AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂಪರ್​ ಸ್ಟಾರ್​’ ಚಿತ್ರದ ನಿರ್ದೇಶಕನ ವಿರುದ್ಧ 1.10 ಕೋಟಿ ರೂಪಾಯಿ ವಂಚನೆ ಆರೋಪ; ಕೇಸ್​ ದಾಖಲು

ನಿರ್ದೇಶಕ ರಮೇಶ್​ ವೆಂಕಟೇಶ್​ ಬಾಬು ವಿರುದ್ಧ ಆರೋಪ ಕೇಳಿಬಂದಿದೆ. ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂದು ದೂರು ದಾಖಲಾಗಿದೆ.

‘ಸೂಪರ್​ ಸ್ಟಾರ್​’ ಚಿತ್ರದ ನಿರ್ದೇಶಕನ ವಿರುದ್ಧ 1.10 ಕೋಟಿ ರೂಪಾಯಿ ವಂಚನೆ ಆರೋಪ; ಕೇಸ್​ ದಾಖಲು
‘ಸೂಪರ್ ಸ್ಟಾರ್’ ಕನ್ನಡ ಸಿನಿಮಾ
TV9 Web
| Edited By: |

Updated on:Nov 14, 2022 | 12:37 PM

Share

ನಟ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್​ ಸುಧೀಂದ್ರ (Niranjan Sudhindra) ಅವರು ನಟಿಸುತ್ತಿರುವ ‘ಸೂಪರ್​ ಸ್ಟಾರ್​’ ಸಿನಿಮಾ (Super Star Movie) ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಕಾರಣಾಂತರಗಳಿಂದ ಈ ಚಿತ್ರದ ರಿಲೀಸ್​ ತಡವಾಗಿದೆ. ಈಗ ಈ ಸಿನಿಮಾ ವಿವಾದಕ್ಕೆ ಕಾರಣ ಆಗಿದೆ. ‘ಸೂಪರ್​ ಸ್ಟಾರ್​’ ಚಿತ್ರದ ನಿರ್ದೇಶಕ ರಮೇಶ್​ ವೆಂಕಟೇಶ್​ ಬಾಬು (Ramesh Venkatesh Babu) ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಬರೋಬ್ಬರಿ 1 ಕೋಟಿ 10 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಕೇಸ್​ ದಾಖಲಾಗಿದೆ. ಈ ಚಿತ್ರಕ್ಕೆ ಆರಂಭದಲ್ಲಿ ಮೈಲಾರಿ ಅವರು ಹಣ ಹೂಡಿದ್ದರು. ನಂತರ ನಿರ್ಮಾಪಕರ ಸ್ಥಾನಕ್ಕೆ ಸತ್ಯನಾರಾಯಣ ಹಾಗೂ ರಮಾದೇವಿ ಬಂದರು. ಈಗ ಮೈಲಾರಿ ಅವರು ತಮಗೆ ವಂಚನೆ ಆಗಿದೆ ಎಂದು ಆರೋಪಿಸಿ ಬೆಂಗಳೂರಿನ ಹೆಣ್ಣೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಮೈಲಾರಿ ನೀಡಿದ ದೂರಿನ ಅನ್ವಯ ನಿರ್ದೇಶಕ ರಮೇಶ್​ ವೆಂಕಟೇಶ್​ ಬಾಬು ಅವರು ‘ಸಿನಿಮಾ ಸೂಪರ್​ ಹಿಟ್​ ಆಗುತ್ತದೆ, ಹಣ ಬರುತ್ತದೆ’ ಎಂದು ಪ್ರಚೋದನೆ ನೀಡಿದ್ದರು. ಹಾಗಾಗಿ ಮಾತೃಶ್ರೀ ಎಂಟರ್​ಪ್ರೈಸಸ್​ ಬ್ಯಾನರ್​ ಅಡಿಯಲ್ಲಿ ಮೈಲಾರಿ ಹಣ ಹೂಡಿದ್ದರು. ಆದರೆ ಕೊವಿಡ್​ ಹಿನ್ನೆಲೆಯಲ್ಲಿ ಚಿತ್ರದ ಕೆಲಸಗಳು ತಡವಾದವು. ಚಿತ್ರೀಕರಣ ಸ್ಥಗಿತಗೊಂಡಿತ್ತು. ನಂತರ ರಮೇಶ್​ ವೆಂಕಟೇಶ್​ ಬಾಬು ಅವರು ಸತ್ಯನಾರಾಯಣ ಎಂಬುವವರ ಜೊತೆ ಸೇರಿ ಚಿತ್ರದ ಮಾಲಿಕತ್ವ ಬದಲಿಸಿದ್ದಾರೆ ಎಂದು ಮೈಲಾರಿ ಆರೋಪಿಸಿದ್ದಾರೆ.

