AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘KA 11 1977’ ಸಿನಿಮಾ ಟೈಟಲ್​ ಅನಾವರಣ ಮಾಡಿದ ಸಾಹಿತಿ ಚಂದ್ರಶೇಖರ ಕಂಬಾರ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರಾದ ಚಂದ್ರಶೇಖರ ಕಂಬಾರ ಅವರು ‘KA 11 1977’ ಸಿನಿಮಾದ ಶೀರ್ಷಿಕೆ ಅನಾವರಣ ಮಾಡಿದ್ದಾರೆ. ಸದ್ಯದಲ್ಲೇ ಈ ಸಿನಿಮಾಗೆ ಮುಹೂರ್ತ ನೆರವೇರಲಿದೆ. ಜಗದೀಶ್ ಕೊಪ್ಪ ಅವರು ಈ ಸಿನಿಮಾಗೆ ನಿರ್ದೇಶನ ಮಾಡುತ್ತಿದ್ದಾರೆ. ಚಂದ್ರಶೇಖರ ಕಂಬಾರ ಅವರು ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.

‘KA 11 1977’ ಸಿನಿಮಾ ಟೈಟಲ್​ ಅನಾವರಣ ಮಾಡಿದ ಸಾಹಿತಿ ಚಂದ್ರಶೇಖರ ಕಂಬಾರ
Ka 11 1977 Movie Team
ಮದನ್​ ಕುಮಾರ್​
|

Updated on: Jan 14, 2025 | 9:34 PM

Share

ಪ್ರೇಕ್ಷಕರನ್ನು ಮೊದಲು ತಲುಪುವುದೇ ಸಿನಿಮಾದ ಟೈಟಲ್. ಜನರ ಗಮನ ಬೇಗ ಸೆಳೆದುಕೊಳ್ಳಬೇಕು ಎಂದರೆ ಶೀರ್ಷಿಕೆ ಚೆನ್ನಾಗಿರಬೇಕು. ಹಾಗಾಗಿ ಡಿಫರೆಂಟ್ ಆದ ಟೈಟಲ್​ಗಳನ್ನು ಚಿತ್ರತಂಡದವರು ಆಯ್ಕೆ ಮಾಡಿಕೊಳ್ಳುತ್ತಾರೆ. ಅದಕ್ಕೆ ಲೇಟೆಸ್ಟ್​ ಉದಾಹರಣೆ ‘KA 11 1977’. ಇತ್ತೀಚೆಗೆ ಈ ಸಿನಿಮಾದ ಶೀರ್ಷಿಕೆ ಅನಾವರಣ ಮಾಡಲಾಯಿತು. ‘KA-11-1977’ ಟೈಟಲ್​ ಅನ್ನು ಜ್ಞಾನಪೀಠ ಪ್ರಶಸ್ತಿ ಪುರಸ್ಕ್ರತ ಸಾಹಿತಿ ಚಂದ್ರಶೇಖರ ಕಂಬಾರ ಅವರು ಬಿಡುಗಡೆ ಮಾಡಿದ್ದು ವಿಶೇಷ.

‘KA-11-1977’ ಶೀರ್ಷಿಕೆ ಅನಾವರಣ ಮಾಡಿದ ಬಳಿಕ ಚಂದ್ರಶೇಖರ ಕಂಬಾರ ಅವರು ಮಾತನಾಡಿದರು. ‘ಶೀರ್ಷಿಕೆ ನೋಡಿದರೆ ಈ ಸಿನಿಮಾ ಹೊಸ ರೀತಿಯಲ್ಲಿ ಬರಬಹುದು ಅಂತ ತಿಳಿಯುತ್ತದೆ. ಈಗಿನ ಜನರು ಈ ರೀತಿಯ ಸಿನಿಮಾಗಳನ್ನೇ ಇಷ್ಟಪಡುತ್ತಾರೆ. ಸಿನಿಮಾ ಎಂಬುದು ಮನರಂಜನಾ ಲೋಕ. ಅದರಂತೆ ನೀವು ಅಂಥದ್ದೇ ಸಿನಿಮಾ ನೀಡುವಿರಿ ಅಂತ ನಂಬಿರುತ್ತೇನೆ. ಎಲ್ಲರಂತೆ ನಾನು ಸಹ ಸಿನಿಮಾ ನೋಡಲು ಕಾಯುತ್ತಿರುತ್ತೇನೆ. ಚಿತ್ರತಂಡಕ್ಕೆ ಶುಭವಾಗಲಿ’ ಎಂದು ಚಂದ್ರಶೇಖರ ಕಂಬಾರರು ಹೇಳಿದರು.

