AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುದ್ದು ರಾಕ್ಷಸಿ ನಿವೇದಿತಾ ಗೌಡ ಎದುರು ಮತ್ತೆ ಗುಲಾಬಿ ಹಿಡಿದ ಚಂದನ್​ ಶೆಟ್ಟಿ

ಮುದ್ದು ರಾಕ್ಷಸಿ ಎಂದ ಕೂಡಲೇ ಎಲ್ಲರಿಗೂ ಕೌತುಕ ಮೂಡುತ್ತದೆ. ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಜೊತೆಯಾಗಿರುವ ವಿಷಯ ತಿಳಿದು ಇನ್ನಷ್ಟು ಅಚ್ಚರಿ ಆಗುವುದು ಗ್ಯಾರಂಟಿ. ರಿಯಲ್​ ಲೈಫ್​ನಲ್ಲಿ ಇಬ್ಬರೂ ಬೇರೆ ಬೇರೆ ಆದ ನಂತರವೂ ಇಂಥದ್ದೊಂದು ಫೋಟೋ ಕಾಣಿಸಿಕೊಂಡಿದ್ದು ಹೇಗೆ ಎಂಬ ಪ್ರಶ್ನೆ ಕೂಡ ಮೂಡುತ್ತದೆ. ಅದಕ್ಕೆಲ್ಲ ಉತ್ತರ ಇಲ್ಲಿದೆ..

ಮುದ್ದು ರಾಕ್ಷಸಿ ನಿವೇದಿತಾ ಗೌಡ ಎದುರು ಮತ್ತೆ ಗುಲಾಬಿ ಹಿಡಿದ ಚಂದನ್​ ಶೆಟ್ಟಿ
ಚಂದನ್​ ಶೆಟ್ಟಿ, ನಿವೇದಿತಾ ಗೌಡ
ಮದನ್​ ಕುಮಾರ್​
|

Updated on: Aug 30, 2024 | 7:08 PM

Share

ಸಂಗೀತ ನಿರ್ದೇಶಕ/ಗಾಯಕ ಚಂದನ್​ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಪರಸ್ಪರ ಪ್ರೀತಿಸಿ ಮದುವೆ ಆಗಿದ್ದರು. ಆದರೆ ಕಾರಣಾಂತರಗಳಿಂದ ಅವರ ವಿಚ್ಛೇದನ ಆಯ್ತು. ಈಗ ಒಂದು ಫೋಟೋ ವೈರಲ್​ ಆಗುತ್ತಿದೆ. ನಿವೇದಿತಾ ಗೌಡ ಎದುರು ಚಂದನ್​ ಶೆಟ್ಟಿ ಅವರು ಗುಲಾಬಿ ಹೂವು ಹಿಡಿದು ಪ್ರಪೋಸ್​ ಮಾಡುತ್ತಿರುವ ಫೋಟೋ ಇದು. ಇದನ್ನು ನೋಡಿದರೆ ಜನರಿಗೆ ಅಚ್ಚರಿ ಆಗೋದು ಗ್ಯಾರಂಟಿ. ಅಂದಹಾಗೆ, ಇದು ‘ಮುದ್ದು ರಾಕ್ಷಸಿ’ ಸಿನಿಮಾದ ಫೋಟೋ. ಈ ಸಿನಿಮಾದ ಬಗ್ಗೆ ಇಲ್ಲಿದೆ ಒಂದಷ್ಟು ಮಾಹಿತಿ..

ಚಂದನ್​ ಶೆಟ್ಟಿ ಅವರು ನಿಜವಾಗಿಯೂ ಈಗ ನಿವೇದಿತಾ ಗೌಡ ಅವರಿಗೆ ಪ್ರಪೋಸ್​ ಮಾಡಿಲ್ಲ. ಅವರು ಹೀಗೆಲ್ಲ ಮಾಡಿರುವುದು ‘ಮುದ್ದು ರಾಕ್ಷಸಿ’ ಸಿನಿಮಾಗಾಗಿ. ಇದು ಯಾವ ಸಿನಿಮಾ ಎಂಬ ಗೊಂದಲ ಮೂಡುವುದು ಸಹಜ. ಅದಕ್ಕೆ ಉತ್ತರ, ‘ಕ್ಯಾಂಡಿ ಕ್ರಶ್’. ಹೌದು, ಈ ಮೊದಲು ‘ಕ್ಯಾಂಡಿ ಕ್ರಶ್’ ಎಂದಿದ್ದ ಸಿನಿಮಾ ಶೀರ್ಷಿಕೆಯನ್ನು ಈಗ ‘ಮುದ್ದು ರಾಕ್ಷಸಿ’ ಎಂದು ಬದಲಾಯಿಸಲಾಗಿದೆ.

ಬಿಗ್​ ಬಾಸ್​ ಮೂಲಕ ಖ್ಯಾತಿ ಪಡೆದು ಜೋಡಿಯಾದ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅವರು ಮೊದಲ ಬಾರಿಗೆ ಜೊತೆಯಾಗಿ ಅಭಿನಯಿಸಿದ ಸಿನಿಮಾ ಇದು. ಪುನೀತ್ ಶ್ರೀನಿವಾಸ್ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಸೈಕೋಥ್ರಿಲ್ಲರ್ ಕಥಾಹಂದರ ಈ ಸಿನಿಮಾದಲ್ಲಿ ಇರಲಿದೆ. ತಾತ್ಕಾಲಿಕವಾಗಿ ‘ಕ್ಯಾಂಡಿ ಕ್ರಷ್’ ಎಂಬ ಟೈಟಲ್ ಇಟ್ಟುಕೊಳ್ಳಲಾಗಿತ್ತು. ಇನ್ಮುಂದೆ ಈ ಸಿನಿಮಾವನ್ನು ‘ಮುದ್ದು ರಾಕ್ಷಸಿ’ ಅಂತ ಕರೆಯಲಾಗುತ್ತದೆ.