ನಿರ್ದೇಶಕ ರಮೇಶ್​ ವೆಂಕಟೇಶ್​ ಬಾಬು ಅವರು ನಿರ್ಮಾಪಕ ಮೈಲಾರಿ ಅವರಿಂದ 1 ಕೋಟಿ 10 ಲಕ್ಷ ರೂಪಾಯಿ ಪಡೆದು, ಅದನ್ನು ಕಲಾವಿದರಿಗೂ ನೀಡದೇ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂಬ ಆರೋಪ ಎದುರಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಮೇಶ್​ ವೆಂಕಟೇಶ್​ ಬಾಬು ಮತ್ತು ಹೊಸ ನಿರ್ಮಾಪಕರಾದ ಸತ್ಯನಾರಾಯಣ ಹಾಗೂ ರಮಾದೇವಿ ವಿರುದ್ಧ ಕೇಸ್​ ದಾಖಲು ಮಾಡಲಾಗಿದೆ.

ಇದನ್ನೂ ಓದಿ
Image
PAN Card Fraud: ಸನ್ನಿ ಲಿಯೋನ್​ಗೆ ಆಗಿದ್ದ ವಂಚನೆಯೇ ಈಗ ನಟ ರಾಜ್​ಕುಮಾರ್​ ರಾವ್​ಗೆ; ಪ್ಯಾನ್​ ಕಾರ್ಡ್ ದುರ್ಬಳಕೆ ದೂರು
Image
200 ಕೋಟಿ ವಂಚನೆಯ ಕಿಂಗ್​ ಪಿನ್​ ಸುಕೇಶ್​ ಭೇಟಿಗೆ ಬಂದಿದ್ರು 12 ಖ್ಯಾತ ನಟಿಯರು
Image
ನಟಿ ಸಂಜನಾ ಗಲ್ರಾನಿಗೆ ವಂಚನೆ ಪ್ರಕರಣ; ತಮಗಾದ ಅನ್ಯಾಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ನಟಿ
Image
ನಟ ಸೋನು ಸೂದ್​ ಮೇಲೆ ತೆರಿಗೆ ವಂಚನೆ ಆರೋಪ; ಕಡೆಗೂ ಮೌನ ಮುರಿದ ‘ರಿಯಲ್​ ಹೀರೋ’

ತಾವು ಹಾಕಿದ ಬಂಡವಾಳವನ್ನು ವಾಪಸ್ ನೀಡುವಂತೆ ಮೈಲಾರಿ ಅವರು ಕೇಳಿದ್ದಾರೆ. ಆದರೆ ತಮಗೆ ಪ್ರಾಣ ಬೆದರಿಕೆ ಮತ್ತು ಧಮ್ಕಿ ಹಾಕಲಾಗಿದೆ ಎಂದು ಮೈಲಾರಿ ಆರೋಪಿಸಿದ್ದಾರೆ. ಇದರಿಂದ ‘ಸೂಪರ್​ ಸ್ಟಾರ್​’ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ.

‘ಸೂಪರ್​ ಸ್ಟಾರ್​’ ಚಿತ್ರಕ್ಕಾಗಿ ನಿರಂಜನ್​ ಸುಧೀಂದ್ರ ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಕೆಲವೇ ತಿಂಗಳ ಹಿಂದೆ ಈ ಚಿತ್ರದ ಟೀಸರ್​ ಬಿಡುಗಡೆ ಮಾಡಲಾಗಿತ್ತು. ಈ ಸಿನಿಮಾದ ಬಿಡುಗಡೆಗಾಗಿ ಅವರ ಅಭಿಮಾನಿಗಳು ಕಾದಿದ್ದಾರೆ. ಆದರೆ ವಿವಾದದ ಕಾರಣದಿಂದ ಈ ಚಿತ್ರ ಸುದ್ದಿ ಆಗುವಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:27 pm, Mon, 14 November 22

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು