AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂಪರ್​ ಸ್ಟಾರ್​’ ಚಿತ್ರದ ನಿರ್ದೇಶಕನ ವಿರುದ್ಧ 1.10 ಕೋಟಿ ರೂಪಾಯಿ ವಂಚನೆ ಆರೋಪ; ಕೇಸ್​ ದಾಖಲು

ನಿರ್ದೇಶಕ ರಮೇಶ್​ ವೆಂಕಟೇಶ್​ ಬಾಬು ವಿರುದ್ಧ ಆರೋಪ ಕೇಳಿಬಂದಿದೆ. ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂದು ದೂರು ದಾಖಲಾಗಿದೆ.

‘ಸೂಪರ್​ ಸ್ಟಾರ್​’ ಚಿತ್ರದ ನಿರ್ದೇಶಕನ ವಿರುದ್ಧ 1.10 ಕೋಟಿ ರೂಪಾಯಿ ವಂಚನೆ ಆರೋಪ; ಕೇಸ್​ ದಾಖಲು
‘ಸೂಪರ್ ಸ್ಟಾರ್’ ಕನ್ನಡ ಸಿನಿಮಾ
TV9 Web
| Edited By: |

Updated on:Nov 14, 2022 | 12:37 PM

Share

ನಟ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್​ ಸುಧೀಂದ್ರ (Niranjan Sudhindra) ಅವರು ನಟಿಸುತ್ತಿರುವ ‘ಸೂಪರ್​ ಸ್ಟಾರ್​’ ಸಿನಿಮಾ (Super Star Movie) ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಕಾರಣಾಂತರಗಳಿಂದ ಈ ಚಿತ್ರದ ರಿಲೀಸ್​ ತಡವಾಗಿದೆ. ಈಗ ಈ ಸಿನಿಮಾ ವಿವಾದಕ್ಕೆ ಕಾರಣ ಆಗಿದೆ. ‘ಸೂಪರ್​ ಸ್ಟಾರ್​’ ಚಿತ್ರದ ನಿರ್ದೇಶಕ ರಮೇಶ್​ ವೆಂಕಟೇಶ್​ ಬಾಬು (Ramesh Venkatesh Babu) ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಬರೋಬ್ಬರಿ 1 ಕೋಟಿ 10 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಕೇಸ್​ ದಾಖಲಾಗಿದೆ. ಈ ಚಿತ್ರಕ್ಕೆ ಆರಂಭದಲ್ಲಿ ಮೈಲಾರಿ ಅವರು ಹಣ ಹೂಡಿದ್ದರು. ನಂತರ ನಿರ್ಮಾಪಕರ ಸ್ಥಾನಕ್ಕೆ ಸತ್ಯನಾರಾಯಣ ಹಾಗೂ ರಮಾದೇವಿ ಬಂದರು. ಈಗ ಮೈಲಾರಿ ಅವರು ತಮಗೆ ವಂಚನೆ ಆಗಿದೆ ಎಂದು ಆರೋಪಿಸಿ ಬೆಂಗಳೂರಿನ ಹೆಣ್ಣೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಮೈಲಾರಿ ನೀಡಿದ ದೂರಿನ ಅನ್ವಯ ನಿರ್ದೇಶಕ ರಮೇಶ್​ ವೆಂಕಟೇಶ್​ ಬಾಬು ಅವರು ‘ಸಿನಿಮಾ ಸೂಪರ್​ ಹಿಟ್​ ಆಗುತ್ತದೆ, ಹಣ ಬರುತ್ತದೆ’ ಎಂದು ಪ್ರಚೋದನೆ ನೀಡಿದ್ದರು. ಹಾಗಾಗಿ ಮಾತೃಶ್ರೀ ಎಂಟರ್​ಪ್ರೈಸಸ್​ ಬ್ಯಾನರ್​ ಅಡಿಯಲ್ಲಿ ಮೈಲಾರಿ ಹಣ ಹೂಡಿದ್ದರು. ಆದರೆ ಕೊವಿಡ್​ ಹಿನ್ನೆಲೆಯಲ್ಲಿ ಚಿತ್ರದ ಕೆಲಸಗಳು ತಡವಾದವು. ಚಿತ್ರೀಕರಣ ಸ್ಥಗಿತಗೊಂಡಿತ್ತು. ನಂತರ ರಮೇಶ್​ ವೆಂಕಟೇಶ್​ ಬಾಬು ಅವರು ಸತ್ಯನಾರಾಯಣ ಎಂಬುವವರ ಜೊತೆ ಸೇರಿ ಚಿತ್ರದ ಮಾಲಿಕತ್ವ ಬದಲಿಸಿದ್ದಾರೆ ಎಂದು ಮೈಲಾರಿ ಆರೋಪಿಸಿದ್ದಾರೆ.

