AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವ ಬಾಲಿವುಡ್ ಹೀರೋಗೂ ಕಡಿಮೆ ಇಲ್ಲ ಚರಣ್ ರಾಜ್; ಇದೆ ನೂರು ಕೋಟಿ ಆಸ್ತಿ

ನಟ ಚರಣ್ ರಾಜ್ ತಮ್ಮ ಸಿನಿಮಾದ ಸಂಪಾದನೆಯನ್ನು ಬುದ್ಧಿವಂತಿಕೆಯಿಂದ ರಿಯಲ್ ಎಸ್ಟೇಟ್‌ನಲ್ಲಿ ಹೂಡಿಕೆ ಮಾಡಿದ್ದಾರೆ. ನಂದಿ ಬೆಟ್ಟದ ಬಳಿ 1984ರಲ್ಲಿ 54 ಸಾವಿರಕ್ಕೆ ಖರೀದಿಸಿದ 22 ಎಕರೆ ಭೂಮಿ ಈಗ ಕೋಟಿಗಟ್ಟಲೆ ಮೌಲ್ಯ ಹೊಂದಿದೆ. ಕನಕಪುರ ರಸ್ತೆ, ಸದಾಶಿವ ನಗರದಲ್ಲಿ ಆಸ್ತಿ ಹೊಂದಿರುವ ಚರಣ್ ರಾಜ್ ಅವರ ಒಟ್ಟು ಸಂಪತ್ತು 100 ಕೋಟಿಗೂ ಅಧಿಕವಾಗಿದೆ.

ಯಾವ ಬಾಲಿವುಡ್ ಹೀರೋಗೂ ಕಡಿಮೆ ಇಲ್ಲ ಚರಣ್ ರಾಜ್; ಇದೆ ನೂರು ಕೋಟಿ ಆಸ್ತಿ
ಚರಣ್ ರಾಜ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Dec 09, 2025 | 7:53 AM

Share

ನಟ ಚರಣ್ ರಾಜ್ ಅವರು ಅನೇಕ ವಿಲನ್ ಪಾತ್ರ, ಪೋಷಕ ಪಾತ್ರಗಳನ್ನು ಮಾಡಿ, ಹೀರೋ ಆಗಿ ಗಮನ ಸೆಳೆದಿದ್ದಾರೆ. ಸಾಕಷ್ಟು ಸೆಲೆಬ್ರಿಟಿಗಳ ಜೊತೆ ಅವರು ತೆರೆಹಂಚಿಕೊಂಡಿದ್ದಾರೆ. ಅವರು ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಪರಭಾಷೆಯಲ್ಲೂ ಅವರು ನಟಿಸಿದ್ದಾರೆ. ಅವರು ಸಿನಿಮಾದಲ್ಲಿ ಮಿಂಚುತ್ತಿದ್ದ ಸಂದರ್ಭದಲ್ಲಿ ಬಂದ ಹಣಗಳನ್ನು ಹೂಡಿಕೆ ಮಾಡುತ್ತಿದ್ದರು.

ಇತ್ತೀಚಿಗಿನ ಸೆಲೆಬ್ರಿಟಿಗಳ ಬಗ್ಗೆ ನಾವು ಹೊಸದಾಗಿ ಹೇಳಬೇಕಾಗಿಲ್ಲ. ಸಿನಿಮಾಗಳಿಗೆ ಕೋಟಿ ಕೋಟಿ ಸಂಭಾವನೆ ಪಡೆಯುವ ಅವರು ನಂತರ ಅದನ್ನು ಉದ್ಯಮಗಳಿಗೆ ಹೂಡಿಕೆ ಮಾಡುತ್ತಾರೆ. ಆದರೆ, ಹಿಂದಿನ ಹೀರೋಗಳು ಆ ರೀತಿ ಇರಲಿಲ್ಲ. ಚರಣ್ ರಾಜ್ ಭಿನ್ನ. ಅವರು ಕನಕಪುರ ರಸ್ತೆ, ನಂದಿಬೆಟ್ಟದ ಬಳಿ ಜಾಗ ಹೊಂದಿದ್ದಾರೆ. ಸದಾಶಿವ ನಗರದಲ್ಲಿ ಮನೆ ಹೊಂದಿದ್ದಾರೆ. ಅವರು ಹೂಡಿಕೆ ಬಗ್ಗೆ  ಕಲಾ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ್ದಾರೆ.

‘ನಂದಿ ಬೆಟ್ಟದ ಬಳಿ 22 ಎಕರೆ ತೆಗೆದುಕೊಂಡಿದ್ದೆ. 1984ರಲ್ಲಿ ಆ ಜಾಗಕ್ಕೆ 54 ಸಾವಿರ ರೂಪಾಯಿ ಕೊಟ್ಟಿದ್ದೆ. ಈಗ ಆ ಜಾಗ ಎಕರೆಗೆ 3-4 ಕೋಟಿ ರೂಪಾಯಿ ಬೆಲೆ ಬಾಳುತ್ತದೆ. ಲೇಔಟ್ ಏನೂ ಮಾಡಿಲ್ಲ. ನಾನು ಆಗ ಸ್ಟುಡಿಯೋ ಮಾಡುವ ಉದ್ದೇಶ ಹೊಂದಿದ್ದೆ’ ಎಂದು ಅವರು ಹೇಳಿದ್ದಾರೆ.

