AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಂದನ್​ ಶೆಟ್ಟಿ ನಟನೆಯ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಟ್ರೇಲರ್​ ಹೇಗಿದೆ ನೋಡಿ..

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಈ ಟ್ರೇಲರ್​ ರಿಲೀಸ್ ಆಗಿದೆ. ಚಂದನ್​ ಶೆಟ್ಟಿ ಅವರಿಗೆ ಈ ಸಿನಿಮಾದಲ್ಲಿ ಡಿಫರೆಂಟ್​ ಪಾತ್ರ ಇದೆ. ಸಿನಿಮಾದ ಹೆಸರೇ ಸೂಚಿಸುತ್ತಿರುವಂತೆ ಇದು ಟೀನೇಜ್​ ಹುಡುಗ-ಹುಡುಗಿಯರ ಕಥೆ ಇರುವ ಚಿತ್ರ. ಇದಕ್ಕೆ ಅರುಣ್ ಅಮುಕ್ತ ಅವರ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಟ್ರೇಲರ್​ ಮೂಲಕ ಸಿನಿಮಾ ಮೇಲಿನ ಕುತೂಹಲ ಹೆಚ್ಚಿಸಲಾಗಿದೆ.

ಚಂದನ್​ ಶೆಟ್ಟಿ ನಟನೆಯ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಟ್ರೇಲರ್​ ಹೇಗಿದೆ ನೋಡಿ..
‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on: May 14, 2024 | 9:14 PM

Share

ಬಿಗ್​ ಬಾಸ್​ ವಿನ್ನರ್​, ಸಂಗೀತ ನಿರ್ದೇಶಕ, ಗಾಯಕ ಚಂದನ್ ಶೆಟ್ಟಿ (Chandan Shetty) ಅವರು ಪ್ರಮುಖ ಪಾತ್ರ ಮಾಡಿರುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ (Vidyarthi Vidyarthiniyare) ಸಿನಿಮಾದ ಶೀರ್ಷಿಕೆಯೇ ಗಮನ ಸೆಳೆಯುತ್ತಿದೆ. ಟೈಟಲ್​ಗೆ ತಕ್ಕಂತೆ ಈ ಸಿನಿಮಾದಲ್ಲಿ ಹದಿಹರೆಯದ ಮನಸ್ಸುಗಳ ಕಹಾನಿ ಇರಲಿದೆ. ಈಗಾಗಲೇ ಪ್ರೇಕ್ಷಕರಲ್ಲಿ ಕೌತುಕ ಮೂಡಿಸಿರುವ ಈ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ಸಿನಿಮಾದ ಝಲಕ್​ ತೋರಿಸುವಂತೆ ಈ ಟ್ರೇಲರ್​ (Vidyarthi Vidyarthiniyare Trailer) ಮೂಡಿಬಂದಿದೆ. ಹದಿಹರೆಯದ ಯುವಕರ ಕಥೆಯನ್ನು ಪರಿಚಯಿಸುವ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದ ಈ ಟ್ರೇಲರ್​ಗೆ ‘ಸೈಡ್​ ಎ’ ಎಂದು ಹೆಸರು ಇಡಲಾಗಿದೆ. ಸೈಡ್​ ಬಿ ನೋಡಲು ಕಾತರ ಹೆಚ್ಚಾಗಿದೆ.

ಈ ಸಿನಿಮಾದಲ್ಲಿ ಶಾಲಾ-ಕಾಲೇಜು ಕಹಾನಿ ಇದೆ ಎಂದಮಾತ್ರಕ್ಕೆ ಇದು ಸಿದ್ಧಸೂತ್ರಗಳ ಸಿನಿಮಾ ಅಲ್ಲ ಎನ್ನುತ್ತಿದೆ ಚಿತ್ರತಂಡ. ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದಲ್ಲಿ ಹೊಡೆದಾಟ, ರ‍್ಯಾಗಿಂಗ್​, ಬಿಸಿ ರಕ್ತದ ಯುವಕರ ಪುಂಡಾಟ ಸೇರಿದಂತೆ ಹಲವು ಅಂಶಗಳು ಇವೆ. ಅಷ್ಟೇ ಅಲ್ಲ, ಶೈಕ್ಷಣಿಕ ಪರಿಸರದಲ್ಲಿ ಇರುವ ಕ್ರೌರ್ಯದ ಮುಖವೊಂದನ್ನು ಬಯಲಾಗಿಸುವ ಪ್ರಯತ್ನ ಕೂಡ ಇದರಲ್ಲಿ ಆಗಿದೆ. ಮೋಜು-ಮಸ್ತಿ ಮಾಡುತ್ತ ಮೈಮರೆತವರ ಕಥೆ ಕೂಡ ಈ ಸಿನಿಮಾದಲ್ಲಿ ಇರಲಿದೆ. ದಾರಿ ತಪ್ಪಿದ ಮಕ್ಕಳನ್ನು ಹಾದಿಗೆ ತರುವ ಪ್ರಯತ್ನವೂ ಈ ಚಿತ್ರದಿಂದ ಆಗಲಿದೆ ಎಂಬುದಕ್ಕೆ ಟ್ರೇಲರ್​ ಸುಳಿವು ನೀಡಿದೆ.

‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾದಲ್ಲಿ ಚಂದನ್ ಶೆಟ್ಟಿ , ಭಾವನಾ, ಅಮರ್, ಮಾನಸಿ, ಭವ್ಯ, ವಿವಾನ್, ಸುನೀಲ್ ಪುರಾಣಿಕ್, ಸಿಂಚನಾ, ಅರವಿಂದ್​ ರಾವ್, ರಘು ರಾಮನಕೊಪ್ಪ, ಕಾಕ್ರೋಚ್ ಸುಧಿ, ಪ್ರಶಾಂತ್ ಸಂಬರ್ಗಿ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ. ಚಂದನ್ ಶೆಟ್ಟಿ ಅವರ ಪಾತ್ರ ಈ ಸಿನಿಮಾದಲ್ಲಿ ಡಿಫರೆಂಟ್​ ಆಗಿದೆ. ಅರುಣ್ ಅಮುಕ್ತ ಅವರು ಈ ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ.

ಇದನ್ನೂ ಓದಿ: ‘ಸಾವಿರ ಗುಂಗಲ್ಲಿ’ ಆಲ್ಬಂ ಹಾಡಿನಲ್ಲಿ ಮಿಂಚಿದ ನಟಿ ಬೃಂದಾ ಆಚಾರ್ಯ

ವಿಜೇತ್ ಕೃಷ್ಣ, ವಾಸು ದೀಕ್ಷಿತ್ ಅವರು ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಸುಬ್ರಮಣ್ಯ ಕುಕ್ಕೆ ಹಾಗೂ ಎ.ಸಿ. ಶಿವಲಿಂಗೇಗೌಡ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಶ್ರೀಕಾಂತ್ ಜಿ. ಕಶ್ಯಪ್ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಿದ್ದಾರೆ. ಕುಮಾರ್ ಗೌಡ ಅವರ ಛಾಯಾಗ್ರಹಣ, ಪವನ್ ಗೌಡ ಅವರ ಸಂಕಲನ, ಟೈಗರ್ ಶಿವು ಹಾಗೂ ನರಸಿಂಹ ಅವರ ಸಾಹಸ ನಿರ್ದೇಶನ ಈ ಸಿನಿಮಾಗಿದೆ. ಭರ್ಜರಿ ಚೇತನ್ ಕುಮಾರ್​ ಮತ್ತು ವಾಸುಕಿ ವೈಭವ್ ಅವರು ಸಾಹಿತ್ಯ ಬರೆದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