AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಎರಡನೇ ಮದುವೆ ಆಗ್ತೀನಿ’; ಖುಷಿ ಸುದ್ದಿ ಕೊಟ್ಟ ಚಂದನ್ ಶೆಟ್ಟಿ

ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರು ನಿವೇದಿತಾ ಗೌಡರಿಂದ ವಿಚ್ಛೇದನ ಪಡೆದ ನಂತರ, ತಮ್ಮ ಎರಡನೇ ಮದುವೆಯ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನ ಒಂದರಲ್ಲಿ ಮಾತನಾಡಿದ, ಅವರು 2027ರ ವೇಳೆಗೆ ವಿವಾಹವಾಗುವುದಾಗಿ ತಿಳಿಸಿದ್ದಾರೆ. ಸದ್ಯ ಹುಡುಗಿ ನೋಡುವ ಪ್ರಕ್ರಿಯೆ ಪ್ರಾರಂಭವಾಗಿಲ್ಲ ಎಂದಿದ್ದು, ವೈಬ್ ಮ್ಯಾಚ್​ಗಾಗಿ ಕಾಯುತ್ತಿದ್ದಾರೆ. 

‘ಎರಡನೇ ಮದುವೆ ಆಗ್ತೀನಿ’; ಖುಷಿ ಸುದ್ದಿ ಕೊಟ್ಟ ಚಂದನ್ ಶೆಟ್ಟಿ
ಚಂದನ್ ಶೆಟ್ಟಿ
ರಾಜೇಶ್ ದುಗ್ಗುಮನೆ
|

Updated on: Apr 21, 2026 | 10:37 AM

Share

ಸಂಗೀತ ಸಂಯೋಜಕ, ರ‍್ಯಾಪರ್ ಹಾಗೂ ನಟ ಚಂದನ್ ಶೆಟ್ಟಿ ಅವರು ಈ ಮೊದಲು ನಿವೇದಿತಾ ಗೌಡ ಅವರನ್ನು ಮದುವೆ ಆಗಿದ್ದರು. ಬಿಗ್ ಬಾಸ್​​ನಲ್ಲಿ ಆದ ಪರಿಚಯ ಹಸೆಮಣೆವರೆಗೆ ಇವರನ್ನು ತಂದು ನಿಲ್ಲಿಸಿತು. ಮದುವೆ ಆಗಿ ಕೆಲವೇ ವರ್ಷಗಳಲ್ಲಿ ಇವರು ಬೇರೆ ಆದರು. ಈಗ ಇಬ್ಬರೂ ತಮ್ಮ ತಮ್ಮ ಜೀವನವನ್ನು ನಡೆಸಿಕೊಂಡು ಹೋಗುತ್ತಿದ್ದಾರೆ. ಈಗ ಚಂದನ್ ಶೆಟ್ಟಿ ಅವರು ಎರಡನೇ ಮದುವೆ ಬಗ್ಗೆ ಮಾತನಾಡಿದ್ದಾರೆ. ವಿವಾಹ ಯಾವಾಗ ಎಂಬ ವಿಷಯ ರಿವೀಲ್ ಮಾಡಿದ್ದಾರೆ.