‘ಎಲ್ಲರೂ ಆ ಜಾಗ ವಿಚಾರಿಸುತ್ತಿದ್ದಾರೆ. ಜಾಯಿಂಟ್ ವೆಂಚರ್ಸ್ ಮಾಡೋಣ ಎನ್ನುತ್ತಿದ್ದಾರೆ. ಹೆಣ್ಣು, ಹೊನ್ನು, ಮಣ್ಣು ಸಿಗಬೇಕಾದರೆ ನಿಮಗೆ ಋಣ ಬೇಕು’ ಎಂದು ಚರಣ್ ರಾಜ್ ಹೇಳಿದ್ದಾರೆ. 22 ಎಕರೆಗೆ ಕನಿಷ್ಠ ಮೂರು ಕೋಟಿ ಎಂದರೂ, ಇದರ ಬೆಲೆ 66 ಕೋಟಿ ರೂಪಾಯಿ ಆಗಲಿದೆ.

ಚರಣ್ ರಾಜ್ ಅವರು ವಿವಿಧ ಕಡೆಗಳಲ್ಲಿ ಆಸ್ತಿ ಹೊಂದಿದ್ದಾರೆ. ಅದೆಲ್ಲವೂ ಸೇರಿದರೆ 100 ಕೋಟಿ ರೂಪಾಯಿಗೂ ಅಧಿಕವಾಗಲಿದೆ. ಚರಣ್ ರಾಜ್ ಅವರು ಏರ್​ಪೋರ್ಟ್ ಸಮೀಪವೇ ತೋಟದ ಮನೆ ಕೂಡ ಹೊಂದಿದ್ದಾರೆ. ಇದು ಕೂಡ ಕೋಟಿ ಕೋಟಿ ಬೆಲೆ ಬಾಳುತ್ತದೆ. ಅವರು 11 ಭಾಷೆಗಳಲ್ಲಿ ನಟಿಸಿ ಗಮನ ಸೆಳೆದಿದ್ದಾರೆ. ಚರಣ್ ರಾಜ್ ತಂದೆ ಸಾಕಷ್ಟು ಭೂಮಿ ಖರೀದಿಸುತ್ತಿದ್ದರು. ಅದೇ ರೀತಿ ಚರಣ್ ರಾಜ್ ಕೂಡ ಭೂಮಿ ಖರೀದಿ ಮಾಡಿದ್ದಾರೆ.

ಇದನ್ನೂ ಓದಿ: ಅಂಬರೀಷ್ ಕಾರಣದಿಂದ ಕಾರು ಖರೀದಿಸಿದ ಚರಣ್ ರಾಜ್; 40 ವರ್ಷವಾದರೂ ಇನ್ನೂ ಇದೆ

ಚರಣ್ ರಾಜ್ ಅವರು ಇತ್ತೀಚೆಗೆ ಚಿತ್ರರಂಗದಲ್ಲಿ ಅಷ್ಟಾಗಿ ಆ್ಯಕ್ಟೀವ್ ಆಗಿಲ್ಲ. ಅವರು ಚೆನ್ನೈನಲ್ಲಿ ವಾಸವಿರುತ್ತಾರೆ. ಸಮಯ ಸಿಕ್ಕಾಗ ಅವರು ಬೆಂಗಳೂರಿನ ತೋಟದ ಮನೆಗೆ ಬಂದು ಉಳಿದುಕೊಳ್ಳುತ್ತಾರೆ. ಅವರಿಗೆ ನಗರ ಜೀವನ ಸಾಕಾಗಿದೆ. ಹೀಗಾಗಿ, ತೋಟದ ಮನೆಯಲ್ಲಿ ಇರೋಕೆ ಹೆಚ್ಚು ಆಸಕ್ತಿ ತೋರಿಸುತ್ತಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ 

Follow Us
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಇಂಡೋನೇಷ್ಯಾದ 1,000 ವರ್ಷದ ಶಿವನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಭಾರತ ಬೆಂಬಲ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ಶಿರಾಡಿ ಘಾಟ್‌ನಲ್ಲಿ ನಿಯಂತ್ರಣ ತಪ್ಪಿ ಡಾಂಬರ್ ಟ್ಯಾಂಕರ್ ಪಲ್ಟಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ರಾಮಾಯಣ, ಮಹಾಭಾರತ ಇಂಡೋನೇಷ್ಯಾ- ಭಾರತದ ಬಾಂಧವ್ಯದ ಸ್ತಂಭಗಳು; ಪ್ರಧಾನಿ ಮೋದಿ
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ವಯನಾಡಿನಲ್ಲಿ ಮತ್ತೊಮ್ಮೆ ಪ್ರಕೃತಿ ವಿಕೋಪ; ಭೂಕುಸಿತದಿಂದ ಮೂವರು ಸಾವು
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮುಸ್ಲಿಂ ಹೆಸರನ್ನ ಡಿಲೀಟ್ ಮಾಡದಂತೆ ಡಿಸಿಗೆ ನಿರ್ದೇಶನ
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ:ಆಗುಂಬೆಯ ಸೊಬಗು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
ಗದಗನಲ್ಲಿ ಮನಕಲಕುವ ದೃಶ್ಯ: ಮಳೆಗಾಗಿ ಮಂಡಿಯೂರಿ ಕಣ್ಣೀರಿಟ್ಟ ರೈತರು
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
‘ಕರಾವಳಿ’ ಕಿರಿಕ್; ನಟ ಪ್ರಜ್ವಲ್, ನಿರ್ದೇಶಕ ಗುರುದತ್ ನಡುವೆ ಆಗಿದ್ದೇನು?
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
ಹಾಸನದಲ್ಲಿ ಮಳೆ ಆರ್ಭಟಕ್ಕೆ ಶಿರಾಡಿಘಾಟ್ ವ್ಯಾಪ್ತಿಯಲ್ಲಿ ಭೂಕುಸಿತ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ
SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು: ಫಾರ್ಮ್​ ತುಂಬಲು ಶಾಲಾ ಮಕ್ಕಳ ಬಳಕೆ