AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫಾರೆಸ್ಟ್’ ಸಿನಿಮಾದಲ್ಲಿ ಚಂದನ್ ಶೆಟ್ಟಿಯ ರ್ಯಾಪ್ ಹಾಡು

Chandan Shetty: ಅಡ್ವೇಂಚರ್ ಕತೆ ಹೊಂದಿರುವ ‘ಪಾರೆಸ್ಟ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಈ ಸಿನಿಮಾಕ್ಕೆ ಚಂದನ್ ಶೆಟ್ಟಿ ಮಾಡಿರುವ Rap ಹಾಡು ಇದೀಗ ಬಿಡುಗಡೆ ಆಗಿದೆ. ‘ಪೈಸಾ ಪೈಸಾ ಪೈಸಾ’ ಎಂಬ ಈ ಹಾಡು ಒಳ್ಳೆಯ ಬೀಟ್​ನ ಜೊತೆಗೆ ಸಿನಿಮಾದ ಕತೆಯ ಗುಟ್ಟನ್ನು ಸಹ ಬಿಟ್ಟುಕೊಡುತ್ತಿದೆ.

‘ಫಾರೆಸ್ಟ್’ ಸಿನಿಮಾದಲ್ಲಿ ಚಂದನ್ ಶೆಟ್ಟಿಯ ರ್ಯಾಪ್ ಹಾಡು
Chikkanna
ಮಂಜುನಾಥ ಸಿ.
|

Updated on:Dec 21, 2024 | 12:09 PM

Share

ಚಿಕ್ಕಣ್ಣ, ರಂಗಾಯಣ ರಘು ಸೇರಿದಂತೆ ಇನ್ನೂ ಕೆಲವು ಪ್ರಮುಖ ನಟರು ನಟಿಸಿರುವ ಹಾಸ್ಯಮಯ ಅಡ್ವೇಂಚರ್ ಕತೆ ಹೊಂದಿರುವ ‘ಪಾರೆಸ್ಟ್’ ಸಿನಿಮಾ ಕೆಲವೇ ದಿನಗಳಲ್ಲಿ ಬಿಡುಗಡೆ ಆಗಲಿದ್ದು, ಈ ಸಿನಿಮಾಕ್ಕೆ ಚಂದನ್ ಶೆಟ್ಟಿ ಮಾಡಿರುವ Rap ಹಾಡು ಇದೀಗ ಬಿಡುಗಡೆ ಆಗಿದೆ. ‘ಪೈಸಾ ಪೈಸಾ ಪೈಸಾ’ ಎಂಬ ಈ ಹಾಡು ಒಳ್ಳೆಯ ಬೀಟ್​ನ ಜೊತೆಗೆ ಸಿನಿಮಾದ ಕತೆಯ ಗುಟ್ಟನ್ನು ಸಹ ಬಿಟ್ಟುಕೊಡುತ್ತಿದೆ.

ಈಗ ಬಿಡುಗಡೆ ಆಗಿರುವ ‘ಪೈಸಾ ಪೈಸಾ ಪೈಸಾ’ ಹಾಡನ್ನು ‘ಬಹದ್ದೂರ್’ ಚೇತನ್ ಕುಮಾರ್ ಬರೆದಿದ್ದಾರೆ. ಚಂದನ್ ಶೆಟ್ಟಿ ಹಾಡು ಹಾಡಿದ್ದು, ಹಾಡಿಗೆ ಸಂಗೀತ ನೀಡಿರುವುದು ಧರ್ಮವಿಶ್. ಅಜಯ್ ಶಿವಶಂಕರ್ ನೃತ್ಯ ಸಂಯೋಜಿಸಿರುವ ಈ ಹಾಡಿಗೆ ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು, ಶರಣ್ಯ ಶೆಟ್ಟಿ ಹಾಗೂ ಅರ್ಚನಾ ಕೊಟ್ಟಿಗೆ ಹೆಜ್ಜೆ ಹಾಕಿದ್ದಾರೆ. ‘ಮನಿ ಮನಿ ಮನಿ’ ಹಾಡು Rap ಶೈಲಿಯಲ್ಲಿದ್ದು, ಯೂಟ್ಯೂಬ್ ನಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಜನ ಹಾಡು ಮೆಚ್ಚಿಕೊಳ್ಳುತ್ತಿದ್ದಾರೆ.

‘ಫಾರೆಸ್ಟ್’ ಚಿತ್ರದ 2025 ರ ಜನವರಿ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಎನ್ ಎಂ ಕಾಂತರಾಜ್ ಈ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಎನ್ ಎಂ ಕೆ ಸಿನಿಮಾಸ್ ಬ್ಯಾನರ್ ಅಡಿಯಲ್ಲಿ ಸಿನಿಮಾ ನಿರ್ಮಾಣಗೊಂಡಿದೆ. ಕಾಡಿನಲ್ಲಿ ಕೆಲವು ಭಿನ್ನ ವ್ಯಕ್ತಿಗಳ ನಡುವೆ ನಡೆಯುವ ಅಡ್ವೆಂಚರಸ್ ಕಾಮಿಡಿ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಈ ಸಿನಿಮಾವನ್ನು ಚಂದ್ರಮೋಹನ್ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ:ಚಿಕ್ಕಣ್ಣನ ಹೇಳಿಕೆಯಿಂದ ಪೊಲೀಸರಿಗೆ ತಿಳಿದಿದ್ದು ಏನು? ವಾದ ಮಂಡಿಸಿದ ಎಸ್​ಪಿಪಿ

ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೆ ಸಂಭಾಷಣೆಯನ್ನೂ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ಈ ಮಲ್ಟಿಸ್ಟಾರರ್ ಸಿನಿಮಾದ ತಾರಾಬಳಗದಲ್ಲಿ ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದವರಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:08 pm, Sat, 21 December 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು