AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚಿಕ್ಕಣ್ಣ ಮತ್ತೆ ಗಾರೆ ಕೆಲಸಕ್ಕೆ ಇಳಿದಿದ್ದೇಕೆ? ವೈರಲ್​ ಆಯ್ತು ವಿಡಿಯೋ

ನಟ ಚಿಕ್ಕಣ್ಣ ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಗಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಚಿತ್ರರಂಗಕ್ಕೆ ಬಂದಮೇಲೆ ಅವರ ಜೀವನ ಬದಲಾಗಿದೆ.

ನಟ ಚಿಕ್ಕಣ್ಣ ಮತ್ತೆ ಗಾರೆ ಕೆಲಸಕ್ಕೆ ಇಳಿದಿದ್ದೇಕೆ? ವೈರಲ್​ ಆಯ್ತು ವಿಡಿಯೋ
ಚಿಕ್ಕಣ್ಣ
ರಾಜೇಶ್ ದುಗ್ಗುಮನೆ
|

Updated on: May 05, 2021 | 7:50 PM

Share

ಕೊರೊನಾ ವೈರಸ್​ ಎರಡನೇ ಅಲೆಯ ಅಬ್ಬರ ಮಿತಿಮೀರಿದೆ. ದೇಶದಲ್ಲಿ ನಿತ್ಯ ಮೂರುವರೆ ಲಕ್ಷಕ್ಕೂ  ಅಧಿಕ ಕೊವಿಡ್​ ಕೇಸ್​ಗಳು ವರದಿ ಆಗುತ್ತಿವೆ. ಸಾಕಷ್ಟು ಸೆಲೆಬ್ರಿಟಿಗಳು ಕೊರೊನಾದಿಂದ ತೊಂದರೆಗೆ ಒಳಗಾದವರಿಗೆ ಸಹಾಯ ಮಾಡುತ್ತಿದ್ದಾರೆ. ಇನ್ನೂ ಕೆಲವರು, ಮನೆಯಲ್ಲೇ ಉಳಿದುಕೊಂಡಿದ್ದಾರೆ. ಈಗ ಚಿಕ್ಕಣ್ಣ ತಮ್ಮ ಫಾರ್ಮ್​ಹೌಸ್​ಗೆ ತೆರಳಿದ್ದಾರೆ. ಅಷ್ಟೇ ಅಲ್ಲ, ಹೋಂ ಐಸೋಲೇಷನ್ನಲ್ಲಿರುವವರಿಗೆ ಅವರು ಸಹಾಯ ಮಾಡುತ್ತಿದ್ದಾರೆ.

ನಟ ಚಿಕ್ಕಣ್ಣ ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಗಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಚಿತ್ರರಂಗಕ್ಕೆ ಬಂದಮೇಲೆ ಅವರ ಜೀವನ ಬದಲಾಗಿದೆ. ಕನ್ನಡದ ಬೇಡಿಕೆಯ ಹಾಸ್ಯ ನಟರಾಗಿ ಚಿಕ್ಕಣ್ಣ ಹೊರ ಹೊಮ್ಮಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಆದರೆ, ಅವರು ತಮ್ಮ ಕೆಲಸವನ್ನು ಮರೆತಿಲ್ಲ.

ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೊರೊನಾ ಕರ್ಫ್ಯೂ ಜಾರಿ ಮಾಡಲಾಗಿದೆ. ಸಿನಿಮಾ ಕೆಲಸಗಳು ಸಂಪೂರ್ಣವಾಗಿ ನಿಂತಿವೆ. ಈ ಕಾರಣಕ್ಕೆ ಚಿಕ್ಕಣ್ಣ ಫಾರ್ಮ್ ಹೌಸ್ ಸೇರಿದ್ದಾರೆ. ಅಲ್ಲದೆ, ಅಲ್ಲಿ ನಿರ್ಮಾಣ ಆಗುತ್ತಿರುವ ಶೌಚಾಲಯಕ್ಕೆ ತಾವೇ ಖುದ್ದು ಗಾರೆ ಕೆಲಸವನ್ನು ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಹೋಂ ಐಸೋಲೇಷನ್​ ಆದರೆ ಅಂಥವರಿಗೆ ಹೊರಗೆ ಹೋಗುವ ಅವಕಾಶ ಇರುವುದಿಲ್ಲ. ಕೆಲವರು ಊಟಕ್ಕೂ ಪರದಾಡಿದ್ದಿದೆ. ಹೀಗಾಗಿ, ಸ್ಥಳೀಯವಾಗಿ ಹೋಂ ಐಸೋಲೇಷನ್‌ನಲ್ಲಿ ಇರೋ ಕೊರೊನಾ ಸೋಂಕಿತರಿಗೆ ತಾವೇ ಖುದ್ದು ಅಡುಗೆ ಮಾಡಿ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ಚಿಕ್ಕಣ್ಣ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಕೆಲವರು ಊಟ ಹಂಚಿದರೆ ಇನ್ನೂ ಕೆಲವರು ಕೊರೊನಾ ರೋಗಿಗಳಿಗೆ ಬೆಡ್​ ಹಾಗೂ ಆಮ್ಲಜನಕ ಒದಗಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: ಸೌಟು ಹಿಡಿದು ಹೋಂ ಐಸೋಲೇಶನ್ನಲ್ಲಿ ಇರೋ ಜನರಿಗೆ ಊಟದ ವ್ಯವಸ್ಥೆ ಮಾಡ್ತಿದ್ದಾರೆ ನಟ ಚಿಕ್ಕಣ್ಣ

ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮಕ್ಕಳು ಮಾತನಾಡುವಾಗ ತೊದಲುತ್ತಿದ್ರೆ ಜ್ಯೋತಿಷ್ಯ ಪ್ರಕಾರ ಇದೇ ಕಾರಣ
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಮದ್ಯದ ಅಮಲಿನಲ್ಲಿದ್ದ ಚಾಲಕನ ನಿಯಂತ್ರಣ ತಪ್ಪಿ ಮನೆಗೆ ನುಗ್ಗಿದ ಕಾರು
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
ಇಂದು ರಾಶಿಯವರಿಗೆಜವಾಬ್ದಾರಿಗಳು ಹೆಚ್ಚಾದರೂ, ಉದ್ಯೋಗದಲ್ಲಿ ಶುಭವಾಗಲಿದೆ
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
IIT ಬಾಂಬೆ ತರಗತಿಯ ಟೇಬಲ್ ಮೇಲೆ ಹತ್ತಿ ನಿಂತ ನಾಯಿ; ವಿಡಿಯೋ ವೈರಲ್
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಾರಿಗೆ ನೌಕರರ ವೇತನ ಪರಿಷ್ಕರಣೆ ಬಗ್ಗೆ ರಾಮಲಿಂಗಾರೆಡ್ಡಿ ಹೇಳಿದ್ದಿಷ್ಟು
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಸಿಎಂ ಬದಲಾವಣೆ ಬಗ್ಗೆ ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?