AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೇದಿತಾ ಗೌಡ ತುಟಿಗೆ ಚಂದನ್ ಶೆಟ್ಟಿ ಮುತ್ತಿಟ್ಟ ವಿಡಿಯೋ ವೈರಲ್; ನೆಟ್ಟಿಗರಿಂದ ಟೀಕೆ

ನಿವೇದಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸಮಯ ಸಿಕ್ಕಾಗೆಲ್ಲ ಅವರು ರೀಲ್ಸ್ ಮಾಡುತ್ತಾರೆ. ಅವರು ಹಂಚಿಕೊಳ್ಳುವ ಫೋಟೋ ಹಾಗೂ ವಿಡಿಯೋಗಳನ್ನು ನೋಡೋಕೆ ಫ್ಯಾನ್ಸ್​ಗೂ ಸಾಕಷ್ಟು ಇಷ್ಟ.

ನಿವೇದಿತಾ ಗೌಡ ತುಟಿಗೆ ಚಂದನ್ ಶೆಟ್ಟಿ ಮುತ್ತಿಟ್ಟ ವಿಡಿಯೋ ವೈರಲ್; ನೆಟ್ಟಿಗರಿಂದ ಟೀಕೆ
ಚಂದನ್​-ನಿವೇದಿತಾ
TV9 Web
| Edited By: |

Updated on: Oct 03, 2022 | 5:52 PM

Share

ಬಿಗ್ ಬಾಸ್ (Bigg Boss)​ ಖ್ಯಾತಿಯ ನಿವೇದಿತಾ ಗೌಡ (Niveditha Gowda) ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ‘ಬಿಗ್ ಬಾಸ್’ ಮೂಲಕ ಖ್ಯಾತಿ ಹೆಚ್ಚಿಸಿಕೊಂಡರು. ಇಬ್ಬರಿಗೂ ಪ್ರೀತಿ ಹುಟ್ಟೋಕೆ ಬಿಗ್ ಬಾಸ್ ವೇದಿಕೆ ಆಯಿತು. ‘ನಿವೇದಿತಾ ಚಿಕ್ಕ ಮಕ್ಕಳಂತೆ ಆಡುತ್ತಾರೆ’ ಎಂಬುದು ಕೆಲವರ ಅಭಿಪ್ರಾಯ. ಚಂದನ್ ಶೆಟ್ಟಿ ಅವರ ಮನಸ್ಥಿತಿ ಬೇರೆ ತರಹದ್ದು. ‘ಇಬ್ಬರೂ ಮದುವೆ ಆದರೆ ಸುಖವಾಗಿ ಇರುವುದಿಲ್ಲ’ ಎಂದು ಅನೇಕರು ಭವಿಷ್ಯ ನುಡಿದಿದ್ದೂ ಇದೆ. ಆದರೆ, ಈ ಜೋಡಿ ಅದನ್ನು ಸುಳ್ಳು ಮಾಡಿದೆ. ಮದುವೆ ಆಗಿ ಇಬ್ಬರೂ ಹಾಯಾಗಿ ಸಂಸಾರ ನಡೆಸುತ್ತಿದ್ದಾರೆ. ಈಗ ನಿವೇದಿತಾ ಹಂಚಿಕೊಂಡಿರುವ ಹೊಸ ವಿಡಿಯೋ ಸಖತ್ ವೈರಲ್ ಆಗಿದೆ.

ನಿವೇದಿತಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸಮಯ ಸಿಕ್ಕಾಗೆಲ್ಲ ಅವರು ರೀಲ್ಸ್ ಮಾಡುತ್ತಾರೆ. ಅವರು ಹಂಚಿಕೊಳ್ಳುವ ಫೋಟೋ ಹಾಗೂ ವಿಡಿಯೋಗಳನ್ನು ನೋಡೋಕೆ ಫ್ಯಾನ್ಸ್​ಗೂ ಸಾಕಷ್ಟು ಇಷ್ಟ. ಆದರೆ, ಒಂದು ವರ್ಗದ ಜನರು ಈ ಬಗ್ಗೆ ಟೀಕೆ ಮಾಡುತ್ತಾರೆ. ಈಗ ನಿವೇದಿತಾ ಹೊಸ ರೀಲ್ಸ್​ ಹಂಚಿಕೊಂಡಿದ್ದಾರೆ. ಇದರಲ್ಲಿ ಚಂದನ್ ಅವರು ನಿವೇದಿತಾ ತುಟಿಗೆ ಮುತ್ತಿಟ್ಟಿದ್ದಾರೆ.

ನಿವೇದಿತಾ ಹಾಗೂ ಚಂದನ್ ಡ್ಯಾನ್ಸ್ ಮಾಡಿದ್ದಾರೆ. ಡ್ಯಾನ್ಸ್ ಮಾಡುತ್ತಾ ಚಂದನ್ ಅವರು ನಿವೇದಿತಾ ತುಟಿಗೆ ಕಿಸ್ ಮಾಡುತ್ತಾರೆ. ಆ ರೀತಿಯಲ್ಲಿ ರೀಲ್ಸ್ ಇದೆ. ಕೆಲವರು ನಿವೇದಿತಾ ಹಾಗೂ ಚಂದನ್ ಅವರ ಡ್ಯಾನ್ಸ್​ ಅನ್ನು ಹೊಗಳಿದ್ದಾರೆ. ಇನ್ನೂ ಕೆಲವರು ತೆಗಳಿದ್ದಾರೆ. ‘ಈ ರೀತಿಯ ವಿಡಿಯೋಗಳನ್ನು ಆನ್​ಲೈನ್​ಲ್ಲಿ ಪೋಸ್ಟ್ ಮಾಡುವ ಅವಶ್ಯಕತೆ ಏನಿದೆ’ ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ‘ನಿವೇದಿತಾನ ಮೀಟ್ ಮಾಡೋಕೆ ಆಗುತ್ತಿಲ್ಲ’ ಎಂದ ಚಂದನ್ ಶೆಟ್ಟಿ

ಇತ್ತೀಚೆಗೆ ಅನೇಕ ಸೆಲೆಬ್ರಿಟಿಗಳು ತಮ್ಮದೇ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ನಿವೇದಿತಾ ಕೂಡ ಇದೇ ಟ್ರೆಂಡ್​​ ಫಾಲೋ ಮಾಡಿದ್ದಾರೆ. ನಿವೇದಿತಾ ಅವರು ತಮ್ಮದೇ ಯೂಟ್ಯೂಬ್ ಚಾನೆಲ್ ಆರಂಭಿಸಿದ್ದಾರೆ. ಅಲ್ಲಿ ತಮ್ಮ ದಿಚರಿಯ ಬಗ್ಗೆ ಅಪ್​ಡೇಟ್ ನೀಡುತ್ತಾರೆ. ವಿಶೇಷ ಅಡುಗೆಗಳನ್ನು ಮಾಡುವ ನಿವೇದಿತಾ ಅದರ ವಿಡಿಯೋಗಳನ್ನು ಯೂಟ್ಯೂಬ್ ಮೂಲಕ ಹಂಚಿಕೊಳ್ಳುತ್ತಾರೆ. ಅವರಿಗೆ ಸಿಗುವ ವೀವ್ಸ್​ನಿಂದ ಹಣ ಸಿಗುತ್ತಿದೆ.

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!