AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೂಪರ್​ ಸ್ಟಾರ್​’ ಚಿತ್ರದ ನಿರ್ದೇಶಕನ ವಿರುದ್ಧ 1.10 ಕೋಟಿ ರೂಪಾಯಿ ವಂಚನೆ ಆರೋಪ; ಕೇಸ್​ ದಾಖಲು

ನಿರ್ದೇಶಕ ರಮೇಶ್​ ವೆಂಕಟೇಶ್​ ಬಾಬು ವಿರುದ್ಧ ಆರೋಪ ಕೇಳಿಬಂದಿದೆ. ಕೋಟ್ಯಂತರ ರೂಪಾಯಿ ವಂಚಿಸಿದ್ದಾರೆ ಎಂದು ದೂರು ದಾಖಲಾಗಿದೆ.

‘ಸೂಪರ್​ ಸ್ಟಾರ್​’ ಚಿತ್ರದ ನಿರ್ದೇಶಕನ ವಿರುದ್ಧ 1.10 ಕೋಟಿ ರೂಪಾಯಿ ವಂಚನೆ ಆರೋಪ; ಕೇಸ್​ ದಾಖಲು
‘ಸೂಪರ್ ಸ್ಟಾರ್’ ಕನ್ನಡ ಸಿನಿಮಾ
TV9 Web
| Updated By: ಮದನ್​ ಕುಮಾರ್​|

Updated on:Nov 14, 2022 | 12:37 PM

Share

ನಟ ಉಪೇಂದ್ರ ಅವರ ಅಣ್ಣನ ಮಗ ನಿರಂಜನ್​ ಸುಧೀಂದ್ರ (Niranjan Sudhindra) ಅವರು ನಟಿಸುತ್ತಿರುವ ‘ಸೂಪರ್​ ಸ್ಟಾರ್​’ ಸಿನಿಮಾ (Super Star Movie) ಮೇಲೆ ಅಭಿಮಾನಿಗಳಿಗೆ ನಿರೀಕ್ಷೆ ಇದೆ. ಕಾರಣಾಂತರಗಳಿಂದ ಈ ಚಿತ್ರದ ರಿಲೀಸ್​ ತಡವಾಗಿದೆ. ಈಗ ಈ ಸಿನಿಮಾ ವಿವಾದಕ್ಕೆ ಕಾರಣ ಆಗಿದೆ. ‘ಸೂಪರ್​ ಸ್ಟಾರ್​’ ಚಿತ್ರದ ನಿರ್ದೇಶಕ ರಮೇಶ್​ ವೆಂಕಟೇಶ್​ ಬಾಬು (Ramesh Venkatesh Babu) ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಬರೋಬ್ಬರಿ 1 ಕೋಟಿ 10 ಲಕ್ಷ ರೂಪಾಯಿ ವಂಚಿಸಿದ್ದಾರೆ ಎಂದು ಕೇಸ್​ ದಾಖಲಾಗಿದೆ. ಈ ಚಿತ್ರಕ್ಕೆ ಆರಂಭದಲ್ಲಿ ಮೈಲಾರಿ ಅವರು ಹಣ ಹೂಡಿದ್ದರು. ನಂತರ ನಿರ್ಮಾಪಕರ ಸ್ಥಾನಕ್ಕೆ ಸತ್ಯನಾರಾಯಣ ಹಾಗೂ ರಮಾದೇವಿ ಬಂದರು. ಈಗ ಮೈಲಾರಿ ಅವರು ತಮಗೆ ವಂಚನೆ ಆಗಿದೆ ಎಂದು ಆರೋಪಿಸಿ ಬೆಂಗಳೂರಿನ ಹೆಣ್ಣೂರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದಾರೆ.

ಮೈಲಾರಿ ನೀಡಿದ ದೂರಿನ ಅನ್ವಯ ನಿರ್ದೇಶಕ ರಮೇಶ್​ ವೆಂಕಟೇಶ್​ ಬಾಬು ಅವರು ‘ಸಿನಿಮಾ ಸೂಪರ್​ ಹಿಟ್​ ಆಗುತ್ತದೆ, ಹಣ ಬರುತ್ತದೆ’ ಎಂದು ಪ್ರಚೋದನೆ ನೀಡಿದ್ದರು. ಹಾಗಾಗಿ ಮಾತೃಶ್ರೀ ಎಂಟರ್​ಪ್ರೈಸಸ್​ ಬ್ಯಾನರ್​ ಅಡಿಯಲ್ಲಿ ಮೈಲಾರಿ ಹಣ ಹೂಡಿದ್ದರು. ಆದರೆ ಕೊವಿಡ್​ ಹಿನ್ನೆಲೆಯಲ್ಲಿ ಚಿತ್ರದ ಕೆಲಸಗಳು ತಡವಾದವು. ಚಿತ್ರೀಕರಣ ಸ್ಥಗಿತಗೊಂಡಿತ್ತು. ನಂತರ ರಮೇಶ್​ ವೆಂಕಟೇಶ್​ ಬಾಬು ಅವರು ಸತ್ಯನಾರಾಯಣ ಎಂಬುವವರ ಜೊತೆ ಸೇರಿ ಚಿತ್ರದ ಮಾಲಿಕತ್ವ ಬದಲಿಸಿದ್ದಾರೆ ಎಂದು ಮೈಲಾರಿ ಆರೋಪಿಸಿದ್ದಾರೆ.

