AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಚಂದನವನದ ಚಿಲುಮೆಗಳು’ ಪುಸ್ತಕ ಬಿಡುಗಡೆ ಮಾಡಿದ ಸ್ಯಾಂಡಲ್​ವುಡ್ ಗಣ್ಯರು

ಕನ್ನಡ ಚಿತ್ರರಂಗದ ಬಗ್ಗೆ ವಿಶೇಷ ಮಾಹಿತಿಗಳನ್ನು ತಿಳಿಸುವಂತಹ ‘ಚಂದನವನದ ಚಿಲುಮೆಗಳು’ ಪುಸ್ತಕ ಬಿಡುಗಡೆ ಆಗಿದೆ. ಕನ್ನಡ ಮತ್ತು ಇಂಗ್ಲಿಷ್​ನಲ್ಲಿ ಈ ಕೃತಿ ಮೂಡಿಬಂದಿದೆ. ಡಾ. ಶರಣು ಹುಲ್ಲೂರು ಮತ್ತು ಎಸ್​. ಶ್ಯಾಮ್ ಪ್ರಸಾದ್ ಅವರು ಈ ಪುಸ್ತಕ ಬರೆದಿದ್ದಾರೆ. ಸ್ಯಾಂಡಲ್​ವುಡ್​ ಗಣ್ಯರು ಕೃತಿ ಬಿಡುಗಡೆ ಮಾಡಿ ಮೆಚ್ಚುಗೆ ಸೂಚಿಸಿದ್ದಾರೆ.

‘ಚಂದನವನದ ಚಿಲುಮೆಗಳು’ ಪುಸ್ತಕ ಬಿಡುಗಡೆ ಮಾಡಿದ ಸ್ಯಾಂಡಲ್​ವುಡ್ ಗಣ್ಯರು
‘ಚಂದನವನದ ಚಿಲುಮೆಗಳು’ ಪುಸ್ತಕ ಬಿಡುಗಡೆ ಕಾರ್ಯಕ್ರಮ
ಮದನ್​ ಕುಮಾರ್​
|

Updated on: Dec 15, 2024 | 6:31 PM

Share

‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ’ ಪ್ರಕಟಿಸಿರುವ ‘ಚಂದನವನದ ಚಿಲುಮೆಗಳು’ (ಕನ್ನಡ), ‘Landmarks of Sandalwood’ (ಇಂಗ್ಲಿಷ್​) ಪುಸ್ತಕವನ್ನು ಇಂದು (ಡಿಸೆಂಬರ್​ 15) ಬಿಡುಗಡೆ ಮಾಡಲಾಯಿತು. ಬೆಂಗಳೂರಿನಲ್ಲಿ ಈ ಪುಸ್ತಕದ ಲೋಕಾರ್ಪಣೆ ಕಾರ್ಯಕ್ರಮ ನಡೆಯಿತು. ಕನ್ನಡದಲ್ಲಿ ಡಾ. ಶರಣು ಹುಲ್ಲೂರು ಹಾಗೂ ಇಂಗ್ಲಿಷ್​ನಲ್ಲಿ ಎಸ್. ಶ್ಯಾಮ್ ಪ್ರಸಾದ್ ಅವರು ಈ ಪುಸ್ತಕವನ್ನು ಬರೆದಿದ್ದಾರೆ. ಸಂಗೀತ ನಿರ್ದೇಶಕ ಹಂಸಲೇಖ, ಹಿರಿಯ ನಿರ್ದೇಶಕರಾದ ನಾಗತಿಹಳ್ಳಿ ಚಂದ್ರಶೇಖರ್, ಟಿ.ಎಸ್. ನಾಗಾಭರಣ, ಖ್ಯಾತ ನಟ ಶ್ರೀಮುರಳಿ ಹಾಗೂ ಮಾಧ್ಯಮ ಅಕಾಡೆಮಿ ಅಧ್ಯಕ್ಷೆ ಆಯೇಷಾ ಖಾನಂ ಅವರು ದ್ವಿಭಾಷಾ ಪುಸ್ತಕವನ್ನು ಬಿಡುಗಡೆ ಮಾಡಿ ಶುಭ ಕೋರಿದರು.

ಪತ್ರಿಕೋದ್ಯಮದಲ್ಲಿ ಹಲವು ವರ್ಷಗಳ ಅನುಭವ ಹೊಂದಿರುವ ಡಾ. ಶರಣು ಹುಲ್ಲೂರು ಹಾಗೂ ಎಸ್. ಶ್ಯಾಮ್ ಪ್ರಸಾದ್ ಅವರು ಜೊತೆಯಾಗಿ ಆರೇಳು ತಿಂಗಳುಗಳ ಕಾಲ ಈ ಪುಸ್ತಕಕ್ಕಾಗಿ ಶ್ರಮಿಸಿದ್ದಾರೆ. ಈ ಲೇಖಕರನ್ನು ಹಂಸಲೇಖ ಅವರು ಶ್ಲಾಘಿಸಿದರು. ಈ ರೀತಿಯ ದಾಖಲೆಗಳು ಹೆಚ್ಚಾಗಲಿ ಎಂದು ಹಂಸಲೇಖ ಆಶಿಸಿದರು.

ಪುಸ್ತಕದ ವಿಶೇಷ:

ಕನ್ನಡ ಚಿತ್ರರಂಗ 90 ವರ್ಷ ಪೂರೈಸಿರುವ ಈ ಸಂದರ್ಭದಲ್ಲಿ ‘ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ’ ಈ ಅಪರೂಪದ ಕಾಫಿ ಟೇಬಲ್ ಪುಸ್ತಕವನ್ನು ಹೊರತಂದಿದೆ. ಕನ್ನಡ ಚಿತ್ರರಂಗಕ್ಕೆ ತಿರುವು ನೀಡಿದ 90 ಸಿನಿಮಾಗಳ ಬಗ್ಗೆ ವಿಶೇಷ ದಾಖಲೆಗಳು ಹಾಗೂ ಅಪರೂಪದ ಫೋಟೋಗಳು ಈ ಪುಸ್ತಕದಲ್ಲಿ ಇದೆ. ಸ್ಯಾಂಡಲ್​ವುಡ್​ ಬಗ್ಗೆ ದ್ವಿಭಾಷೆಯಲ್ಲಿ ಪ್ರಕಟವಾದ ಕನ್ನಡದ ಮೊದಲ ಕಾಫಿ ಟೇಬಲ್ ಪುಸ್ತಕ ಇದು ಎಂಬುದು ವಿಶೇಷ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಹಿರಿಯ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಅವರು ಮಾತನಾಡಿ, ‘ಪುಸ್ತಕ ರೂಪದಲ್ಲಿ ಸಿನಿಮಾ ಕುರಿತಾದ ವಿಷಯಗಳು ಕನ್ನಡದಲ್ಲಿ ಬಹಳ ವಿರಳ. ದಾಖಲೀಕರಣವೂ ಇಲ್ಲ. ಅದು ಕನ್ನಡದಲ್ಲಿ ಹೆಚ್ಚಾಗಲಿ’ ಎಂದು ಹೇಳಿದರು. ಟಿ.ಎಸ್. ನಾಗಾಭರಣ ಅವರು ಮಾತನಾಡಿ, ‘ಸಿನಿಮಾ ಪಠ್ಯಗಳ ಜರೂರತ್ತು ಇಂದಿನ ದಿನವಿದೆ. ಅದು ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಮೂಲಕ ಆಗಿರುವುದಕ್ಕೆ ಅಭಿನಂದನೆ ಸಲ್ಲಿಸಲೇಬೇಕು. ಪುಸ್ತಕ ಎಲ್ಲರ ಮನೆಯಲ್ಲೂ ಇರಲಿ’ ಎಂದು ಹೇಳಿದರು.

ಇದನ್ನೂ ಓದಿ: ಕನ್ನಡದ 100 ಸ್ಮರಣೀಯ ಸಿನಿಮಾಗಳು ಯಾವವು ಗೊತ್ತಾ? ಶರಣು ಹುಲ್ಲೂರು ಬರೆದ ಪುಸ್ತಕದಲ್ಲಿದೆ ಉತ್ತರ

ಕಾರ್ಯಕ್ರಮದಲ್ಲಿ ಹಾಜರಿದ್ದ ನಟ ಶ್ರೀಮುರಳಿ ಅವರು ಸಿನಿಮಾ ಪತ್ರಕರ್ತರು ಮತ್ತು ಚಿತ್ರರಂಗದ ನಂಟಿನ ಕುರಿತು ಮಾತನಾಡಿದರು. ಅಲ್ಲದೇ, ‘ಗಾನಯೋಗಿ ಪಂಚಾಕ್ಷರಿ ಗವಾಯಿ’ ಸಿನಿಮಾದ ಗೀತೆ ಹಾಡಿ ರಂಜಿಸಿದರು. ಡಾ. ರಾಜ್​ಕುಮಾರ್​ ಅಪಹರಣ ಸೇರಿದಂತೆ ತಮ್ಮ ಬಾಲ್ಯದ ದಿನಗಳ ಸಿನಿಮಾ ಅನುಭವಗಳ ಕುರಿತಾಗಿ ಆಯೇಷಾ ಖಾನಂ ಅವರು ಮಾತನಾಡಿದರು. ಕನ್ನಡದ ಚಿತ್ರರಂಗದ ಹಲವು ತಂತ್ರಜ್ಞರು, ಕಲಾವಿದರು, ಪತ್ರಕರ್ತರು ಹಾಗೂ ಸಾಹಿತ್ಯಾಸಕ್ತರು ಈ ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