AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Huliya: ‘ಹುಲಿಯ’ನಿಗೆ 50ಕ್ಕೂ ಹೆಚ್ಚು ಸೆಲೆಬ್ರಿಟಿಗಳ ಬೆಂಬಲ

Huliya: ದೇವರಾಜ್ ನಟಿಸಿದ್ದ ಹುಲಿಯಾ ಹೆಸರಿನ ಸಿನಿಮಾ 1996 ರಲ್ಲಿ ಬಿಡುಗಡೆ ಆಗಿ ಸೂಪರ್ ಹಿಟ್ ಆಗಿತ್ತು. ಇದೀಗ ಅದೇ ಹೆಸರಿಟ್ಟುಕೊಂಡ ಹೊಸ ಸಿನಿಮಾ ರೆಡಿಯಾಗುತ್ತಿದೆ.

Huliya: 'ಹುಲಿಯ'ನಿಗೆ 50ಕ್ಕೂ ಹೆಚ್ಚು ಸೆಲೆಬ್ರಿಟಿಗಳ ಬೆಂಬಲ
ಹುಲಿಯಾ
ಮಂಜುನಾಥ ಸಿ.
|

Updated on: Apr 29, 2023 | 10:01 PM

Share

ಹುಲಿಯಾ (Huliya) ಹೆಸರಿನ ಕನ್ನಡ ಸಿನಿಮಾ ಈಗಾಗಲೇ ಬಂದಿದೆ. ದೇವರಾಜ್ (Devaraj) ನಟಿಸಿದ್ದ ಆಕ್ಷನ್ ಸಿನಿಮಾ ಹುಲಿಯಾ 1996 ರಲ್ಲಿ ಬಿಡುಗಡೆ ಆಗಿ ಹಿಟ್ ಆಗಿತ್ತು. ಇನ್ನು ಹೌದು ಹುಲಿಯಾ ಗೊತ್ತೆ ಇದೆಯಲ್ಲ, ಸಾಮಾಜಿಕ ಜಾಲತಾಣದಲ್ಲಿ ಈ ಡೈಲಾಗ್ ಬಹಳ ಜನಪ್ರಿಯವಾಗಿತ್ತು. ಆದರೆ ಇದೀಗ ದೇವರಾಜ್ ನಟಿಸಿದ್ದ ಹುಲಿಯಾ ಸಿನಿಮಾದ ಶೀರ್ಷಿಕೆಯನ್ನೇ ಇರಿಸಿಕೊಂಡು ಹೊಸ ಸಿನಿಮಾವೊಂದು ತೆರೆಗೆ ಬರಲು ಸಜ್ಜಾಗುತ್ತಿದೆ.

ಸ್ಯಾಂಡಲ್ ವುಡ್ ನಲ್ಲಿ (Sandalwood) ಸೂಪರ್ ಹಿಟ್ ಸಿನಿಮಾಗಳ ಟೈಟಲ್ ಮರುಬಳಕೆ ಆಗುವುದು ಹೊಸತೆನಲ್ಲ. ಈಗ ಡೈನಾಮಿಕ್ ಸ್ಟಾರ್ ದೇವರಾಜ್ ನಟನೆಯ ‘ಹುಲಿಯಾ’ ಶೀರ್ಷಿಕೆ ಮರುಬಳಕೆ ಮಾಡಿಕೊಂಡು ಹೊಸ ಚಿತ್ರವೊಂದು ತಯಾರಾಗುತ್ತಿದೆ. ತೂತುಮಡಿಕೆ ಸಿನಿಮಾ ಮೂಲಕ ಭರವಸೆ ಮೂಡಿಸಿದ್ದ ಯುವ ನಿರ್ದೇಶಕ ಮತ್ತು ನಟ ಚಂದ್ರಕೀರ್ತಿ ಎರಡನೇ ಸಿನಿಮಾಕ್ಕೆ ‘ಹುಲಿಯಾ’ ಎಂಬ ಟೈಟಲ್ ಇಡಲಾಗಿದೆ. ದೇವರಾಜ್ ಅವರ ಆಶೀರ್ವಾದೊಂದಿಗೆ ಶುರುವಾಗುತ್ತಿರುವ ಈ ಸಿನಿಮಾದ ಫಸ್ಟ್ ಲುಕ್ ಹಾಗೂ ಟೈಟಲ್ ಪೋಸ್ಟರ್ 50ಕ್ಕೂ ಹೆಚ್ಚು ಸೆಲೆಬ್ರಿಟಿಗಳಿಂದ ಏಕಕಾಲಕ್ಕೆ ಬಿಡುಗಡೆಯಾಗಿದೆ.

