AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandan Shetty: ‘ಎಲ್ರ ಕಾಲೆಳಿಯತ್ತೆ ಕಾಲ’ ಎಂದ ಚಂದನ್ ಶೆಟ್ಟಿ; ಇಲ್ಲಿದೆ ಹೊಸ ಸಮಾಚಾರ

Sujay Shastry | Elra Kaaleliyutte Kaala: ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಟನೆಯಲ್ಲೂ ಮೋಡಿ ಮಾಡಲು ಸಿದ್ಧರಾಗುತ್ತಿದ್ಧಾರೆ. ಅವರ ಹೊಸ ಚಿತ್ರ ‘ಎಲ್ರ ಕಾಲೆಳಿಯತ್ತೆ ಕಾಲ’ ಅನೌನ್ಸ್ ಆಗಿದೆ. ಚಿತ್ರದ ಕುರಿತ ಮಾಹಿತಿ ಇಲ್ಲಿದೆ.

Chandan Shetty: ‘ಎಲ್ರ ಕಾಲೆಳಿಯತ್ತೆ ಕಾಲ’ ಎಂದ ಚಂದನ್ ಶೆಟ್ಟಿ; ಇಲ್ಲಿದೆ ಹೊಸ ಸಮಾಚಾರ
‘ಎಲ್ರ ಕಾಲೆಳಿಯತ್ತೆ ಕಾಲ’ ಚಿತ್ರದ ಪೋಸ್ಟರ್, ಚಂದನ್ ಶೆಟ್ಟಿ
TV9 Web
| Edited By: |

Updated on: Jan 30, 2022 | 4:31 PM

Share

ಇತ್ತೀಚೆಗಷ್ಟೇ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ (Chandan Shetty) ರೆಟ್ರೋ ಶೈಲಿಯ ಲುಕ್ ಒಂದರಲ್ಲಿ ಹೊಸ ಫೋಟೋವೊಂದನ್ನು ಹಂಚಿಕೊಂಡಿದ್ದರು. ಇದು ಅಭಿಮಾನಿಗಳ ಕುತೂಹಲ ಹೆಚ್ಚಿಸಿತ್ತು. ಹೊಸ ಚಿತ್ರದಲ್ಲಿ ಅವರು ನಾಯಕನಾಗಿ ನಟಿಸುತ್ತಿದ್ದು, ಅದರ ಲುಕ್ ಇದಾಗಿದೆ ಎಂದೂ ಬಹಿರಂಗವಾಗಿತ್ತು. ಇದೀಗ ಚಂದನ್ ಯಾವ ಚಿತ್ರಕ್ಕಾಗಿ ಗೆಟಪ್ ಬದಲಿಸುತ್ತಿದ್ದಾರೆ? ಚಿತ್ರದ ಹೆಸರೇನು? ಮೊದಲಾದ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಮೂಲಕ ಸ್ಯಾಂಡಲ್​ವುಡ್​ನಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ, ನಟನೆಯ ಮೂಲಕ ಈಗಾಗಲೇ ಹೆಸರುವಾಸಿಯಾಗಿರುವ ಸುಜಯ್ ಶಾಸ್ತ್ರಿ (Sujay Shastry) ಆಕ್ಷನ್ ಕಟ್ ಹೇಳುತ್ತಿರುವ ಹೊಸ ಚಿತ್ರ ಇದಾಗಿದೆ. ಚಿತ್ರಕ್ಕೆ ‘ಎಲ್ರ ಕಾಲೆಳಿಯತ್ತೆ ಕಾಲ’ (Elra Kaaleliyutte Kaala) ಎಂದು ಹೆಸರಿಡಲಾಗಿದೆ. ಸ್ಯಾಂಡಲ್​ವುಡ್​ನಲ್ಲಿ ವಿಭಿನ್ನ ಶೀರ್ಷಿಕೆಗಳ ಟ್ರೆಂಡ್ ಈ ಮೂಲಕ ಮುಂದುವರೆದಿದ್ದು, ಹೆಸರಿನಿಂದಲೇ ಚಿತ್ರ ಮತ್ತಷ್ಟು ಕುತೂಹಲ ಹುಟ್ಟುಹಾಕಿದೆ.

ಚಿತ್ರದ ಮೊದಲ ಪೋಸ್ಟರ್​ಅನ್ನು ಬಿಡುಗಡೆ ಮಾಡಿ, ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಬೆಟ್ಟ- ಗುಡ್ಡ ಪರಿಸರದ ನಡುವೆ ಕೆಂಪು ಡಬ್ಬಿ ಬಸ್ ಒಂದು ಸಾಗುತ್ತಿರುವ ದೃಶ್ಯವನ್ನೊಳಗೊಂಡ ಪೋಸ್ಟರ್​ಅನ್ನು ಹಂಚಿಕೊಳ್ಳಲಾಗಿದೆ. ಜಗದೀಶ್ ಫಿಲ್ಮ್ಸ್ ಪ್ರಸ್ತುತಪಡಿಸುತ್ತಿರುವ ಈ ಚಿತ್ರವನ್ನು ಗೋಕುಲ ಎಂಟರ್​​ಪ್ರೈಸಸ್ ಬ್ಯಾನರ್​ನಲ್ಲಿ ಉಷಾ ಗೋವಿಂದರಾಜು ನಿರ್ಮಾಣ ಮಾಡುತ್ತಿದ್ದಾರೆ.

‘ಎಲ್ರ ಕಾಲೆಳಿಯತ್ತೆ ಕಾಲ’ ಪೋಸ್ಟರ್ ಇಲ್ಲಿದೆ:

ಹೊಸ ಗೆಟಪ್ ಮೂಲಕ ಚಿತ್ರದ ಕುತೂಹಲ ಹೆಚ್ಚಿಸಿದ್ದ ಚಂದನ್ ಶೆಟ್ಟಿ: ಕಳೆದ ವಾರ ಚಂದನ್ ಶೆಟ್ಟಿ ಹೊಸ ಪೋಸ್ಟ್ ಒಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಅದರಲ್ಲಿ ಹೊಸ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದ ಅವರು ಎಲ್ಲರ ಗಮನ ಸೆಳೆದಿದ್ದರು. ರೆಟ್ರೋ ಮಾದರಿಯ ವೇಷಭೂಷಣದಿಂದ ಗುರುತು ಹಿಡಿಯಲು ಕಷ್ಟ ಎನ್ನುವಷ್ಟು ಬದಲಾಗಿ ಚಂದನ್ ಶೆಟ್ಟಿ ಕಾಣಿಸಿಕೊಂಡಿದ್ದರು. ‘ಹೊಸ ವಿಚಾರ ಸದ್ಯದಲ್ಲೇ..’ ಎಂದು ಅವರು ಬರೆದುಕೊಂಡಿದ್ದರು. ಇದೀಗ ಚಿತ್ರವನ್ನು ಅನೌನ್ಸ್ ಮಾಡಲಾಗಿದೆ.

ಚಂದನ್ ಶೆಟ್ಟಿ ಹಂಚಿಕೊಂಡಿದ್ದ ಪೋಸ್ಟ್ ಇಲ್ಲಿದೆ:

‘ಎಲ್ರ ಕಾಲೆಳಿಯತ್ತೆ ಕಾಲ’ಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ರಚಿಸಿರುವವರು ರಾಜ್​ಗುರು ಹೊಸಕೋಟೆ. ಪ್ರವೀಣ್- ಪ್ರದೀಪ್ ಸಂಗೀತ ನೀಡುತ್ತಿದ್ದು ವಿಶ್ವಜಿತ್ ರಾವ್ ಛಾಯಾಗ್ರಹಣದ ಮಾಡಲಿದ್ದಾರೆ. ಸದ್ಯದಲ್ಲೇ ಚಿತ್ರದ ಮೊದಲ ಲುಕ್​ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ:

ಶೀಘ್ರವೇ ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​ ಎಂಗೇಜ್​ಮೆಂಟ್​; ಅಭಿಮಾನಿ ವಲಯದಲ್ಲಿ ಜೋರಾಯ್ತು ಚರ್ಚೆ

1.5 ಕೋಟಿ ರೂ. ಬೆಲೆಯ ಕಾರು ಗಿಫ್ಟ್​ ಪಡೆದ ‘ಕಿಲಾಡಿ’ ನಿರ್ದೇಶಕ; ಆದರೆ ಚಿತ್ರವೇ ಇನ್ನೂ ರಿಲೀಸ್​ ಆಗಿಲ್ಲ

Follow Us
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