AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೊಂದು ಸಿನಿಮಾಗೆ ಹೀರೋ ಆದ ಚಂದನ್​ ಶೆಟ್ಟಿ; ಟೈಟಲ್​ ಲಾಂಚ್​ ಮಾಡೋದು ಸಾಕ್ಷಾತ್​ ಮಹಾಲಕ್ಷಿ?

ಅರುಣ್ ಅಮುಕ್ತ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದೆ. ಸಿನಿಮಾದ ಶೀರ್ಷಿಕೆಯನ್ನು ಆಗಸ್ಟ್​ 25ರಂದು ಮಧ್ಯಾಹ್ನ 12.21ಕ್ಕೆ ಬಿಡುಗಡೆ ಮಾಡಲು ಟೈಮ್​ ಫಿಕ್ಸ್​ ಮಾಡಲಾಗಿದೆ. ಟೈಟಲ್​ ಜೊತೆಗೆ ಸಿನಿಮಾದ ಕಥೆ ಬಗ್ಗೆ ಒಂದಷ್ಟು ಸುಳಿವು ಬಿಟ್ಟುಕೊಡುವ ನಿರೀಕ್ಷೆ ಇದೆ. ಸದ್ಯ ಬಿಡುಗಡೆ ಆಗಿರುವ ಪ್ರಮೋಷನಲ್​ ವಿಡಿಯೋ ಗಮನ ಸೆಳೆಯುತ್ತಿದೆ.

ಮತ್ತೊಂದು ಸಿನಿಮಾಗೆ ಹೀರೋ ಆದ ಚಂದನ್​ ಶೆಟ್ಟಿ; ಟೈಟಲ್​ ಲಾಂಚ್​ ಮಾಡೋದು ಸಾಕ್ಷಾತ್​ ಮಹಾಲಕ್ಷಿ?
ಚಂದನ್​ ಶೆಟ್ಟಿ ಹೊಸ ಸಿನಿಮಾ ಟೀಮ್​
ಮದನ್​ ಕುಮಾರ್​
|

Updated on: Aug 18, 2023 | 12:19 PM

Share

ರ‍್ಯಾಪ್​ ಸಿಂಗರ್​, ಸಂಗೀತ ನಿರ್ದೇಶಕ ಚಂದನ್​ ಶೆಟ್ಟಿ (Chandan Shetty) ಅವರು ನಟನೆಯಲ್ಲೂ ಆಸಕ್ತಿ ಹೊಂದಿರುವುದು ಗೊತ್ತೇ ಇದೆ. ಈಗಾಗಲೇ ಅವರು ಒಂದೆರಡು ಸಿನಿಮಾಗಳಿಗೆ ಹೀರೋ ಆಗಿದ್ದಾರೆ. ಆ ಚಿತ್ರಗಳು ಬಿಡುಗಡೆ ಆಗುವುದಕ್ಕೂ ಮುನ್ನವೇ ಅವರಿಗೆ ಹೊಸ ಹೊಸ ಅವಕಾಶಗಳು ಬರುತ್ತಿವೆ. ಈಗ ಅವರ ಹೊಸ ಸಿನಿಮಾ (Chandan Shetty New Movie) ಬಗ್ಗೆ ಮಾಹಿತಿ ಕೇಳಿಬಂದಿದೆ. ಈ ಚಿತ್ರಕ್ಕೆ ಇನ್ನೂ ಶೀರ್ಷಿಕೆ ಫಿಕ್ಸ್​ ಆಗಿಲ್ಲ. ಸಾಮಾನ್ಯವಾಗಿ ಚಿತ್ರದ ಟೈಟಲ್​ ಅನ್ನು ಸ್ಟಾರ್​ ನಟ-ನಟಿಯರ ಕೈಯಿಂದ ಅನಾವರಣ ಮಾಡಿಸಲಾಗುತ್ತದೆ. ಆದರೆ ಚಂದನ್​ ಶೆಟ್ಟಿಯ ಹೊಸ ಸಿನಿಮಾದ ಶೀರ್ಷಿಕೆ ಬಿಡುಗಡೆ ಮಾಡಲು ಸಾಕ್ಷಾತ್​ ವರಮಹಾಲಕ್ಷ್ಮಿ (Varamahalakshmi) ಬರ್ತಾಳಂತೆ. ಏನಿದು ಟ್ವಿಸ್ಟ್​ ಅಂತೀರಾ? ಆ ಬಗ್ಗೆ ಇಲ್ಲಿದೆ ಮಾಹಿತಿ..