‘ಮುದ್ದು ರಾಕ್ಷಸಿ ’ ಟೈಟಲ್​ ಭಿನ್ನವಾಗಿದ್ದು, ಜನರಲ್ಲಿ ಕೌತುಕ ಮೂಡಿಸಿದೆ. ಇದರಲ್ಲಿ ಒಂದು ಡಿಫರೆಂಟ್​ ಆದ ರೊಮ್ಯಾಂಟಿಕ್ ಪ್ರೇಮ್​ ಕಹಾನಿ ಇರಲಿದೆ. ಸೈಕೋಥ್ರಿಲ್ಲರ್ ಕಥಾಹಂದರ ಪ್ರಮುಖವಾಗಿ ಇರಲಿದೆ. ಸಿನಿಮಾದ ಹಾಡುಗಳಿಗೆ ಎಂ.ಎಸ್. ತ್ಯಾಗರಾಜ್ ಅವರು ಸಂಗೀತ ನಿರ್ದೇಶನ ಮಾಡಿದ್ದಾರೆ. ಎ. ಕರುಣಾಕರ್ ಅವರು ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸಿದ್ದಾರೆ.

ಇದನ್ನೂ ಓದಿ: ಹಬ್ಬದ ಸೀಸನ್: ಸಾಂಪ್ರದಾಯಿಕ ಲುಕ್​ನಲ್ಲಿ ಕಂಗೊಳಿಸುತ್ತಿರುವ ನಿವೇದಿತಾ ಗೌಡ

ಮೋಹನ್ ಕುಮಾರ್ ಅವರು ‘ಶ್ರೀಚೌಡೇಶ್ವರಿ ಸಿನಿ ಕಂಬೈನ್ಸ್’ ಮೂಲಕ ‘ಮುದ್ದು ರಾಕ್ಷಸಿ’ ಸಿನಿಮಾವನ್ನು ನಿರ್ಮಾಣ ಮಾಡುತ್ತಿದ್ದಾರೆ. ನಿರ್ದೇಶಕ ಪುನೀತ್ ಶ್ರೀನಿವಾಸ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಬೆಂಗಳೂರಿನ ಸುತ್ತಮುತ್ತ ಬಹುತೇಕ ದೃಶ್ಯಗಳ ಶೂಟಿಂಗ್ ಮಾಡಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಸುರ್ಜೇವಾಲ ಜೊತೆಗಿನ ಸಭೆ ಬಳಿಕ ಡಿಕೆ ಶಿವಕುಮಾರ್​ ಹೇಳಿದ್ದಿಷ್ಟು
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಬಸ್​​ನೊಳಗಿಂದ ತಿಂಡಿಗಾಗಿ ದುಡ್ಡು ಕೊಟ್ಟ ಯುವಕನಿಗೆ ವ್ಯಾಪಾರಿ ಮಾಡಿದ್ದೇನು?
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಹಂಸಲೇಖ, ರವಿಚಂದ್ರನ್ ನಡುವೆ ಆ ಒಂದು ಹಾಡಿಗಾಗಿ ಮೂಡಿತ್ತು ಭಿನ್ನಾಭಿಪ್ರಾಯ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ಬೈಎಲೆಕ್ಷನ್: 2 ಕ್ಷೇತ್ರಗಳಲ್ಲಿ ಕಾಂಗ್ರೆಸ್​ ಜಯ ಸಾಧಿಸುತ್ತೆ ಎಂದ ಸುರ್ಜೇವಾ
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ತಂದೆಯಿಂದಲೇ ಹಸುಗೂಸಿನ ಕೊಲೆ: ಭೀಮರಾಯನ ಕ್ರೂರತೆ ಬಿಚ್ಚಿಟ್ಟ ಸಂಬಂಧಿಕರು
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ರೌಡಿ ಶೀಟರ್ ಜೊತೆ ದೋಸ್ತಿ: ಡಾಗ್ ಸತೀಶ್​​ಗೆ ಸಂಕಷ್ಟ
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಇರಾನ್-ಇಸ್ರೇಲ್ ಸಂಘರ್ಷ; ರಿಯಾದ್‌ನಲ್ಲಿ ಭಾರತೀಯ ಪ್ರಜೆ ಸಾವು
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಟೊಮೆಟೊ ಬೆಲೆ ಕುಸಿತ: ರೈತರಿಂದ ರಸ್ತೆಗೆ ಟೊಮೆಟೊ ಸುರಿದು ಆಕ್ರೋಶ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಕಾರಿನಲ್ಲಿ ಬರುತ್ತಿದ್ದ ವ್ಯಕ್ತಿಯ ಮೇಲೆ ಏಕಾಏಕಿ ಗುಂಡಿನ ದಾಳಿ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ
ಪ್ರಜ್ವಲ್ ವಿಡಿಯೋ ಕೇಸ್​​: ಚಾರ್ಜ್​​ಶೀಟ್​​ ವಿರುದ್ಧ ಜೆಡಿಎಸ್ ​​ಆಕ್ರೋಶ