AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೇತನ್​ ಚಂದ್ರ ಮೇಲೆ ಹಲ್ಲೆ: ಇಬ್ಬರ ಬಂಧನ; ನಟನ ವಿರುದ್ಧ ಮಹಿಳೆ ಪ್ರತಿದೂರು

ಬೆಂಗಳೂರಿನ ಕಗ್ಗಲಿಪುರದ ಬಳಿ ನಟ ಚೇತನ್​ ಚಂದ್ರ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕಿರಣ್​ ಮತ್ತು ಹರೀಶ್ ಎಂಬುವವರನ್ನು ಬಂಧಿಸಲಾಗಿದೆ. ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಕಿರಣ್​ ಪತ್ನಿ ಐಶ್ವರ್ಯಾ ಅವರು ಕೂಡ ಪ್ರತಿದೂರು ದಾಖಲಿಸಿದ್ದಾರೆ. ಹಲ್ಲೆಗೆ ಒಳಗಾಗಿರುವ ಚೇತನ್​ ಚಂದ್ರ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚೇತನ್​ ಚಂದ್ರ ಮೇಲೆ ಹಲ್ಲೆ: ಇಬ್ಬರ ಬಂಧನ; ನಟನ ವಿರುದ್ಧ ಮಹಿಳೆ ಪ್ರತಿದೂರು
ಚೇತನ್​ ಚಂದ್ರ
TV9 Web
| Edited By: |

Updated on: May 13, 2024 | 3:52 PM

Share

ಕನ್ನಡದ ನಟ ಚೇತನ್​ ಚಂದ್ರ (Chetan Chandra) ಮೇಲೆ ಭಾನುವಾರ (ಮೇ 12) ಬೆಂಗಳೂರಿನ ಕಗ್ಗಲಿಪುರ ಸಮೀಪ ಹಲ್ಲೆ ನಡೆದಿತ್ತು. ನಟನ ಮೇಲೆ ಮಾರಣಾಂತಿಕವಾಗಿ ಹಲ್ಲೆ (Assault) ಮಾಡಿದ ಆರೋಪದ ಮೇಲೆ ಕಿರಣ್ ಮತ್ತು ಹರೀಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಕಗ್ಗಲಿಪುರ (Kaggalipura) ಪೊಲೀಸ್​ ಠಾಣೆಯಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಹಲ್ಲೆಗೆ ಒಳಗಾಗಿರುವ ಚೇತನ್​ ಚಂದ್ರ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು, ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಚೇತನ್​ ಚಂದ್ರ ವಿರುದ್ಧ ಪ್ರತಿದೂರು ಕೂಡ ದಾಖಲಾಗಿದೆ.

ಹಲ್ಲೆ ಆರೋಪ ಹೊತ್ತಿರುವ ಕಿರಣ್​ ಅವರ ಪತ್ನಿ ಐಶ್ವರ್ಯಾ ಅವರು ಚೇತನ್​ ವಿರುದ್ಧ ಪ್ರತಿದೂರು ನೀಡಿದ್ದಾರೆ. ನಟನಿಂದ ತಮಗೆ ಹಾಗೂ ತಮ್ಮ ಪತಿ ಕಿರಣ್​ ಮೇಲೆ ಹಲ್ಲೆ ಆಗಿದೆ ಎಂದು ಐಶ್ವರ್ಯಾ ದೂರಿನಲ್ಲಿ ತಿಳಿಸಿದ್ದಾರೆ. ಹಾಗಾಗಿ ಎಫ್​ಐಆರ್​ ದಾಖಲು ಮಾಡಲಾಗಿದೆ. ಕಗ್ಗಲಿಪುರ ಠಾಣೆಯಲ್ಲಿ ಐಶ್ವರ್ಯಾ ದೂರು ನೀಡಿದ್ದು, ಚೇತನ್ ಚಂದ್ರ ಹಾಗೂ ಇನ್ನಿಬ್ಬರ ವಿರುದ್ಧ ಐಪಿಸಿ ಸೆಕ್ಷನ್​ 323, 354, 34ರಡಿಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ.

ದೂರುದಾರೆ ಐಶ್ವರ್ಯಾ ಹೇಳಿಕೆ:

‘ನಿನ್ನೆ ರಾತ್ರಿ ಬೈಕ್​ನಲ್ಲಿ ಬರಬೇಕಾದರೆ ಸೈಡ್ ತೆಗದುಕೊಂಡಿದ್ದಕ್ಕೆ ಚೇತನ್​ಗೆ ಕೋಪ ಬಂದಿದೆ. ನನ್ನ ಗಂಡನಿಗೆ ಚೇತನ್ ಮಧ್ಯದ ಬೆರಳು ತೋರಿಸಿದ್ದಾರೆ. ನಂತರ ನನ್ನ ಗಂಡ ಬೇಕರಿ ಹತ್ತಿರ ಬೈಕ್ ನಿಲ್ಲಿಸಿದಾಗ ಚೇತನ್ ಬಂದು ಡಿಚ್ಚಿ ಹೊಡೆದಿದ್ದಾರೆ. ಆ ವೇಳೆ ನಾನು ಬೇಕರಿ ಬಳಿ ಇದ್ದೆ. ನಾನು ಹೋಗಿ ಕ್ಷಮೆ ಕೇಳಿದರೂ, ನನಗೂ ಚೇತನ್ ಹೊಡೆದಿದ್ದಾರೆ. ನನಗೆ ಹೊಡೆದಾಗ ಜನರು ಚೇತನ್​ಗೆ ಹೊಡೆದಿದ್ದಾರೆ’ ಎಂದು ಐಶ್ವರ್ಯಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Chetan Chandra: ಕನ್ನಡದ ನಟ ಚೇತನ್​ ಚಂದ್ರ ಮೇಲೆ ಬೆಂಗಳೂರಿನಲ್ಲಿ 20 ಜನರಿಂದ ಹಲ್ಲೆ

ಘಟನೆ ಹಿನ್ನಲೆ:

ಭಾನುವಾರ (ಮೇ 12) ಸಂಜೆ ಚೇತನ್​ ಚಂದ್ರ ಅವರ ಮೇಲೆ ಸುಮಾರು 20 ಜನರು ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆದ ಬಳಿಕ ಅವರು ಕಗ್ಗಲಿಪುರ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದರು. ಪ್ರಥಮ ಚಿಕಿತ್ಸೆ ಪಡೆಯಲು ಹತ್ತಿರದ ಆಸ್ಪತ್ರೆಗೆ ಬಂದು ಚೇತನ್​ ಚಂದ್ರ ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ಹಲ್ಲೆ ಬಗ್ಗೆ ವಿವರ ನೀಡಿದರು. ‘ಇದೊಂದು ದುರ್ಘಟನೆ. ನನಗೆ ನ್ಯಾಯ ಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದರು. ಹಲವು ವರ್ಷಗಳಿಂದ ಚೇತನ್​ ಚಂದ್ರ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅನೇಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Web contact
Web contact

TV9 Kannada

Read More
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
ಅತಾವುಲ್ಲಾ ಹತ್ಯೆ ಪ್ರಕರಣದ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಪೊಲೀಸರು
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?