AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚಿಕ್ಕಣ್ಣ ಮತ್ತೆ ಗಾರೆ ಕೆಲಸಕ್ಕೆ ಇಳಿದಿದ್ದೇಕೆ? ವೈರಲ್​ ಆಯ್ತು ವಿಡಿಯೋ

ನಟ ಚಿಕ್ಕಣ್ಣ ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಗಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಚಿತ್ರರಂಗಕ್ಕೆ ಬಂದಮೇಲೆ ಅವರ ಜೀವನ ಬದಲಾಗಿದೆ.

ನಟ ಚಿಕ್ಕಣ್ಣ ಮತ್ತೆ ಗಾರೆ ಕೆಲಸಕ್ಕೆ ಇಳಿದಿದ್ದೇಕೆ? ವೈರಲ್​ ಆಯ್ತು ವಿಡಿಯೋ
ಚಿಕ್ಕಣ್ಣ
ರಾಜೇಶ್ ದುಗ್ಗುಮನೆ
|

Updated on: May 05, 2021 | 7:50 PM

Share

ಕೊರೊನಾ ವೈರಸ್​ ಎರಡನೇ ಅಲೆಯ ಅಬ್ಬರ ಮಿತಿಮೀರಿದೆ. ದೇಶದಲ್ಲಿ ನಿತ್ಯ ಮೂರುವರೆ ಲಕ್ಷಕ್ಕೂ  ಅಧಿಕ ಕೊವಿಡ್​ ಕೇಸ್​ಗಳು ವರದಿ ಆಗುತ್ತಿವೆ. ಸಾಕಷ್ಟು ಸೆಲೆಬ್ರಿಟಿಗಳು ಕೊರೊನಾದಿಂದ ತೊಂದರೆಗೆ ಒಳಗಾದವರಿಗೆ ಸಹಾಯ ಮಾಡುತ್ತಿದ್ದಾರೆ. ಇನ್ನೂ ಕೆಲವರು, ಮನೆಯಲ್ಲೇ ಉಳಿದುಕೊಂಡಿದ್ದಾರೆ. ಈಗ ಚಿಕ್ಕಣ್ಣ ತಮ್ಮ ಫಾರ್ಮ್​ಹೌಸ್​ಗೆ ತೆರಳಿದ್ದಾರೆ. ಅಷ್ಟೇ ಅಲ್ಲ, ಹೋಂ ಐಸೋಲೇಷನ್ನಲ್ಲಿರುವವರಿಗೆ ಅವರು ಸಹಾಯ ಮಾಡುತ್ತಿದ್ದಾರೆ.

ನಟ ಚಿಕ್ಕಣ್ಣ ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಗಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಚಿತ್ರರಂಗಕ್ಕೆ ಬಂದಮೇಲೆ ಅವರ ಜೀವನ ಬದಲಾಗಿದೆ. ಕನ್ನಡದ ಬೇಡಿಕೆಯ ಹಾಸ್ಯ ನಟರಾಗಿ ಚಿಕ್ಕಣ್ಣ ಹೊರ ಹೊಮ್ಮಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಆದರೆ, ಅವರು ತಮ್ಮ ಕೆಲಸವನ್ನು ಮರೆತಿಲ್ಲ.

ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೊರೊನಾ ಕರ್ಫ್ಯೂ ಜಾರಿ ಮಾಡಲಾಗಿದೆ. ಸಿನಿಮಾ ಕೆಲಸಗಳು ಸಂಪೂರ್ಣವಾಗಿ ನಿಂತಿವೆ. ಈ ಕಾರಣಕ್ಕೆ ಚಿಕ್ಕಣ್ಣ ಫಾರ್ಮ್ ಹೌಸ್ ಸೇರಿದ್ದಾರೆ. ಅಲ್ಲದೆ, ಅಲ್ಲಿ ನಿರ್ಮಾಣ ಆಗುತ್ತಿರುವ ಶೌಚಾಲಯಕ್ಕೆ ತಾವೇ ಖುದ್ದು ಗಾರೆ ಕೆಲಸವನ್ನು ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಹೋಂ ಐಸೋಲೇಷನ್​ ಆದರೆ ಅಂಥವರಿಗೆ ಹೊರಗೆ ಹೋಗುವ ಅವಕಾಶ ಇರುವುದಿಲ್ಲ. ಕೆಲವರು ಊಟಕ್ಕೂ ಪರದಾಡಿದ್ದಿದೆ. ಹೀಗಾಗಿ, ಸ್ಥಳೀಯವಾಗಿ ಹೋಂ ಐಸೋಲೇಷನ್‌ನಲ್ಲಿ ಇರೋ ಕೊರೊನಾ ಸೋಂಕಿತರಿಗೆ ತಾವೇ ಖುದ್ದು ಅಡುಗೆ ಮಾಡಿ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ಚಿಕ್ಕಣ್ಣ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಕೆಲವರು ಊಟ ಹಂಚಿದರೆ ಇನ್ನೂ ಕೆಲವರು ಕೊರೊನಾ ರೋಗಿಗಳಿಗೆ ಬೆಡ್​ ಹಾಗೂ ಆಮ್ಲಜನಕ ಒದಗಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: ಸೌಟು ಹಿಡಿದು ಹೋಂ ಐಸೋಲೇಶನ್ನಲ್ಲಿ ಇರೋ ಜನರಿಗೆ ಊಟದ ವ್ಯವಸ್ಥೆ ಮಾಡ್ತಿದ್ದಾರೆ ನಟ ಚಿಕ್ಕಣ್ಣ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು