AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chandan Shetty: ‘ಎಲ್ರ ಕಾಲೆಳಿಯತ್ತೆ ಕಾಲ’ ಎಂದ ಚಂದನ್ ಶೆಟ್ಟಿ; ಇಲ್ಲಿದೆ ಹೊಸ ಸಮಾಚಾರ

Sujay Shastry | Elra Kaaleliyutte Kaala: ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಟನೆಯಲ್ಲೂ ಮೋಡಿ ಮಾಡಲು ಸಿದ್ಧರಾಗುತ್ತಿದ್ಧಾರೆ. ಅವರ ಹೊಸ ಚಿತ್ರ ‘ಎಲ್ರ ಕಾಲೆಳಿಯತ್ತೆ ಕಾಲ’ ಅನೌನ್ಸ್ ಆಗಿದೆ. ಚಿತ್ರದ ಕುರಿತ ಮಾಹಿತಿ ಇಲ್ಲಿದೆ.

Chandan Shetty: ‘ಎಲ್ರ ಕಾಲೆಳಿಯತ್ತೆ ಕಾಲ’ ಎಂದ ಚಂದನ್ ಶೆಟ್ಟಿ; ಇಲ್ಲಿದೆ ಹೊಸ ಸಮಾಚಾರ
‘ಎಲ್ರ ಕಾಲೆಳಿಯತ್ತೆ ಕಾಲ’ ಚಿತ್ರದ ಪೋಸ್ಟರ್, ಚಂದನ್ ಶೆಟ್ಟಿ
TV9 Web
| Edited By: |

Updated on: Jan 30, 2022 | 4:31 PM

Share

ಇತ್ತೀಚೆಗಷ್ಟೇ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ (Chandan Shetty) ರೆಟ್ರೋ ಶೈಲಿಯ ಲುಕ್ ಒಂದರಲ್ಲಿ ಹೊಸ ಫೋಟೋವೊಂದನ್ನು ಹಂಚಿಕೊಂಡಿದ್ದರು. ಇದು ಅಭಿಮಾನಿಗಳ ಕುತೂಹಲ ಹೆಚ್ಚಿಸಿತ್ತು. ಹೊಸ ಚಿತ್ರದಲ್ಲಿ ಅವರು ನಾಯಕನಾಗಿ ನಟಿಸುತ್ತಿದ್ದು, ಅದರ ಲುಕ್ ಇದಾಗಿದೆ ಎಂದೂ ಬಹಿರಂಗವಾಗಿತ್ತು. ಇದೀಗ ಚಂದನ್ ಯಾವ ಚಿತ್ರಕ್ಕಾಗಿ ಗೆಟಪ್ ಬದಲಿಸುತ್ತಿದ್ದಾರೆ? ಚಿತ್ರದ ಹೆಸರೇನು? ಮೊದಲಾದ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ. ‘ಗುಬ್ಬಿ ಮೇಲೆ ಬ್ರಹ್ಮಾಸ್ತ್ರ’ ಮೂಲಕ ಸ್ಯಾಂಡಲ್​ವುಡ್​ನಲ್ಲಿ ನಿರ್ದೇಶಕರಾಗಿ ಗುರುತಿಸಿಕೊಂಡಿದ್ದ, ನಟನೆಯ ಮೂಲಕ ಈಗಾಗಲೇ ಹೆಸರುವಾಸಿಯಾಗಿರುವ ಸುಜಯ್ ಶಾಸ್ತ್ರಿ (Sujay Shastry) ಆಕ್ಷನ್ ಕಟ್ ಹೇಳುತ್ತಿರುವ ಹೊಸ ಚಿತ್ರ ಇದಾಗಿದೆ. ಚಿತ್ರಕ್ಕೆ ‘ಎಲ್ರ ಕಾಲೆಳಿಯತ್ತೆ ಕಾಲ’ (Elra Kaaleliyutte Kaala) ಎಂದು ಹೆಸರಿಡಲಾಗಿದೆ. ಸ್ಯಾಂಡಲ್​ವುಡ್​ನಲ್ಲಿ ವಿಭಿನ್ನ ಶೀರ್ಷಿಕೆಗಳ ಟ್ರೆಂಡ್ ಈ ಮೂಲಕ ಮುಂದುವರೆದಿದ್ದು, ಹೆಸರಿನಿಂದಲೇ ಚಿತ್ರ ಮತ್ತಷ್ಟು ಕುತೂಹಲ ಹುಟ್ಟುಹಾಕಿದೆ.

ಚಿತ್ರದ ಮೊದಲ ಪೋಸ್ಟರ್​ಅನ್ನು ಬಿಡುಗಡೆ ಮಾಡಿ, ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. ಬೆಟ್ಟ- ಗುಡ್ಡ ಪರಿಸರದ ನಡುವೆ ಕೆಂಪು ಡಬ್ಬಿ ಬಸ್ ಒಂದು ಸಾಗುತ್ತಿರುವ ದೃಶ್ಯವನ್ನೊಳಗೊಂಡ ಪೋಸ್ಟರ್​ಅನ್ನು ಹಂಚಿಕೊಳ್ಳಲಾಗಿದೆ. ಜಗದೀಶ್ ಫಿಲ್ಮ್ಸ್ ಪ್ರಸ್ತುತಪಡಿಸುತ್ತಿರುವ ಈ ಚಿತ್ರವನ್ನು ಗೋಕುಲ ಎಂಟರ್​​ಪ್ರೈಸಸ್ ಬ್ಯಾನರ್​ನಲ್ಲಿ ಉಷಾ ಗೋವಿಂದರಾಜು ನಿರ್ಮಾಣ ಮಾಡುತ್ತಿದ್ದಾರೆ.

‘ಎಲ್ರ ಕಾಲೆಳಿಯತ್ತೆ ಕಾಲ’ ಪೋಸ್ಟರ್ ಇಲ್ಲಿದೆ:

ಹೊಸ ಗೆಟಪ್ ಮೂಲಕ ಚಿತ್ರದ ಕುತೂಹಲ ಹೆಚ್ಚಿಸಿದ್ದ ಚಂದನ್ ಶೆಟ್ಟಿ: ಕಳೆದ ವಾರ ಚಂದನ್ ಶೆಟ್ಟಿ ಹೊಸ ಪೋಸ್ಟ್ ಒಂದನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದರು. ಅದರಲ್ಲಿ ಹೊಸ ಗೆಟಪ್​ನಲ್ಲಿ ಕಾಣಿಸಿಕೊಂಡಿದ್ದ ಅವರು ಎಲ್ಲರ ಗಮನ ಸೆಳೆದಿದ್ದರು. ರೆಟ್ರೋ ಮಾದರಿಯ ವೇಷಭೂಷಣದಿಂದ ಗುರುತು ಹಿಡಿಯಲು ಕಷ್ಟ ಎನ್ನುವಷ್ಟು ಬದಲಾಗಿ ಚಂದನ್ ಶೆಟ್ಟಿ ಕಾಣಿಸಿಕೊಂಡಿದ್ದರು. ‘ಹೊಸ ವಿಚಾರ ಸದ್ಯದಲ್ಲೇ..’ ಎಂದು ಅವರು ಬರೆದುಕೊಂಡಿದ್ದರು. ಇದೀಗ ಚಿತ್ರವನ್ನು ಅನೌನ್ಸ್ ಮಾಡಲಾಗಿದೆ.

ಚಂದನ್ ಶೆಟ್ಟಿ ಹಂಚಿಕೊಂಡಿದ್ದ ಪೋಸ್ಟ್ ಇಲ್ಲಿದೆ:

‘ಎಲ್ರ ಕಾಲೆಳಿಯತ್ತೆ ಕಾಲ’ಕ್ಕೆ ಕತೆ, ಚಿತ್ರಕತೆ, ಸಂಭಾಷಣೆ ರಚಿಸಿರುವವರು ರಾಜ್​ಗುರು ಹೊಸಕೋಟೆ. ಪ್ರವೀಣ್- ಪ್ರದೀಪ್ ಸಂಗೀತ ನೀಡುತ್ತಿದ್ದು ವಿಶ್ವಜಿತ್ ರಾವ್ ಛಾಯಾಗ್ರಹಣದ ಮಾಡಲಿದ್ದಾರೆ. ಸದ್ಯದಲ್ಲೇ ಚಿತ್ರದ ಮೊದಲ ಲುಕ್​ ಬಿಡುಗಡೆ ಮಾಡಲಾಗುವುದು ಎಂದು ಚಿತ್ರತಂಡ ತಿಳಿಸಿದೆ.

ಇದನ್ನೂ ಓದಿ:

ಶೀಘ್ರವೇ ಶಮಿತಾ ಶೆಟ್ಟಿ-ರಾಕೇಶ್​ ಬಾಪಟ್​ ಎಂಗೇಜ್​ಮೆಂಟ್​; ಅಭಿಮಾನಿ ವಲಯದಲ್ಲಿ ಜೋರಾಯ್ತು ಚರ್ಚೆ

1.5 ಕೋಟಿ ರೂ. ಬೆಲೆಯ ಕಾರು ಗಿಫ್ಟ್​ ಪಡೆದ ‘ಕಿಲಾಡಿ’ ನಿರ್ದೇಶಕ; ಆದರೆ ಚಿತ್ರವೇ ಇನ್ನೂ ರಿಲೀಸ್​ ಆಗಿಲ್ಲ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