AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೇತನ್​ ಚಂದ್ರ ಮೇಲೆ ಹಲ್ಲೆ: ಇಬ್ಬರ ಬಂಧನ; ನಟನ ವಿರುದ್ಧ ಮಹಿಳೆ ಪ್ರತಿದೂರು

ಬೆಂಗಳೂರಿನ ಕಗ್ಗಲಿಪುರದ ಬಳಿ ನಟ ಚೇತನ್​ ಚಂದ್ರ ಮೇಲೆ ಹಲ್ಲೆ ಮಾಡಿದ ಆರೋಪದಲ್ಲಿ ಕಿರಣ್​ ಮತ್ತು ಹರೀಶ್ ಎಂಬುವವರನ್ನು ಬಂಧಿಸಲಾಗಿದೆ. ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಕಿರಣ್​ ಪತ್ನಿ ಐಶ್ವರ್ಯಾ ಅವರು ಕೂಡ ಪ್ರತಿದೂರು ದಾಖಲಿಸಿದ್ದಾರೆ. ಹಲ್ಲೆಗೆ ಒಳಗಾಗಿರುವ ಚೇತನ್​ ಚಂದ್ರ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಚೇತನ್​ ಚಂದ್ರ ಮೇಲೆ ಹಲ್ಲೆ: ಇಬ್ಬರ ಬಂಧನ; ನಟನ ವಿರುದ್ಧ ಮಹಿಳೆ ಪ್ರತಿದೂರು
ಚೇತನ್​ ಚಂದ್ರ
TV9 Web
| Edited By: |

Updated on: May 13, 2024 | 3:52 PM

Share

ಕನ್ನಡದ ನಟ ಚೇತನ್​ ಚಂದ್ರ (Chetan Chandra) ಮೇಲೆ ಭಾನುವಾರ (ಮೇ 12) ಬೆಂಗಳೂರಿನ ಕಗ್ಗಲಿಪುರ ಸಮೀಪ ಹಲ್ಲೆ ನಡೆದಿತ್ತು. ನಟನ ಮೇಲೆ ಮಾರಣಾಂತಿಕವಾಗಿ ಹಲ್ಲೆ (Assault) ಮಾಡಿದ ಆರೋಪದ ಮೇಲೆ ಕಿರಣ್ ಮತ್ತು ಹರೀಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ. ಕಗ್ಗಲಿಪುರ (Kaggalipura) ಪೊಲೀಸ್​ ಠಾಣೆಯಲ್ಲಿ ಈ ಪ್ರಕರಣದ ತನಿಖೆ ನಡೆಯುತ್ತಿದೆ. ಹಲ್ಲೆಗೆ ಒಳಗಾಗಿರುವ ಚೇತನ್​ ಚಂದ್ರ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು, ಹಲ್ಲೆ ಘಟನೆಗೆ ಸಂಬಂಧಿಸಿದಂತೆ ಚೇತನ್​ ಚಂದ್ರ ವಿರುದ್ಧ ಪ್ರತಿದೂರು ಕೂಡ ದಾಖಲಾಗಿದೆ.

ಹಲ್ಲೆ ಆರೋಪ ಹೊತ್ತಿರುವ ಕಿರಣ್​ ಅವರ ಪತ್ನಿ ಐಶ್ವರ್ಯಾ ಅವರು ಚೇತನ್​ ವಿರುದ್ಧ ಪ್ರತಿದೂರು ನೀಡಿದ್ದಾರೆ. ನಟನಿಂದ ತಮಗೆ ಹಾಗೂ ತಮ್ಮ ಪತಿ ಕಿರಣ್​ ಮೇಲೆ ಹಲ್ಲೆ ಆಗಿದೆ ಎಂದು ಐಶ್ವರ್ಯಾ ದೂರಿನಲ್ಲಿ ತಿಳಿಸಿದ್ದಾರೆ. ಹಾಗಾಗಿ ಎಫ್​ಐಆರ್​ ದಾಖಲು ಮಾಡಲಾಗಿದೆ. ಕಗ್ಗಲಿಪುರ ಠಾಣೆಯಲ್ಲಿ ಐಶ್ವರ್ಯಾ ದೂರು ನೀಡಿದ್ದು, ಚೇತನ್ ಚಂದ್ರ ಹಾಗೂ ಇನ್ನಿಬ್ಬರ ವಿರುದ್ಧ ಐಪಿಸಿ ಸೆಕ್ಷನ್​ 323, 354, 34ರಡಿಯಲ್ಲಿ ಎಫ್​ಐಆರ್​ ದಾಖಲಿಸಲಾಗಿದೆ.

