AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಟ ಚಿಕ್ಕಣ್ಣ ಮತ್ತೆ ಗಾರೆ ಕೆಲಸಕ್ಕೆ ಇಳಿದಿದ್ದೇಕೆ? ವೈರಲ್​ ಆಯ್ತು ವಿಡಿಯೋ

ನಟ ಚಿಕ್ಕಣ್ಣ ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಗಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಚಿತ್ರರಂಗಕ್ಕೆ ಬಂದಮೇಲೆ ಅವರ ಜೀವನ ಬದಲಾಗಿದೆ.

ನಟ ಚಿಕ್ಕಣ್ಣ ಮತ್ತೆ ಗಾರೆ ಕೆಲಸಕ್ಕೆ ಇಳಿದಿದ್ದೇಕೆ? ವೈರಲ್​ ಆಯ್ತು ವಿಡಿಯೋ
ಚಿಕ್ಕಣ್ಣ
ರಾಜೇಶ್ ದುಗ್ಗುಮನೆ
|

Updated on: May 05, 2021 | 7:50 PM

Share

ಕೊರೊನಾ ವೈರಸ್​ ಎರಡನೇ ಅಲೆಯ ಅಬ್ಬರ ಮಿತಿಮೀರಿದೆ. ದೇಶದಲ್ಲಿ ನಿತ್ಯ ಮೂರುವರೆ ಲಕ್ಷಕ್ಕೂ  ಅಧಿಕ ಕೊವಿಡ್​ ಕೇಸ್​ಗಳು ವರದಿ ಆಗುತ್ತಿವೆ. ಸಾಕಷ್ಟು ಸೆಲೆಬ್ರಿಟಿಗಳು ಕೊರೊನಾದಿಂದ ತೊಂದರೆಗೆ ಒಳಗಾದವರಿಗೆ ಸಹಾಯ ಮಾಡುತ್ತಿದ್ದಾರೆ. ಇನ್ನೂ ಕೆಲವರು, ಮನೆಯಲ್ಲೇ ಉಳಿದುಕೊಂಡಿದ್ದಾರೆ. ಈಗ ಚಿಕ್ಕಣ್ಣ ತಮ್ಮ ಫಾರ್ಮ್​ಹೌಸ್​ಗೆ ತೆರಳಿದ್ದಾರೆ. ಅಷ್ಟೇ ಅಲ್ಲ, ಹೋಂ ಐಸೋಲೇಷನ್ನಲ್ಲಿರುವವರಿಗೆ ಅವರು ಸಹಾಯ ಮಾಡುತ್ತಿದ್ದಾರೆ.

ನಟ ಚಿಕ್ಕಣ್ಣ ಚಿತ್ರರಂಗಕ್ಕೆ ಬರುವುದಕ್ಕೂ ಮೊದಲು ಗಾರೆ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು. ಚಿತ್ರರಂಗಕ್ಕೆ ಬಂದಮೇಲೆ ಅವರ ಜೀವನ ಬದಲಾಗಿದೆ. ಕನ್ನಡದ ಬೇಡಿಕೆಯ ಹಾಸ್ಯ ನಟರಾಗಿ ಚಿಕ್ಕಣ್ಣ ಹೊರ ಹೊಮ್ಮಿದ್ದಾರೆ. ಅವರ ಖ್ಯಾತಿ ಹೆಚ್ಚುತ್ತಲೇ ಇದೆ. ಆದರೆ, ಅವರು ತಮ್ಮ ಕೆಲಸವನ್ನು ಮರೆತಿಲ್ಲ.

ಕರ್ನಾಟಕದಲ್ಲಿ ಕೊರೊನಾ ನಿಯಂತ್ರಣಕ್ಕೆ ಕೊರೊನಾ ಕರ್ಫ್ಯೂ ಜಾರಿ ಮಾಡಲಾಗಿದೆ. ಸಿನಿಮಾ ಕೆಲಸಗಳು ಸಂಪೂರ್ಣವಾಗಿ ನಿಂತಿವೆ. ಈ ಕಾರಣಕ್ಕೆ ಚಿಕ್ಕಣ್ಣ ಫಾರ್ಮ್ ಹೌಸ್ ಸೇರಿದ್ದಾರೆ. ಅಲ್ಲದೆ, ಅಲ್ಲಿ ನಿರ್ಮಾಣ ಆಗುತ್ತಿರುವ ಶೌಚಾಲಯಕ್ಕೆ ತಾವೇ ಖುದ್ದು ಗಾರೆ ಕೆಲಸವನ್ನು ಮಾಡಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್​ ಆಗಿದೆ.

ಹೋಂ ಐಸೋಲೇಷನ್​ ಆದರೆ ಅಂಥವರಿಗೆ ಹೊರಗೆ ಹೋಗುವ ಅವಕಾಶ ಇರುವುದಿಲ್ಲ. ಕೆಲವರು ಊಟಕ್ಕೂ ಪರದಾಡಿದ್ದಿದೆ. ಹೀಗಾಗಿ, ಸ್ಥಳೀಯವಾಗಿ ಹೋಂ ಐಸೋಲೇಷನ್‌ನಲ್ಲಿ ಇರೋ ಕೊರೊನಾ ಸೋಂಕಿತರಿಗೆ ತಾವೇ ಖುದ್ದು ಅಡುಗೆ ಮಾಡಿ ಊಟದ ವ್ಯವಸ್ಥೆ ಮಾಡುತ್ತಿದ್ದಾರೆ. ಚಿಕ್ಕಣ್ಣ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.

ಕೊರೊನಾ ಸಂದರ್ಭದಲ್ಲಿ ಸಾಕಷ್ಟು ಸೆಲೆಬ್ರಿಟಿಗಳು ತಮ್ಮದೇ ಆದ ರೀತಿಯಲ್ಲಿ ಸಹಾಯ ಮಾಡುತ್ತಿದ್ದಾರೆ. ಕೆಲವರು ಊಟ ಹಂಚಿದರೆ ಇನ್ನೂ ಕೆಲವರು ಕೊರೊನಾ ರೋಗಿಗಳಿಗೆ ಬೆಡ್​ ಹಾಗೂ ಆಮ್ಲಜನಕ ಒದಗಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಇದನ್ನೂ ಓದಿ: ಸೌಟು ಹಿಡಿದು ಹೋಂ ಐಸೋಲೇಶನ್ನಲ್ಲಿ ಇರೋ ಜನರಿಗೆ ಊಟದ ವ್ಯವಸ್ಥೆ ಮಾಡ್ತಿದ್ದಾರೆ ನಟ ಚಿಕ್ಕಣ್ಣ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