ಸಿಲಿಕಾನ್ ಸಿಟಿ, ಕಿಸ್, ಮೂಕವಿಸ್ಮಿತ, ಬೆಂಕಿ ಸೇರಿದಂತೆ ಹಲವು ಚಿತ್ರಗಳಲ್ಲಿ ನಟಿಸಿರುವ ಚಂದ್ರಕೀರ್ತಿ ತೂತುಮಡಿಕೆ ಸಿನಿಮಾ ಮೂಲಕ ನಿರ್ದೇಶಕರಾಗಿ ಬಡ್ತಿ ಪಡೆದಿದ್ದರು. ಮೊದಲ ಚಿತ್ರದಲ್ಲಿಯೇ ಗಮನಸೆಳೆದಿದ್ದ ಅವರಿಗೆ ಹುಲಿಯಾ ಮೂಲಕ ಲವ್ ಹಾಗೂ ಆಕ್ಷನ್ ಕಥೆಯನ್ನು ಆಯ್ಕೆ ಮಾಡಿಕೊಂಡು ಪ್ರೇಕ್ಷಕರನ್ನು ರಂಜಿಸಲು ಅಣಿಯಾಗುತ್ತಿದ್ದಾರೆ. ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುವುದರ ಜೊತೆಗೆ ಚಂದ್ರಕೀರ್ತಿ ನಾಯಕನಾಗಿಯೂ ನಟಿಸುತ್ತಿದ್ದಾರೆ. ಹುಲಿಯಾ ಪೋಸ್ಟರ್ ನಲ್ಲಿ ಅವರು ಸಖತ್ ರಗಡ್ ಆಗಿ ಕಾಣಿಸಿಕೊಂಡಿದ್ದಾರೆ. ತೂತುಮಡಿಕೆ ಸಿನಿಮಾ ನಿರ್ಮಾಣ ಮಾಡಿದ್ದ ಸರ್ವತಾ ಸಿನಿ ಗ್ಯಾರೇಜ್, ಮಧು ರಾವ್ ಹಾಗೂ ವಸಂತ್ ವಲ್ಲಭ್ ಈ ಚಿತ್ರಕ್ಕೆ ಹಣ ಹಾಕುತ್ತಿದ್ದಾರೆ. ಸ್ವಾಮಿನಾಥನ್ ಆರ್ ಕೆ ಸಂಗೀತ, ಭಜರಂಗಿ, ವೇದ ಹಾಗೂ ಬೆಲ್ ಬಾಟಂ ಸಂಭಾಷಣೆಗಾರ ರಘು ನಿಡುವಳ್ಳಿ ಮಾತು ಚಿತ್ರಕ್ಕಿದೆ. ಟೈಟಲ್ ಹಾಗೂ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ ಮಾಡಿರುವ ಹುಲಿಯಾ ಚಿತ್ರತಂಡ ಶೀಘ್ರದಲ್ಲಿ ಉಳಿದ ತಾಂತ್ರಿಕ ಹಾಗೂ ತಾರಾಬಳಗ ಬಗ್ಗೆ ಮಾಹಿತಿ ನೀಡಲಿದೆ.

ಸಿನಿಮಾದ ಮೋಷನ್ ಪೋಸ್ಟರ್ ಬಿಡುಗಡೆ ಆಗಿದ್ದು, ”ದಟ್ಟ ಕಾನನದ ಅಸ್ಥಿತ್ವವೇ ಕ್ರೌರ್ಯ, ಇಲ್ಲಿ ಉಳಿಯಲು ಹೋರಾಟ ಅನಿವಾರ್ಯ, ಹಿಡಿಯದೇ ಹೋದರೆ ಕಠಾರಿ, ಕ್ರೂರ ವಿಧಿಗೆ ನೀನೆ ಶಿಕಾರಿ” ಎಂಬ ಪವರ್​ಫುಲ್ ಡೈಲಾಗ್ ಜೊತೆಗೆ ಅರಣ್ಯದ ದೃಶ್ಯಗಳು, ಕ್ರೂರ ಮೃಗಗಳ ಚಿತ್ರಗಳಿವೆ ಜೊತೆಗೆ ಕಟ್ಟುಮಸ್ತು ದೇಹದ ನಾಯಕ ರೋಷದಲ್ಲಿ ಚೀರುತ್ತಿರುವ ದೃಶ್ಯವೂ ಇದೆ. ಒಟ್ಟಾರೆಯಾಗಿ ಟೈಟಲ್ ಟೀಸರ್ ಗಮನ ಸೆಳೆಯುತ್ತಿದ್ದು, ಅರಣ್ಯದಲ್ಲಿ ನಡೆವ ಆಕ್ಷನ್ ಥ್ರಿಲ್ಲರ್ ಕತೆಯನ್ನು ಈ ಸಿನಿಮಾ ಒಳಗೊಂಡಿರಲಿದೆ ಎಂದು ಊಹಿಸಬಹುದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯಾದಗಿರಿ ಭೂಗರ್ಭದಲ್ಲಿ ಅಡಗಿದೆಯಾ ಖನಿಜ ನಿಕ್ಷೇಪ? ಹೆಲಿಕಾಪ್ಟರ್ ಮೂಲಕ ಶೋಧ
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಮೀನ ರಾಶಿಗೆ ಈ ವರ್ಷ ಹೇಗಿರಲಿದೆ?
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ
ಯುಗಾದಿ ವರ್ಷ ಭವಿಷ್ಯ; ಈ ರಾಶಿಗೆ ವಿವಾಹ ಯೋಗ ಹಾಗೂ ಹೊಸ ಉದ್ಯೋಗಾವಕಾಶ