AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನ್​ ಶೆಟ್ಟಿ ಕಂಠದಲ್ಲಿ ‘ಇಂಟರ್​ವಲ್​’ ಸಿನಿಮಾ ಸಾಂಗ್​; ಇದು ಗಣೇಶನ ಹಾಡು

ಶಶಿರಾಜ್ ಅವರು ‘ಇಂಟರ್​ವಲ್​’ ಸಿನಿಮಾಗೆ ಹೀರೋ ಆಗಿದ್ದಾರೆ. ಗಣೇಶ ಚರ್ತುರ್ಥಿ ಪ್ರಯುಕ್ತ ಈ ಸಿನಿಮಾದ ಹೊಸ ಸಾಂಗ್​ ರಿಲೀಸ್​ ಆಗಿದೆ. ಚಂದನ್​ ಶೆಟ್ಟಿ ಅವರ ಕಂಠದಲ್ಲಿ ಈ ಹಾಡು ಮೂಡಿಬಂದಿದೆ. ಹಬ್ಬದ ಸೀಸನ್​ನಲ್ಲಿ ಬಿಡುಗಡೆ ಆಗಿರುವ ಈ ಹಾಡು ಗಣೇಶನಿಗೆ ಸಂಬಂಧಿಸಿದ್ದು ಎಂಬುದು ವಿಶೇಷ. ‘ಇಂಟರ್​ವಲ್​’ ಸಿನಿಮಾ ತಂಡದ ಬಗ್ಗೆ ಇಲ್ಲಿದೆ ಮಾಹಿತಿ..

ಚಂದನ್​ ಶೆಟ್ಟಿ ಕಂಠದಲ್ಲಿ ‘ಇಂಟರ್​ವಲ್​’ ಸಿನಿಮಾ ಸಾಂಗ್​; ಇದು ಗಣೇಶನ ಹಾಡು
‘ಇಂಟರ್​ವಲ್’
ಮದನ್​ ಕುಮಾರ್​
|

Updated on: Sep 11, 2024 | 7:16 PM

Share

ಕೆಲವು ದಿನಗಳ ಹಿಂದೆ ಫಸ್ಟ್ ಲುಕ್ ಪೋಸ್ಟರ್ ಮೂಲಕ ‘ಇಂಟರ್​​ವಲ್’ ಸಿನಿಮಾ ಗಮನ ಸೆಳೆದಿತ್ತು. ಹೊಸ ನಿರ್ದೇಶಕ ಭರತ್ ವರ್ಷ ಅವರು ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈ ಸಿನಿಮಾದಲ್ಲಿ ಯುವಕರು ಮೆಚ್ಚುವಂತಹ ಕಥೆ ಇರಲಿದೆ ಎಂಬುದಕ್ಕೆ ಫಸ್ಟ್​ ಲುಕ್​ ಸುಳಿವು ನೀಡಿತ್ತು. ಈಗ ‘ಆನಂದ್ ಆಡಿಯೋ’ ಮೂಲಕ ‘ಇಂಟರ್​ವಲ್’ ಸಿನಿಮಾದ ಹೊಸ ಸಾಂಗ್​ ಬಿಡುಗಡೆ ಆಗಿದೆ. ಸಾಮಾಜಿಕ ಜಾಲತಾಣ ಸೇರಿದಂತೆ ಎಲ್ಲ ಕಡೆಗಳಿಂದ ಈ ಹಾಡಿಗೆ ಪಾಸಿಟಿವ್​ ಪ್ರತಿಕ್ರಿಯೆ ಸಿಕ್ಕಿರುವುದು ಚಿತ್ರತಂಡಕ್ಕೆ ಖುಷಿ ನೀಡಿದೆ.

