AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅಲ್ಪಾವಧಿಗೆ ಸಿದ್ದಾರಾಮಯ್ಯ, ದೀರ್ಘಾವಧಿಗೆ ಡಿಕೆಶಿ’; ಕಾರಣ ತಿಳಿಸಿ ವಿವರಿಸಿದ ನಟ ಚೇತನ್  

Chetan Kumar: ಚೇತನ್ ಕುಮಾರ್ ಅವರು ಅವರು ಎಂದಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಿಕೆಯನ್ನು ನಿಲ್ಲಿಸಿಲ್ಲ. ಸಿಎಂ ಯಾರಾಗಬೇಕು ಎನ್ನುವ ವಿಚಾರದಲ್ಲೂ ಅವರು ಅಭಿಪ್ರಾಯ ತಿಳಿಸಿದ್ದಾರೆ.

‘ಅಲ್ಪಾವಧಿಗೆ ಸಿದ್ದಾರಾಮಯ್ಯ, ದೀರ್ಘಾವಧಿಗೆ ಡಿಕೆಶಿ’; ಕಾರಣ ತಿಳಿಸಿ ವಿವರಿಸಿದ ನಟ ಚೇತನ್  
ರಾಜೇಶ್ ದುಗ್ಗುಮನೆ
|

Updated on:May 15, 2023 | 8:36 AM

Share

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಸ್ಪಷ್ಟ ಬಹುಮತದೊಂದಿಗೆ ಕಾಂಗ್ರೆಸ್ ಸರ್ಕಾರ ರಚಿಸುತ್ತಿದೆ. ರಾಜ್ಯದ ಸಿಎಂ ಯಾರಾಗುತ್ತಾರೆ ಎನ್ನುವ ಪ್ರಶ್ನೆ ಜನತೆಯಲ್ಲಿದೆ. ಸಿದ್ದರಾಮಯ್ಯ (Siddaramaiah) ಹಾಗೂ ಡಿಕೆ ಶಿವಕುಮಾರ್ ಇಬ್ಬರಲ್ಲಿ ಒಬ್ಬರಿಗೆ ಸಿಎಂ ಸ್ಥಾನ ಸಿಗಲಿದೆ. ಇಬ್ಬರೂ ಪಕ್ಷದ ಏಳ್ಗೆಗಾಗಿ ಶ್ರಮಿಸಿದವರು. ಹೀಗಾಗಿ, ಯಾರು ಸಿಎಂ ಆಗಬೇಕು ಎಂದು ತೀರ್ಮಾನ ತೆಗೆದುಕೊಳ್ಳುವುದು ಕಷ್ಟವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು, ಜನರು ಈ ವಿಚಾರದಲ್ಲಿ ಒಂದೊಂದು ಅಭಿಪ್ರಾಯ ತಿಳಿಸುತ್ತಿದ್ದಾರೆ. ಈ ಮಧ್ಯೆ ನಟ ಚೇತನ್ ಕುಮಾರ್ ಅಹಿಂಸಾ (Chetan Kumar Ahimsa) ಅವರು ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಯಾರು ಸಿಎಂ ಆದರೆ ಉತ್ತಮ ಎಂಬುದನ್ನು ಅವರು ಹೇಳಿದ್ದಾರೆ.

ಚೇತನ್ ಕುಮಾರ್ ಅವರು ಅನೇಕ ವಿಚಾರಗಳ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾರೆ. ಹಲವು ವಿಚಾರಗಳ ಬಗ್ಗೆ ಅವರು ನೇರ ಮಾತುಗಳಲ್ಲಿ ಹೇಳುತ್ತಾರೆ. ಕೆಲವೊಮ್ಮೆ ಅವರು ಹೇಳಿಕೆ ವಿವಾದಕ್ಕೆ ಎಡೆಮಾಡಿಕೊಟ್ಟಿದ್ದೂ ಇದೆ. ಆದರೆ, ಅವರು ಎಂದಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸುವಿಕೆಯನ್ನು ನಿಲ್ಲಿಸಿಲ್ಲ. ಸಿಎಂ ಯಾರಾಗಬೇಕು ಎನ್ನುವ ವಿಚಾರದಲ್ಲೂ ಅವರು ಅಭಿಪ್ರಾಯ ತಿಳಿಸಿದ್ದಾರೆ.

‘ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಕರ್ನಾಟಕದ ಜನತೆಗೆ ಉತ್ತಮ ಸಿಎಂ ಯಾರು? ನಮ್ಮ ಜನರ ಜೀವನವನ್ನು ಸುಧಾರಿಸುವ ದೃಷ್ಟಿಯಿಂದ ಸಿದ್ದರಾಮಯ್ಯ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಅವನತಿ ವಿಚಾರದಲ್ಲಿ ಡಿಕೆ ಶಿವಕುಮಾರ್. ಆದ್ದರಿಂದ, ಅಲ್ಪಾವಧಿಗೆ ಸಿದ್ದರಾಮಯ್ಯ ಕರ್ನಾಟಕಕ್ಕೆ ಉತ್ತಮ. ದೀರ್ಘಾವಧಿಗೆ ಡಿಕೆ ಶಿವಕುಮಾರ್ ಕರ್ನಾಟಕಕ್ಕೆ ಉತ್ತಮ’ ಎಂದು ಅವರು ಅಭಿಪ್ರಾಯ ತಿಳಿಸಿದ್ದಾರೆ.

ಇದನ್ನೂ ಓದಿ: ಡಿಕೆ ಶಿವಕುಮಾರ್ ಸಿಎಂ ಆಗಬೇಕು: ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಬೇಡಿಕೆ

ನರೇಂದ್ರ ಮೋದಿ ಪ್ರಧಾನಿ ಆದ ಬಳಿಕ ಕಾಂಗ್ರೆಸ್​ ಪ್ರಾಬಲ್ಯ ಕಡಿಮೆ ಆಗಿತ್ತು. ಈಗ ನಿಧಾನವಾಗಿ ಅನೇಕ ಕಡೆಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತಿದೆ. ಹೀಗಾಗಿ, ಪಕ್ಷ ಕಟ್ಟಿ ಬೆಳೆಸಲು ಡಿಕೆಶಿ ಬೇಕು, ಜನರ ದೃಷ್ಟಿಯಿಂದ ಸಿದ್ದರಾಮಯ್ಯ ಬೇಕು ಎಂಬುದು ಅವರ ಟ್ವೀಟ್​ನ ಸಾರಾಂಶ ಎಂದು ಅನೇಕರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 8:25 am, Mon, 15 May 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು
‘ಬ್ಲಾಸ್ಟ್​’ ಸಿನಿಮಾಗೆ ಬ್ಲಾಸ್ಟ್​ ಮ್ಯೂಸಿಕ್ ಕೊಟ್ಟ ರವಿ ಬಸ್ರೂರು