ದೂರುದಾರೆ ಐಶ್ವರ್ಯಾ ಹೇಳಿಕೆ:

‘ನಿನ್ನೆ ರಾತ್ರಿ ಬೈಕ್​ನಲ್ಲಿ ಬರಬೇಕಾದರೆ ಸೈಡ್ ತೆಗದುಕೊಂಡಿದ್ದಕ್ಕೆ ಚೇತನ್​ಗೆ ಕೋಪ ಬಂದಿದೆ. ನನ್ನ ಗಂಡನಿಗೆ ಚೇತನ್ ಮಧ್ಯದ ಬೆರಳು ತೋರಿಸಿದ್ದಾರೆ. ನಂತರ ನನ್ನ ಗಂಡ ಬೇಕರಿ ಹತ್ತಿರ ಬೈಕ್ ನಿಲ್ಲಿಸಿದಾಗ ಚೇತನ್ ಬಂದು ಡಿಚ್ಚಿ ಹೊಡೆದಿದ್ದಾರೆ. ಆ ವೇಳೆ ನಾನು ಬೇಕರಿ ಬಳಿ ಇದ್ದೆ. ನಾನು ಹೋಗಿ ಕ್ಷಮೆ ಕೇಳಿದರೂ, ನನಗೂ ಚೇತನ್ ಹೊಡೆದಿದ್ದಾರೆ. ನನಗೆ ಹೊಡೆದಾಗ ಜನರು ಚೇತನ್​ಗೆ ಹೊಡೆದಿದ್ದಾರೆ’ ಎಂದು ಐಶ್ವರ್ಯಾ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ: Chetan Chandra: ಕನ್ನಡದ ನಟ ಚೇತನ್​ ಚಂದ್ರ ಮೇಲೆ ಬೆಂಗಳೂರಿನಲ್ಲಿ 20 ಜನರಿಂದ ಹಲ್ಲೆ

ಘಟನೆ ಹಿನ್ನಲೆ:

ಭಾನುವಾರ (ಮೇ 12) ಸಂಜೆ ಚೇತನ್​ ಚಂದ್ರ ಅವರ ಮೇಲೆ ಸುಮಾರು 20 ಜನರು ಹಲ್ಲೆ ಮಾಡಿದ್ದಾರೆ. ಹಲ್ಲೆ ನಡೆದ ಬಳಿಕ ಅವರು ಕಗ್ಗಲಿಪುರ ಪೊಲೀಸ್​ ಠಾಣೆಗೆ ತೆರಳಿ ದೂರು ನೀಡಿದರು. ಪ್ರಥಮ ಚಿಕಿತ್ಸೆ ಪಡೆಯಲು ಹತ್ತಿರದ ಆಸ್ಪತ್ರೆಗೆ ಬಂದು ಚೇತನ್​ ಚಂದ್ರ ಇನ್​ಸ್ಟಾಗ್ರಾಮ್​ ಲೈವ್​ನಲ್ಲಿ ಹಲ್ಲೆ ಬಗ್ಗೆ ವಿವರ ನೀಡಿದರು. ‘ಇದೊಂದು ದುರ್ಘಟನೆ. ನನಗೆ ನ್ಯಾಯ ಬೇಕು’ ಎಂದು ಅವರು ಮನವಿ ಮಾಡಿಕೊಂಡಿದ್ದರು. ಹಲವು ವರ್ಷಗಳಿಂದ ಚೇತನ್​ ಚಂದ್ರ ಅವರು ಚಿತ್ರರಂಗದಲ್ಲಿ ಸಕ್ರಿಯರಾಗಿದ್ದಾರೆ. ಅನೇಕ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