ಇದು ಗಣೇಶ ಚತುರ್ಥಿ ಸೀಸನ್​. ಗಣಪತಿ ಹಬ್ಬ ಎಂದರೆ ಯುವಕರಿಗೆ ಸಖತ್​ ಉತ್ಸಾಹ. ಈಗ ‘ಇಂಟರ್​ವಲ್​’ ಸಿನಿಮಾದಿಂದ ರಿಲೀಸ್​ ಆಗಿರುವ ಸಾಂಗ್​ ಕೂಡ ಗಣಪತಿಗೆ ಸಂಬಂಧಿಸಿದೆ ಎಂಬುದು ವಿಶೇಷ. ಈಗಾಗಲೇ ಗಣೇಶನ ಬಗ್ಗೆ ಇರುವ ಫೇಮಸ್​ ಹಾಡುಗಳ ಸಾಲಿಗೆ ಈ ಸಾಂಗ್​ ಕೂಡ ಸೇರ್ಪಡೆ ಆಗಿದೆ. ‘ಭರತವರ್ಷ್ ಪಿಕ್ಚರ್ಸ್’ ಬ್ಯಾನರ್​ ಮೂಲಕ ‘ಇಂಟರ್​ವಲ್’ ಸಿನಿಮಾ ಮೂಡಿಬಂದಿದೆ. ಈ ಗೀತೆಗೆ ಚಂದನ್ ಶೆಟ್ಟಿ ಅವರು ಧ್ವನಿ ನೀಡಿದ್ದಾರೆ.

ಇದನ್ನೂ ಓದಿ: ಅಶ್ಲೀಲ ಸಂದೇಶ ಕಳಿಸುವವರಿಗೆ ದರ್ಶನ್ ಪ್ರಕರಣ ಎಚ್ಚರಿಕೆ ಘಂಟೆ: ಚಂದನ್ ಶೆಟ್ಟಿ

ಈ ಹಾಡಿಗೆ ವಿಜಯ್ ಈಶ್ವರ್ ಅವರು ಸಾಹಿತ್ಯ ಬರೆದಿದ್ದಾರೆ. ವಿಕಾಸ್ ವಸಿಷ್ಠ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ‘ಗಣ ಗಣ ಗಣಪತಿ ಫಂಕ್ಷನ್ ಹಲೋ ಎವ್ರಿಬಡಿ ಸ್ವಲ್ಪ ಅಟೆನ್ಷನ್..’ ಎಂದು ಆರಂಭ ಆಗುವ ಈ ಸಾಂಗ್ ಬಹುತೇಕರ ಜೀವನದ ಗತವೈಭವವನ್ನು ತೆರೆದಿಡುವಂತಿದೆ. ಈ ಹಾಡಿನ ಜೊತೆಯಲ್ಲಿ ಸಿನಿಮಾದ ಕೆಲವು ಪಾತ್ರಗಳ ಪರಿಚಯ ಸಹ ಮಾಡಿಕೊಡಲಾಗಿದೆ. ಇಂಜಿನಿಯರಿಂಗ್ ಮುಗಿಸಿ ಕೆಲಸ ಹುಡುಕುವ ಯುವಕರ ಗುಂಪಿನ ಹೋರಾಟದ ಕಥೆ ‘ಇಂಟರ್​ವಲ್​’ ಸಿನಿಮಾದಲ್ಲಿ ಇದೆ. ಅದಕ್ಕೆ ಜೊತೆಗೆ ರೋಚಕ ಅಂಶಗಳನ್ನು ಸೇರಿಸಿ ಸುಕಿ ಅವರು ಕಥೆ ಬರೆದಿದ್ದಾರೆ. ಚಿತ್ರಕಥೆ ಹಾಗೂ ಸಂಭಾಷಣೆಯನ್ನೂ ಅವರೇ ಬರೆದಿದ್ದಾರೆ.