ಚಿತ್ರರಂಗದ ಸೆಲೆಬ್ರಿಟಿಗಳಲ್ಲಿ ವಿಚ್ಛೇದನ ಸಾಮಾನ್ಯ ಎಂಬಂತಾಗಿದೆ. ಇದನ್ನು ಮುಚ್ಚಿಟ್ಟು ಯಾರೂ ದೂರ ಹೋಗುತ್ತಿಲ್ಲ. ಈ ಬಗ್ಗೆ ಸೆಲೆಬ್ರಿಟಿಗಳು ಓಪನ್ ಆಗಿ ಮಾತನಾಡುತ್ತಿದ್ದಾರೆ. ಚಂದನ್ ಹಾಗೂ ನಿವೇದಿತಾ ಡಿವೋರ್ಸ್ ಆದ ಬಳಿಕ ಇಬ್ಬರೂ ಸುದ್ದಿಗೋಷ್ಠಿ ನಡೆಸಿ ವಿಚ್ಛೇದನದ ಬಗ್ಗೆ ಸ್ಪಷ್ಟನೆ ಕೊಟ್ಟರು. ಹೊಂದಾಣಿಕೆ ಸಾಧ್ಯವಾಗದ ಕಾರಣ ಡಿವೋರ್ಸ್ ಮಾಡಿಕೊಳ್ಳುತ್ತಿರುವುದಾಗಿ ಹೇಳಿದ್ದರು. ಈಗ ಚಂದನ್ ಎರಡನೇ ಮದುವೆ ಬಗ್ಗೆ ಆಲೋಚಿಸಿದ್ದಾರೆ.

ವಾಹಿನ ಒಂದಕ್ಕೆ ನೀಡಿದ ಸಂದರ್ಶನದಲ್ಲಿ ಚಂದನ್ ಮಾತನಾಡಿದ್ದಾರೆ. ‘ಚಂದನ್ ಎರಡನೇ ಮದುವೆ ಆಗ್ತಾರಾ’ ಎಂದು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಅವರು, ‘ಮದುವೆ ಆಗುತ್ತೇನೆ. ಆದರೆ, ಈ ವರ್ಷ ಅಲ್ಲ. ಒಂದು ಒಳ್ಳೆಯ ಹುಡುಗಿ ನೋಡಿ ಮುಂದಿನ ವರ್ಷ ವಿವಾಹ ಆಗುತ್ತೇನೆ. ಹುಡುಗಿ ನೋಡುವ ಪ್ರಕ್ರಿಯೆ ಶುರುವಾಗಿಲ್ಲ’ ಎಂದರು ಅವರು.

‘ವೈಬ್ ಮ್ಯಾಚ್ ಆದರೆ ಸಾಕು. ಈ ಬಗ್ಗೆ ಈಗ ಏನನನ್ನೂ ಹೇಳೋಕೆ ಇಷ್ಟಪಡಲ್ಲ. ಮುಂದಿನ ವರ್ಷ ಈ ಬಗ್ಗೆ ಮಾತನಾಡುತ್ತೇನೆ’ ಎಂದು ಚಂದನ್ ಹೇಳಿದ್ದಾರೆ. ಅಂದರೆ, 2027ರ ವೇಳೆಗೆ ಚಂದನ್ ಶೆಟ್ಟಿ ಎರಡನೇ ಬಾರಿಗೆ ಹಸೆಮಣೆ ಏರೋದು ಫಿಕ್ಸ್ ಎಂದು ಹೇಳಲಾಗುತ್ತಾ ಇದೆ. ಅವರು ಮದುವೆ ಆಗುವ ಹುಡುಗಿ ಹೇಗಿರುತ್ತಾರೆ ಎಂಬ ಕುತೂಹಲ ಮೂಡಿದೆ.

ಇದನ್ನೂ ಓದಿ: ಅಣ್ಣಾವ್ರ ಹುಟ್ಟುಹಬ್ಬದ ದಿನ ರಿಲೀಸ್ ಆಗಲಿದೆ ಚಂದನ್ ಶೆಟ್ಟಿ ಹೊಸ ಸಿನಿಮಾ

ಚಂದನ್ ಶೆಟ್ಟಿ ಅವರು ಸದ್ಯ ‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾಗೆ ಸುಜಯ್ ಶಾಸ್ತ್ರಿ ನಿರ್ದೇಶನ ಇದೆ. ಏಪ್ರಿಲ್ 24ರಂದು ಸಿನಿಮಾ ರಿಲೀಸ್ ಆಗುತ್ತಿದೆ. ಅರ್ಚನಾ ಕೊಟ್ಟಿಗೆ ಚಿತ್ರಕ್ಕೆ ನಾಯಕಿ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?