AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಫಾರೆಸ್ಟ್’ ಹೊಕ್ಕ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು; ‘ಬ್ರಹ್ಮಚಾರಿ’ಯ ಹೊಸ ಸಿನಿಮಾ

‘ಡಬ್ಬಲ್ ಇಂಜಿನ್’, ‘ಬ್ರಹ್ಮಚಾರಿ’ ಸಿನಿಮಾಗಳನ್ನು ನಿರ್ದೇಶಿಸಿದ ಚಂದ್ರ ಮೋಹನ್ ಹೊಸ ಸಿನಿಮಾ ನಿರ್ದೇಶಿಸುತ್ತಿದ್ದು, ‘ಫಾರೆಸ್ಟ್’ ಟೈಟಲ್ ಇಡಲಾಗಿದೆ. ಅಡ್ವೆಂಚರ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

‘ಫಾರೆಸ್ಟ್’ ಹೊಕ್ಕ ಚಿಕ್ಕಣ್ಣ, ಅನೀಶ್, ಗುರುನಂದನ್, ರಂಗಾಯಣ ರಘು; ‘ಬ್ರಹ್ಮಚಾರಿ’ಯ ಹೊಸ ಸಿನಿಮಾ
ಫಾರೆಸ್ಟ್ ಸಿನಿಮಾ
ರಾಜೇಶ್ ದುಗ್ಗುಮನೆ
|

Updated on: Apr 18, 2024 | 10:57 AM

Share

‘ಡಬ್ಬಲ್ ಇಂಜಿನ್’, ‘ಬ್ರಹ್ಮಚಾರಿ’ ಸಿನಿಮಾಗಳನ್ನು ನಿರ್ದೇಶಿಸಿದ ಚಂದ್ರ ಮೋಹನ್ ಅವರು ಈಗ ‘ಫಾರೆಸ್ಟ್’ (Forest Movie) ಹೆಸರಿನ ಹೊಸ ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ಪ್ರಮುಖ ನಾಲ್ಕು ಕಲಾವಿದರು ಬಣ್ಣ ಹಚ್ಚುತ್ತಿದ್ದಾರೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಒಂದೇ ಫ್ರೇಮ್​ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಮೊದಲ ಪೋಸ್ಟರ್ ರಿಲೀಸ್ ಆಗಿ ಗಮನ ಸೆಳೆದಿದೆ.

ಚಂದ್ರ ಮೋಹನ್ ಅವರ ಈ ಚಿತ್ರಕ್ಕೆ ‘ಫಾರೆಸ್ಟ್’ ಎಂದು ಟೈಟಲ್ ಇಡೋಕೂ ಒಂದು ಕಾರಣ ಇದೆ. ಈ ಚಿತ್ರದ ಶೇ.80ರಷ್ಟು ಕಥೆ ಕಾಡಿನಲ್ಲೇ ಸಾಗಲಿದೆ. ಅಡ್ವೆಂಚರ್ ಕಾಮಿಡಿ ಶೈಲಿಯಲ್ಲಿ ಸಿನಿಮಾ ಮೂಡಿ ಬರುತ್ತಿದೆ. ಈ ಚಿತ್ರದ ಪೋಸ್ಟರ್​ನಲ್ಲಿ ಇವರು ದೊಡ್ಡ ಚೀಲದ ಗಂಟನ್ನು ಹಿಡಿದು ನಿಂತಿದ್ದಾರೆ. ಈ ಸಿನಿಮಾ ಫನ್ ಜೊತೆಗೆ ಥ್ರಿಲ್ಲಿಂಗ್ ರೈಡ್ ಅನುಭವ ನೀಡಲಿದೆ. ‘ಫಾರೆಸ್ಟ್’ ಸಿನಿಮಾಗೆ ಎನ್​ಎಂಕೆ ಸಿನಿಮಾಸ್ ಬ್ಯಾನರ್ ನಡಿ ಕಾಂತರಾಜು ಬಂಡವಾಳ ಹೂಡುತ್ತಿದ್ದಾರೆ. ಇದು ಅವರ ಮೊದಲ ನಿರ್ಮಾಣದ ಅನುಭವ. ಸಿನಿಮಾರಂಗದ ಮೇಲಿನ ಆಸಕ್ತಿಯಿಂದ ‘ಫಾರೆಸ್ಟ್’ ಚಿತ್ರದ ಮೂಲಕ ನಿರ್ಮಾಪಕರಾಗುತ್ತಿದ್ದಾರೆ.

ರಂಗಾಯಣ ರಘು, ಚಿಕ್ಕಣ್ಣ ತೆರೆಮೇಲೆ ಇದ್ದರೆ ನಗು ಗ್ಯಾರಂಟಿ. ಇವರನ್ನು ಒಟ್ಟಿಗೆ ತೆರೆಮೇಲೆ ನೋಡೊಕೆ ಫ್ಯಾನ್ಸ್ ಖುಷಿಪಟ್ಟಿದ್ದಾರೆ. ರಾಮನವಮಿ ಪ್ರಯುಕ್ತ ಫೋಟೋ ಹಂಚಿಕೊಳ್ಳಲಾಗಿದೆ. ಮುಂದಿನ ದಿನಗಳಲ್ಲಿ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಸಿಗಲಿದೆ.

ಇದನ್ನೂ ಓದಿ: ನಟ ಯಶ್​ ನೀಡಿದ ಬೆಂಬಲವನ್ನು ನೆನೆದ ‘ಉಪಾಧ್ಯಕ್ಷ’ ಚಿಕ್ಕಣ್ಣ

‘ಫಾರೆಸ್ಟ್’ ಚಿತ್ರಕ್ಕೆ ವಿ. ರವಿಶಂಕರ್ ಅವರು ಛಾಯಾಗ್ರಹಣ ಮಾಡುತ್ತಿದ್ದಾರೆ. ಅರ್ಜುನ್ ಕಿಟ್ಟು ಸಂಕಲನ ಇದೆ. ಧರ್ಮವೀರ್-ವೀರ್ ಸಮರ್ಥ್ ಸಂಗೀತ ಸಂಯೋಜನೆ ಇರಲಿದೆ. ಸದ್ಯ ಟೈಟಲ್ ರಿವೀಲ್ ಮಾಡಿರುವ ಚಿತ್ರತಂಡವೀಗ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗದ ಮಾಹಿತಿ ನೀಡಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