ನಿರ್ದೇಶಕ ರಮೇಶ್​ ವೆಂಕಟೇಶ್​ ಬಾಬು ಅವರು ನಿರ್ಮಾಪಕ ಮೈಲಾರಿ ಅವರಿಂದ 1 ಕೋಟಿ 10 ಲಕ್ಷ ರೂಪಾಯಿ ಪಡೆದು, ಅದನ್ನು ಕಲಾವಿದರಿಗೂ ನೀಡದೇ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂಬ ಆರೋಪ ಎದುರಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಮೇಶ್​ ವೆಂಕಟೇಶ್​ ಬಾಬು ಮತ್ತು ಹೊಸ ನಿರ್ಮಾಪಕರಾದ ಸತ್ಯನಾರಾಯಣ ಹಾಗೂ ರಮಾದೇವಿ ವಿರುದ್ಧ ಕೇಸ್​ ದಾಖಲು ಮಾಡಲಾಗಿದೆ.

ಇದನ್ನೂ ಓದಿ
Image
PAN Card Fraud: ಸನ್ನಿ ಲಿಯೋನ್​ಗೆ ಆಗಿದ್ದ ವಂಚನೆಯೇ ಈಗ ನಟ ರಾಜ್​ಕುಮಾರ್​ ರಾವ್​ಗೆ; ಪ್ಯಾನ್​ ಕಾರ್ಡ್ ದುರ್ಬಳಕೆ ದೂರು
Image
200 ಕೋಟಿ ವಂಚನೆಯ ಕಿಂಗ್​ ಪಿನ್​ ಸುಕೇಶ್​ ಭೇಟಿಗೆ ಬಂದಿದ್ರು 12 ಖ್ಯಾತ ನಟಿಯರು
Image
ನಟಿ ಸಂಜನಾ ಗಲ್ರಾನಿಗೆ ವಂಚನೆ ಪ್ರಕರಣ; ತಮಗಾದ ಅನ್ಯಾಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ನಟಿ
Image
ನಟ ಸೋನು ಸೂದ್​ ಮೇಲೆ ತೆರಿಗೆ ವಂಚನೆ ಆರೋಪ; ಕಡೆಗೂ ಮೌನ ಮುರಿದ ‘ರಿಯಲ್​ ಹೀರೋ’

ತಾವು ಹಾಕಿದ ಬಂಡವಾಳವನ್ನು ವಾಪಸ್ ನೀಡುವಂತೆ ಮೈಲಾರಿ ಅವರು ಕೇಳಿದ್ದಾರೆ. ಆದರೆ ತಮಗೆ ಪ್ರಾಣ ಬೆದರಿಕೆ ಮತ್ತು ಧಮ್ಕಿ ಹಾಕಲಾಗಿದೆ ಎಂದು ಮೈಲಾರಿ ಆರೋಪಿಸಿದ್ದಾರೆ. ಇದರಿಂದ ‘ಸೂಪರ್​ ಸ್ಟಾರ್​’ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ.

‘ಸೂಪರ್​ ಸ್ಟಾರ್​’ ಚಿತ್ರಕ್ಕಾಗಿ ನಿರಂಜನ್​ ಸುಧೀಂದ್ರ ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಕೆಲವೇ ತಿಂಗಳ ಹಿಂದೆ ಈ ಚಿತ್ರದ ಟೀಸರ್​ ಬಿಡುಗಡೆ ಮಾಡಲಾಗಿತ್ತು. ಈ ಸಿನಿಮಾದ ಬಿಡುಗಡೆಗಾಗಿ ಅವರ ಅಭಿಮಾನಿಗಳು ಕಾದಿದ್ದಾರೆ. ಆದರೆ ವಿವಾದದ ಕಾರಣದಿಂದ ಈ ಚಿತ್ರ ಸುದ್ದಿ ಆಗುವಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:27 pm, Mon, 14 November 22

Follow Us
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಹರಿಹರ ಪಂಚಮಸಾಲಿ ಮಠದ ಮುಂದೆ ಭಕ್ತರ ಗಲಾಟೆ!
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ಅಂಕ ಮುಖ್ಯವಲ್ಲ, ಮಗ ಪಾಸಾಗಿದ್ದೇ ದೊಡ್ಡ ಸಂಭ್ರಮ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ನ್ಯೂಸ್ ಪೇಪರ್ ವಿತರಕನ ಮೇಲೆ ಬೀದಿ ನಾಯಿ ದಾಳಿ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ
ಬೈಕ್​​ ತಪ್ಪಿಸಲು ಹೋಗಿ ಖಾಸಗಿ ಬಸ್​​ ಪಲ್ಟಿ: ಹಲವು ಪ್ರಯಾಣಿಕರಿಗೆ ಗಾಯ