Chetan Ahimsa: ‘ಸಿನಿಮಾ ಸ್ಟಾರ್​ಗಳ ಸ್ಮಾರಕಕ್ಕೆ ಸಾರ್ವಜನಿಕರ ಜಾಗ, ಹಣ ಬಳಸಬಾರದು’: ನಟ ಚೇತನ್​ ಹೊಸ ವಾದ

Aa Dinagluru Chetan | Vishnuvardhan Smaraka: ವಿಷ್ಣುವರ್ಧನ್​ ಅವರ ಸ್ಮಾರಕ ಉದ್ಘಾಟನೆ ಆದ ಬೆನ್ನಲ್ಲೇ ನಟ ಚೇತನ್​ ಅವರು ಈ ರೀತಿ ಹೇಳಿಕೆ ನೀಡಿದ್ದಾರೆ. ಇದು ಹೊಸ ಚರ್ಚೆ ಹುಟ್ಟುಹಾಕಿದೆ.

Chetan Ahimsa: ‘ಸಿನಿಮಾ ಸ್ಟಾರ್​ಗಳ ಸ್ಮಾರಕಕ್ಕೆ ಸಾರ್ವಜನಿಕರ ಜಾಗ, ಹಣ ಬಳಸಬಾರದು’: ನಟ ಚೇತನ್​ ಹೊಸ ವಾದ
ಚೇತನ್ ಅಹಿಂಸಾ
Follow us
|

Updated on:Jan 30, 2023 | 4:02 PM

ಕನ್ನಡ ಚಿತ್ರರಂಗದ ಮೇರು ನಟರ ಸ್ಮಾರಕಗಳಿಗೆ ಸಂಬಂಧಪಟ್ಟಂತೆ ಈಗಾಗಲೇ ಅನೇಕ ಚರ್ಚೆ ನಡೆದಿದೆ. ಒಂದಷ್ಟು ವಿವಾದಗಳೂ ಆಗಿದ್ದುಂಟು. ವಿಷ್ಣುವರ್ಧನ್​ ಅವರ ಸ್ಮಾರಕ (Vishnuvardhan Memorial) ಮೈಸೂರಿನಲ್ಲಿ ನಿರ್ಮಾಣ ಆಗಿದ್ದು, ನಿನ್ನೆಯಷ್ಟೇ (ಜ.29) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅದನ್ನು ಅನಾವರಣಗೊಳಿಸಿದ್ದಾರೆ. ಇದು ಅಭಿಮಾನಿಗಳಿಗೆ ಸಾಕಷ್ಟು ಖುಷಿ ನೀಡಿದೆ. ಮೈಸೂರಿನಲ್ಲಿ ವಿಷ್ಣು ಸ್ಮಾರಕ ಈಗ ಒಂದು ಆಕರ್ಷಕ ಸ್ಥಳವಾಗಿದೆ. ಅದರ ಬೆನ್ನಲ್ಲೇ ನಟ ‘ಆ ದಿನಗಳು’ ಚೇತನ್​ (Chetan Ahimsa) ಅವರು ಹೊಸ ವಾದ ಮುಂದಿಟ್ಟಿದ್ದಾರೆ. ‘ಚಲನಚಿತ್ರ ಸ್ಟಾರ್​ಗಳ ಸ್ಮಾರಕಗಳಿಗೆ ಕರ್ನಾಟಕದ ಸಾರ್ವಜನಿಕರ ಜಾಗ, ಹಣ ಮತ್ತು ಸಂಪನ್ಮೂಲಗಳನ್ನು ಬಳಸಬಾರದು’ ಎಂದು ಅವರು ಸೋಶಿಯಲ್​ ಮೀಡಿಯಾದಲ್ಲಿ ಪೋಸ್ಟ್​ ಮಾಡಿದ್ದಾರೆ.

ಹೊಸ ಚರ್ಚೆ ಹುಟ್ಟುಹಾಕಿದ ಚೇತನ್​ ಹೇಳಿಕೆ:

‘ಹಲವಾರು ಕನ್ನಡಿಗರಂತೆ ಕೆಲಸ ಮಾಡಿ ಸಂಪಾದಿಸುವ ಚಲನಚಿತ್ರ ಸ್ಟಾರ್​ಗಳು ಈಗಾಗಲೇ ನಮ್ಮ ಸಮಾಜದಲ್ಲಿ ಅನಗತ್ಯ ಪ್ರಚಾರ ಮತ್ತು ತಮ್ಮ ಚಲನಚಿತ್ರಗಳ ಯಶಸ್ಸಿಗೆ ಅನಗತ್ಯವಾಗಿ ಗಮನ ಪಡೆಯುತ್ತಾರೆ. ಕರ್ನಾಟಕದ ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯನ್ನು ಪ್ರದರ್ಶಿಸುವ ವಸ್ತು ಸಂಗ್ರಹಾಲಯಗಳಿಗೆ ಸ್ಮಾರಕ ಭೂಮಿಗಳು ಒಳ್ಳೆಯ ಉಪಯೋಗಕ್ಕೆ ಬರುತ್ತವೆ’ ಎಂದು ಚೇತನ್ ಪೋಸ್ಟ್​ ಮಾಡಿದ್ದಾರೆ.