ಚಂದನ್​ ಶೆಟ್ಟಿ ಅವರು ಅಭಿನಯಿಸಲಿರುವ ಹೊಸ ಸಿನಿಮಾ ಬಗ್ಗೆ ಅಪ್​ಡೇಟ್​ ನೀಡಲು ಒಂದು ಪ್ರಮೋಷನಲ್​ ವಿಡಿಯೋ ಮಾಡಲಾಗಿದೆ. ಅದರಲ್ಲಿ ಟೈಟಲ್​ ಲಾಂಚ್​ ಬಗ್ಗೆಯೇ ಚರ್ಚೆ ನಡೆದಿದೆ. ಯಾರಿಂದ ಶೀರ್ಷಿಕೆ ಬಿಡುಗಡೆ ಮಾಡಿಸೋದು ಎಂಬ ಬಗ್ಗೆ ನಿರ್ದೇಶನ ತಂಡದವರು ಮತ್ತು ಚಂದನ್​ ಶೆಟ್ಟಿ ತಲೆ ಕೆಡಿಸಿಕೊಳ್ಳುತ್ತಾರೆ. ಅಂದು ರಾತ್ರಿ ನಿರ್ದೇಶಕರ ಕನಸಿನಲ್ಲಿ ಸಾಕ್ಷಾತ್​ ಮಹಾಲಕ್ಷ್ಮಿ ಬರುತ್ತಾಳೆ. ‘ನಿಮ್ಮ ಸಿನಿಮಾದ ಟೈಟಲ್​ ಅನ್ನು ವರಮಹಾಲಕ್ಷ್ಮಿ ಹಬ್ಬದ ದಿನ ನಾನೇ ಲಾಂಚ್​ ಮಾಡ್ತೀನಿ’ ಎಂದು ಆಕೆ ಭರವಸೆ ನೀಡುತ್ತಾಳೆ. ಈ ರೀತಿ ತಮಾಷೆಯ ಪ್ರಸಂಗ ಈ ಪ್ರೋಮೋ ವಿಡಿಯೋದಲ್ಲಿದೆ.

ಚಂದನ್​ ಶೆಟ್ಟಿ ಹೊಸ ಸಿನಿಮಾದ ಪ್ರಮೋಷನಲ್​ ವಿಡಿಯೋ:

ಈ ಸಿನಿಮಾದಲ್ಲಿ ಚಂದನ್ ಶೆಟ್ಟಿ ಜತೆ ಭಾವನಾ, ಅಮರ್, ವಿವಾನ್, ಮಾನಸಿ, ಸುನೀಲ್ ಪುರಾಣಿಕ್, ಭವ್ಯ, ಸಿಂಚನಾ, ಅರವಿಂದ ರಾವ್, ರಘು ರಾಮನಕೊಪ್ಪ, ಪ್ರಶಾಂತ್ ಸಂಬರ್ಗಿ ಸೇರಿದಂತೆ ಅನೇಕರು ಅಭಿನಯಿಸಲಿದ್ದಾರೆ. ತಾಂತ್ರಿಕ ವರ್ಗದಲ್ಲಿ ಯಾರೆಲ್ಲ ಕೆಲಸ ಮಾಡುತ್ತಿದ್ದಾರೆ ಎಂಬ ಬಗ್ಗೆ ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

ಇದನ್ನೂ ಓದಿ: ನೀರಿನೊಳಗೆ ಚಂದನ್​ ಶೆಟ್ಟಿ-ನಿವೇದಿತಾ ಗೌಡ ರೊಮ್ಯಾನ್ಸ್​; ವೈರಲ್​ ವಿಡಿಯೋ ನೋಡಿ ಜನ ಹೇಳಿದ್ದೇನು?

ಅರುಣ್ ಅಮುಕ್ತ ಅವರ ನಿರ್ದೇಶನದಲ್ಲಿ ಈ ಸಿನಿಮಾ ಮೂಡಿಬರಲಿದೆ. ಸಿನಿಮಾದ ಶೀರ್ಷಿಕೆಯನ್ನು ಆಗಸ್ಟ್​ 25ರಂದು ಮಧ್ಯಾಹ್ನ 12.21ಕ್ಕೆ ಬಿಡುಗಡೆ ಮಾದಲು ಟೈಮ್​ ಫಿಕ್ಸ್​ ಮಾಡಲಾಗಿದೆ. ಟೈಟಲ್​ ಜೊತೆಗೆ ಸಿನಿಮಾದ ಕಥೆ ಬಗ್ಗೆ ಒಂದಷ್ಟು ಸುಳಿವು ಬಿಟ್ಟುಕೊಡುವ ನಿರೀಕ್ಷೆ ಇದೆ. ಈ ಹಿಂದೆ ‘ಲೂಸ್​ಗಳು’ ಚಿತ್ರಕ್ಕೆ ಅರುಣ್​ ಅಮುಕ್ತ ಅವರು ನಿರ್ದೇಶನ ಮಾಡಿದ್ದರು. ಜಾಹೀರಾತು ಕ್ಷೇತ್ರದಲ್ಲೂ ಕೆಲಸ ಮಾಡಿದ ಅನುಭವ ಅವರಿಗೆ ಇದೆ. ಯುವ ಪ್ರೇಕ್ಷಕರಿಗೆ ಇಷ್ಟ ಆಗುವಂತಹ ಕಹಾನಿಯನ್ನು ಇಟ್ಟುಕೊಂಡು ಅವರೀಗ ಚಂದನ್​ ಶೆಟ್ಟಿಗೆ ಆ್ಯಕ್ಷನ್​-ಕಟ್​ ಹೇಳಲು ಸಜ್ಜಾಗಿದ್ದಾರೆ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​