ಬೆಂಗಳೂರು, ಶಿವಮೊಗ್ಗ ಸುತ್ತಮುತ್ತ ಶೂಟಿಂಗ್​ ಮಾಡಲಾಗಿದೆ. ಈಗ ಈ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಕೂಸ ಪೂರ್ಣಗೊಂಡಿವೆ. ಅನೇಕ ಧಾರಾವಾಹಿಗಳಲ್ಲಿ ಅಭಿನಯಿಸಿ ಗುರುತಿಸಿಕೊಂಡಿರುವ ಶಶಿರಾಜ್ (ಬಾಲಾ) ಅವರು ‘ಇಂಟರ್​ವಲ್’ ಸಿನಿಮಾ ಮೂಲಕ ಹೀರೋ ಆಗಿ ಚಿತ್ರರಂಗಕ್ಕೆ ಎಂಟ್ರಿ ನೀಡುತ್ತಿದ್ದಾರೆ. ಪ್ರಜ್ವಲ್ ಗೌಡ, ಸುಖಿ, ರಂಗನಾಥ್ ಶಿವಮೊಗ್ಗ ಮುಂತಾದ ಕಲಾವಿದರು ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ರಾಜ್ ಕಾಂತ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಪ್ರಮೋದ್ ಮರವಂತೆ ಹಾಗೂ ಸುಖಿ ಸಾಹಿತ್ಯ ಬರೆದಿದ್ದಾರೆ. ಶಶಿಧರ್ ಅವರು ಸಂಕಲನ ಮಾಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಧಾರವಾಡದಲ್ಲಿ ಜೈಲರ್ ಆತ್ಮಹತ್ಯೆ: ಅಲೋಕ್ ಕುಮಾರ್ ವಿರುದ್ಧ ಗಂಭೀರ ಆರೋಪ
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಆರ್‌ಟಿಒ ಕಚೇರಿಯಲ್ಲಿ ತಾಯಿಯ ಬದಲು ಮಗಳ ದರ್ಬಾರ್
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಬೆಂಗಳೂರಿನಲ್ಲಿ ಭಾರಿ ಮಳೆ: ದ್ವಿಚಕ್ರ ವಾಹನ ಸವಾರರ ಪರದಾಟ
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೆ-ಸಿಇಟಿಯಲ್ಲಿ ವಿಜಯಪುರದ ವಿದ್ಯಾರ್ಥಿಗೆ ಟಾಪ್ 1ಕ್ಕಿಂತ ದೊಡ್ಡ ರ್ಯಾಂಕ್
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಕೊಲ್ಲೂರು ಮೂಕಾಂಬಿಕಾ ದೇವಾಲಯದಲ್ಲಿ ವಿಜಯ್ ಮಾಡಿಸಿದ ಪೂಜೆ ಯಾವುದು?
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ಮೂಕಾಂಬಿಕಾ ದೇವಿಗೆ ಬೆಳ್ಳಿಯ ಖಡ್ಗ ಸಮರ್ಪಿಸಿದ ತಮಿಳುನಾಡು ಸಿಎಂ ವಿಜಯ್
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ನಸೀರ್ ಅಹ್ಮದ್‌ ‘ದಿವಾಳಿ’ ಎಂದು ಘೋಷಿಸಿದ NCLT: MLC ಸ್ಥಾನಕ್ಕೂ ಕುತ್ತು!
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಮೂಕಾಂಬಿಕೆಯ ಮಹಿಮೆ, ದೇವಿ ಶಕ್ತಿ ಬಗ್ಗೆ ಆಧ್ಯಾತ್ಮಕ ಚಿಂತಕ ಹೇಳಿದ್ದಿಷ್ಟು
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ಕೊಲ್ಲೂರು ಮೂಕಾಂಬಿಕೆ ದರ್ಶನ ಪಡೆದ ತಮಿಳುನಾಡು ಸಿಎಂ ವಿಜಯ್​
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್
ನೀವೇ ಸಿಎಂ ಆಗಿ ಎಂದಾಗಲೂ ಆಗಿಲ್ಲವಲ್ಲ: ಹೆಚ್​.ಡಿ.ಕುಮಾರಸ್ವಾಮಿ ಟಾಂಗ್