ಇದನ್ನೂ ಓದಿ
Image
Karnataka Ratna Award: ವಿಷ್ಣುವರ್ಧನ್​ಗೆ ‘ಕರ್ನಾಟಕ ರತ್ನ’ ನೀಡಬೇಕು ಎಂಬ ಬೇಡಿಕೆ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ
Image
Vishnuvardhan Memorial Inauguration: ‘ವಿಷ್ಣುವರ್ಧನ್ ಸ್ಮಾರಕ ಲೋಕಾರ್ಪಣೆ ಆಗುತ್ತಿರುವುದು ಮನಸ್ಸಿಗೆ ಖುಷಿ ನೀಡಿದೆ’; ಶಿವರಾಜ್​ಕುಮಾರ್​
Image
Vishnuvardhan Memorial: ವಿಷ್ಣು​ ಅಭಿಮಾನಿಗಳ ಅನ್ನದಾನ ಕಾರ್ಯಕ್ಕೆ ಅಡೆತಡೆ; ಸ್ಮಾರಕ ಉದ್ಘಾಟನೆ ದಿನವೂ ತಪ್ಪದ ಪರದಾಟ
Image
Vishnuvardhan Memorial: ಬೆಂಗಳೂರಿನಲ್ಲಿ ವಿಷ್ಣುವರ್ಧನ್​ ಅಂತ್ಯ ಸಂಸ್ಕಾರ ಆದರೂ ಮೈಸೂರಿನಲ್ಲಿ ಸ್ಮಾರಕ ಆಗಿದ್ದೇಕೆ? ಇಲ್ಲಿದೆ ವಿವರ

ಅದಾನಿ ವಿರುದ್ಧ ಚೇತನ್​ ಕಿಡಿ:

‘ಇಡೀ ಭಾರತ ದೇಶವು ಕೊವಿಡ್‌ ಸಾಂಕ್ರಾಮಿಕ ರೋಗದಿಂದ ತತ್ತರಿಸುತ್ತಿದ್ದಾಗ ಗೌತಮ್ ಅದಾನಿಯವರು ಏಷ್ಯಾದ ಅತೀ ಶ್ರೀಮಂತ ಪಟ್ಟಿಯಲ್ಲಿರುತ್ತಾರೆ. ಈಗ ಹಿಂಡೆನ್‌ಬರ್ಗ್ ಸಂಶೋಧನಾ ವರದಿಯು ಗೌತಮ್ ಅದಾನಿಯವರ ವಂಚನೆಯನ್ನು ಬಯಲಿಗೆಳೆದಿದೆ. ತನ್ನ ಮೇಲಿನ ಆರೋಪವನ್ನು ‘ಭಾರತದ ಮೇಲಿನ ದಾಳಿ’ ಎಂದು ಅವರು ದುರಹಂಕಾರದಿಂದ ಹೇಳಿಕೊಂಡು ವಂಚನೆಯನ್ನು ಸಮರ್ಥಿಸಿಕೊಳ್ಳುತ್ತಿದ್ದಾರೆ. ಅದಾನಿಯವರು ಭಾರತವನ್ನು ಕೆಟ್ಟ ರೀತಿಯಲ್ಲಿ ಪ್ರತಿನಿಧಿಸುತ್ತಿದ್ದಾರೆ. ಇವರ ಮೇಲೆ ಕ್ರಮ ಕೈಗೊಳ್ಳಬೇಕು’ ಎಂದು ಚೇತನ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ನಟ ಚೇತನ್​ ಅವರು ತಮ್ಮ ಸಿದ್ಧಾಂತಗಳ ಕಾರಣದಿಂದ ಆಗಾಗ ಸುದ್ದಿ ಆಗುತ್ತಿದ್ದಾರೆ. ಅವರ ಮಾತುಗಳಿಗೆ ಪರ-ವಿರೋಧ ವ್ಯಕ್ತವಾಗುತ್ತದೆ. ಈ ಬಾರಿ ಕೂಡ ಅವರು ಮುಂದಿವರಿದಿದೆ. ಕಮೆಂಟ್​ಗಳ ಮೂಲಕ ಕೆಲವರು ಚೇತನ್​ ಅವರ ಮಾತನ್ನು ಬೆಂಬಲಿಸುತ್ತಿದಾರೆ. ಅದೇ ರೀತಿ ವಿರೋಧ ಕೂಡ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:01 pm, Mon, 30 January 23