೆ ಈಗ ಏನನನ್ನೂ ಹೇಳೋಕೆ ಇಷ್ಟಪಡಲ್ಲ. ಮುಂದಿನ ವರ್ಷ ಈ ಬಗ್ಗೆ ಮಾತನಾಡುತ್ತೇನೆ’ ಎಂದು ಚಂದನ್ ಹೇಳಿದ್ದಾರೆ. ಅಂದರೆ, 2027ರ ವೇಳೆಗೆ ಚಂದನ್ ಶೆಟ್ಟಿ ಎರಡನೇ ಬಾರಿಗೆ ಹಸೆಮಣೆ ಏರೋದು ಫಿಕ್ಸ್ ಎಂದು ಹೇಳಲಾಗುತ್ತಾ ಇದೆ. ಅವರು ಮದುವೆ ಆಗುವ ಹುಡುಗಿ ಹೇಗಿರುತ್ತಾರೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ

ಚಂದನ್ ಶೆಟ್ಟಿ ಅವರು ಸದ್ಯ ‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಸುಜಯ್ ಶಾಸ್ತ್ರಿ ನಿರ್ದೇಶನ ಇದೆ. ಏಪ್ರಿಲ್ 24ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಅರ್ಚನಾ ಕೊಟ್ಟಿಗೆ ಚಿತ್ರಕ್ಕೆ ನಾಯಕಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಹೊಳೆ ದಾಟೋಕೆ ದೊಣ್ಣೆ‌ನಾಯಕನ ಅಪ್ಪಣೆ ಬೇಕೆ: ಖರ್ಗೆಗೆ ಜೋಶಿ ತಿರುಗೇಟು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಎಸ್ ಜಾನಕಿ ಅವರಿಗಿದ್ದ ನೋವೇನು? ಭಾರತಿ ವಿಷ್ಣುವರ್ಧನ್ ಮಾತು
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
ಜಾನಕಮ್ಮ ಸ್ಮಾರಕಕ್ಕೆ ಬೇಡಿಕೆ: ಶೀಘ್ರದಲ್ಲೇ ತೀರ್ಮಾನ ಮಾಡ್ತೀವಿ ಎಂದ ಯತೀಂದ್
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
‘ಜಾನಕಿ ಹಾಡು ಕೇಳುತ್ತಲೇ ನಮ್ಮ ತಾಯಿ ಪ್ರಾಣ ಬಿಟ್ಟಿದ್ದರು’: ಸಾಧು ಕೋಕಿಲ
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಪ್ರವೀಣ್ ನೆಟ್ಟಾರು ಪ್ರಕರಣ: NIA ಬಲೆಗೆ ಬಿದ್ದ ಮೋಸ್ಟ್ ವಾಂಟೆಡ್ ಆರೋಪಿಗಳು
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್. ಜಾನಕಿ ಪಾರ್ಥಿವ ಶರೀರ ನೋಡಿ ಬಿಕ್ಕಿ ಬಿಕ್ಕಿ ಅತ್ತ ವಾಣಿ ಹರಿಕೃಷ್ಣ
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್.ಜಾನಕಿಯವರ ಅಂತಿಮ ದರ್ಶನ ಪಡೆದು ಭಾವುಕರಾದ ಗಾಯಕ ವಿಜಯ್ ಪ್ರಕಾಶ್
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಎಸ್​​. ಜಾನಕಿ ನಿಧನಕ್ಕೆ ಲಂಡನ್​​ನಿಂದಲೇ ಇಳಯರಾಜ್ ಸಂತಾಪ
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ಜಾನಕಮ್ಮಗೆ ಮೈಸೂರಿನ ನಂಟು ಹೇಗೆ? ನವೀನ್ ಕೇರ್​ಟೇಕರ್ ಆಗಿದ್ಯಾಕೆ?
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಯುವ ಕಾಂಗ್ರೆಸ್​​ನಿಂದ ಸೈಕಲ್ ಜಾಥಾ