ನಿರ್ದೇಶಕ ರಮೇಶ್​ ವೆಂಕಟೇಶ್​ ಬಾಬು ಅವರು ನಿರ್ಮಾಪಕ ಮೈಲಾರಿ ಅವರಿಂದ 1 ಕೋಟಿ 10 ಲಕ್ಷ ರೂಪಾಯಿ ಪಡೆದು, ಅದನ್ನು ಕಲಾವಿದರಿಗೂ ನೀಡದೇ ಸ್ವಂತಕ್ಕೆ ಬಳಸಿಕೊಂಡಿದ್ದಾರೆ ಎಂಬ ಆರೋಪ ಎದುರಾಗಿದೆ. ಇದಕ್ಕೆ ಸಂಬಂಧಿಸಿದಂತೆ ರಮೇಶ್​ ವೆಂಕಟೇಶ್​ ಬಾಬು ಮತ್ತು ಹೊಸ ನಿರ್ಮಾಪಕರಾದ ಸತ್ಯನಾರಾಯಣ ಹಾಗೂ ರಮಾದೇವಿ ವಿರುದ್ಧ ಕೇಸ್​ ದಾಖಲು ಮಾಡಲಾಗಿದೆ.

ಇದನ್ನೂ ಓದಿ
Image
PAN Card Fraud: ಸನ್ನಿ ಲಿಯೋನ್​ಗೆ ಆಗಿದ್ದ ವಂಚನೆಯೇ ಈಗ ನಟ ರಾಜ್​ಕುಮಾರ್​ ರಾವ್​ಗೆ; ಪ್ಯಾನ್​ ಕಾರ್ಡ್ ದುರ್ಬಳಕೆ ದೂರು
Image
200 ಕೋಟಿ ವಂಚನೆಯ ಕಿಂಗ್​ ಪಿನ್​ ಸುಕೇಶ್​ ಭೇಟಿಗೆ ಬಂದಿದ್ರು 12 ಖ್ಯಾತ ನಟಿಯರು
Image
ನಟಿ ಸಂಜನಾ ಗಲ್ರಾನಿಗೆ ವಂಚನೆ ಪ್ರಕರಣ; ತಮಗಾದ ಅನ್ಯಾಯವನ್ನು ಎಳೆಎಳೆಯಾಗಿ ಬಿಚ್ಚಿಟ್ಟ ನಟಿ
Image
ನಟ ಸೋನು ಸೂದ್​ ಮೇಲೆ ತೆರಿಗೆ ವಂಚನೆ ಆರೋಪ; ಕಡೆಗೂ ಮೌನ ಮುರಿದ ‘ರಿಯಲ್​ ಹೀರೋ’

ತಾವು ಹಾಕಿದ ಬಂಡವಾಳವನ್ನು ವಾಪಸ್ ನೀಡುವಂತೆ ಮೈಲಾರಿ ಅವರು ಕೇಳಿದ್ದಾರೆ. ಆದರೆ ತಮಗೆ ಪ್ರಾಣ ಬೆದರಿಕೆ ಮತ್ತು ಧಮ್ಕಿ ಹಾಕಲಾಗಿದೆ ಎಂದು ಮೈಲಾರಿ ಆರೋಪಿಸಿದ್ದಾರೆ. ಇದರಿಂದ ‘ಸೂಪರ್​ ಸ್ಟಾರ್​’ ಚಿತ್ರತಂಡಕ್ಕೆ ಸಂಕಷ್ಟ ಎದುರಾಗಿದೆ.

‘ಸೂಪರ್​ ಸ್ಟಾರ್​’ ಚಿತ್ರಕ್ಕಾಗಿ ನಿರಂಜನ್​ ಸುಧೀಂದ್ರ ಅವರು ಸಾಕಷ್ಟು ಕಷ್ಟಪಟ್ಟಿದ್ದಾರೆ. ಕೆಲವೇ ತಿಂಗಳ ಹಿಂದೆ ಈ ಚಿತ್ರದ ಟೀಸರ್​ ಬಿಡುಗಡೆ ಮಾಡಲಾಗಿತ್ತು. ಈ ಸಿನಿಮಾದ ಬಿಡುಗಡೆಗಾಗಿ ಅವರ ಅಭಿಮಾನಿಗಳು ಕಾದಿದ್ದಾರೆ. ಆದರೆ ವಿವಾದದ ಕಾರಣದಿಂದ ಈ ಚಿತ್ರ ಸುದ್ದಿ ಆಗುವಂತಾಗಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:27 pm, Mon, 14 November 22

ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​ನ್ಯೂಸ್​​​: ಪೊಲೀಸ್ ಇಲಾಖೆಯಿಂದ ತರಬೇತಿ
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಅಶ್ವಿನಿ ಗೌಡ, ಚೈತ್ರಾ ಕುಂದಾಪುರ ನಡುವೆ ಜಗಳ: ಗಿಲ್ಲಿ ರಿಯಾಕ್ಷನ್ ನೋಡಿ..
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ಭಲೇ ಆನೆ: ಪೊಲೀಸರಂತೆ ವಾಹನ ತಪಾಸಣೆ ಮಾಡಿದ ಕಾಡಾನೆ, ವಿಡಿಯೋ ನೋಡಿ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ
ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