ಶರಣ್ ನಟಿಸಿದ್ದ ‘ಕಾಲೇಜ್ ಕಾಲೇಜ್’, ‘ಥ್ಯಾಂಕ್ಸ್’ ಸಿನಿಮಾಗಳಿಗೆ ನಿರ್ದೇಶನ ಮಾಡಿದ್ದ ಜಗದೀಶ್ ಕೊಪ್ಪ ಅವರು ಈಗ ದೊಡ್ಡ ಗ್ಯಾಪ್ ಬಳಿಕ ಮತ್ತೆ ಆ್ಯಕ್ಷನ್​-ಕಟ್​ ಹೇಳಲು ಬಂದಿದ್ದಾರೆ. ‘KA-11-1977’ ಸಿನಿಮಾಗೆ ನಿರ್ದೇಶನ ಮಾಡುವುದರ ಜೊತೆಗೆ ಕಥೆ ಹಾಗೂ ಚಿತ್ರಕಥೆ ಬರೆದಿದ್ದಾರೆ. ಅಷ್ಟೇ ಅಲ್ಲದೇ, ಸಹ ನಿರ್ಮಾಪಕರಾಗಿಯೂ ಕೆಲಸ ಮಾಡುತ್ತಿದ್ದಾರೆ.

‘ಪ್ರಕಾಶ್ ಪ್ರೊಡಕ್ಷನ್’ ಮೂಲಕ ಬೆಂಗಳೂರಿನ ಉದ್ಯಮಿ ಹೆಚ್. ಪ್ರಕಾಶ್ ಅವರು ಈ ಸಿನಿಮಾಗೆ ಬಂಡವಾಳ ಹೂಡುತ್ತಿದ್ದಾರೆ. ಈ ಸಿನಿಮಾ ವಿನೂತನ, ವಿಶಿಷ್ಟ ಮತ್ತು ವಿಸ್ಮಯಗಳಿಂದ ಕೂಡಿರುತ್ತದೆ ಎಂದು ಚಿತ್ರತಂಡದವರು ಹೇಳಿದ್ದಾರೆ. ಸದ್ಯಕ್ಕೆ ಟೈಟಲ್ ಪೋಸ್ಟರ್ ಮಾತ್ರ ಹೊರಬಂದಿದೆ. ಕಥೆಯಲ್ಲಿ ಕುತೂಹಲಕಾರಿ ಅಂಶಗಳು ಇರುವುದರಿಂದ ಕಥೆಯ ಎಳೆಯನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ.

ಇದನ್ನೂ ಓದಿ: 7 ತಿಂಗಳ ಬಳಿಕ ಮೌನ ಮುರಿದ ನಟ ದರ್ಶನ್; ಅಭಿಮಾನಿಗಳಿಗೆ ಸಂಕ್ರಾಂತಿ ಸಂದೇಶ

ನಟ ನವೀನ್ ಕೃಷ್ಣ ಅವರು ಈ ಸಿನಿಮಾದಲ್ಲಿ ನಟಿಸುವುದರ ಜೊತೆಗೆ ಸಂಭಾಷಣೆ ಕೂಡ ಬರೆಯುತ್ತಿದ್ದಾರೆ. ಒಂದು ಮುಖ್ಯ ಪಾತ್ರದಲ್ಲಿ ಸಂಗಮೇಶ ಉಪಾಸೆ ನಟಿಸಲಿದ್ದಾರೆ. ಶಿವಕುಮಾರ ಆರಾಧ್ಯ, ತಾರಾ, ರೀಮಾ, ಬೇಬಿ ರಚನಾ ಮುಂತಾದವರು ಈ ಸಿನಿಮಾದ ಪಾತ್ರವರ್ಗದಲ್ಲಿ ಇದ್ದಾರೆ. ಪಳಿನಿ ಡಿ ಸೇನಾಪತಿ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಛಾಯಾಗ್ರಹಣದ ಜವಾಬ್ದಾರಿ ರೇಣುಕುಮಾರ್ ಅವರದ್ದು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!