AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಜಸ್ಟ್ ಮಿಸ್, ನತದೃಷ್ಟ ಪ್ರದೋಷ್

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿ 17 ಆರೋಪಿಗಳ ಬಂಧನವಾಗಿದೆ. ನಟ ಚಿಕ್ಕಣ್ಣ ಈ ಪ್ರಕರಣದಿಂದ ಕೊದಲೆಳೆ ಅಂತರದಿಂದ ಪಾರಾಗಿದ್ದಾರೆ.

ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಜಸ್ಟ್ ಮಿಸ್, ನತದೃಷ್ಟ ಪ್ರದೋಷ್
ಮಂಜುನಾಥ ಸಿ.
|

Updated on:Jul 21, 2024 | 8:13 AM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತು ಗ್ಯಾಂಗ್ ಆರೋಪಿಗಳಾಗಿ ಪರಪ್ಪನ ಅಗ್ರಹಾರ ಜೈಲು ಸೇರಿದ್ದಾರೆ. ಕೊಲೆ ಪ್ರಕರಣದಲ್ಲಿ 17 ಜನ ಆರೋಪಿಗಳನ್ನು ಬಂಧಿಸಲಾಗಿದೆ. ಆದರೆ ಹಲವಾರು ಮಂದಿಯನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಅದರಲ್ಲಿ ನಟ ಚಿಕ್ಕಣ್ಣ ಸಹ ಒಬ್ಬರು. ಅಸಲಿಗೆ ಚಿಕ್ಕಣ್ಣ ಸಹ ಆರೋಪಿಗಳಲ್ಲಿ ಒಬ್ಬರಾಗಿ ಜೈಲಿನಲ್ಲಿರಬೇಕಿತ್ತು, ಆದರೆ ಅವರ ಅದೃಷ್ಟ ಚೆನ್ನಾಗಿದ್ದು ಕೂದಲೆಳೆ ಅಂತರದಲ್ಲಿ ಈ ಪ್ರಕರಣದಿಂದ ಪಾರಾದರು. ಆದರೆ ಪ್ರದೋಷ್​ ಅದೃಷ್ಟ ಕೊನೆಯ ಕ್ಷಣದಲ್ಲಿ ಕೈಕೊಟ್ಟು ಆರೋಪಿಯಾದ. ಹೇಗೆ? ಇಲ್ಲಿದೆ ವಿವರ.

ರೇಣುಕಾ ಸ್ವಾಮಿ ಕೊಲೆ ನಡೆಯುವ ಮುಂಚೆ ನಟ ದರ್ಶನ್ ಹಾಗೂ ಇನ್ನೂ ಕೆಲವರು, ಪ್ರಕರಣದ ಮತ್ತೊಬ್ಬ ಆರೋಪಿ ವಿನಯ್ ಒಡೆತನದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್​ನಲ್ಲಿ ಕುಡಿದು ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ನಟ ಚಿಕ್ಕಣ್ಣ ಸಹ ಇದ್ದರು. ನಟ ದರ್ಶನ್ ಪಟ್ಟಣಗೆರೆ ಶೆಡ್​ಗೆ ಹೋಗುವಾಗ ಚಿಕ್ಕಣ್ಣರನ್ನು ಸಹ ಕರೆದರಂತೆ. ಆದರೆ ಚಿಕ್ಕಣ್ಣ ದರ್ಶನ್​ ಜೊತೆ ಹೋಗಲು ಒಪ್ಪದೆ ತಡವಾಗಿದೆ ಮನೆಗೆ ಹೋಗುವೆ ಎಂದು ಹೇಳಿ ಮನೆಯ ಕಡೆ ಹೊರಟಿದ್ದಾರೆ.

ಆದರೆ ಅದೇ ಪಾರ್ಟಿಯಲ್ಲಿದ್ದ ಪ್ರದೋಶ್, ಬೇಡವೆಂದರೂ ನಾನೂ ಬರ್ತೀನಿ ಬಾಸ್ ಎಂದುಕೊಂಡು ದರ್ಶನ್ ಜೊತೆಗೆ ಹೋಗಿದ್ದರಂತೆ. ಅಸಲಿಗೆ ಪ್ರದೋಶ್, ದರ್ಶನ್​ ಗ್ಯಾಂಗ್​ನಲ್ಲಿಯೇ ಇರಲಿಲ್ಲವಂತೆ. ಪಾರ್ಟಿ ನಡೆಯುವಾಗ ನನಗೆ ತುಸು ಕೆಲಸ ಇದೆ ಎಂದು ದರ್ಶನ್ ಪಾರ್ಟಿಯಿಂದ ಹೊರಬಂದರಂತೆ. ಆಗ ಪ್ರದೋಶ್ ಸಹ ಬಾಸ್ ನಾನೂ ಬರ್ತೀನಿ ಎಂದುಕೊಂಡು ಅವರ ಜೊತೆ ಹೋದರಂತೆ. ದರ್ಶನ್ ಬೇಡ ಎಂದರೂ ಸಹ ದರ್ಶನ್ ಜೊತೆಗೆ ಕಾರಿನಲ್ಲಿ ಹೋಗಿದ್ದಾರೆ. ರೇಣುಕಾ ಸ್ವಾಮಿಯನ್ನು ಚಿತ್ರದುರ್ಗದಿಂದ ಕರೆತಂದಿರುವ ವಿಚಾರ ಪಾರ್ಟಿಯಲ್ಲಿದ್ದ ಯಾರಿಗೂ ಗೊತ್ತಿರಲಿಲ್ಲವಂತೆ. ಆದರೆ ಪ್ರದೋಶ್ ಪಾರ್ಟಿ ಬಳಿಕ ದರ್ಶನ್​ ಅನ್ನು ಬಲವಂತ ಮಾಡಿ ಅವರ ಜೊತೆಗೆ ಪಟ್ಟಣಗೆರೆ ಶೆಡ್​ಗೆ ಹೋಗಿದ್ದಾನೆ. ಇದರಿಂದಾಗಿ ಆತ ಪ್ರಕರಣದ ಆರೋಪಿಯಾಗಿದ್ದಾನೆ. ಕೊಲೆ ನಡೆದ ಬಳಿಕ ಪ್ರಕರಣವನ್ನು ಮುಚ್ಚಿಹಾಕಲು ಪ್ರದೋಶ್ ಅನ್ನು ದರ್ಶನ್ ಬಳಸಿಕೊಂಡಿದ್ದಾರೆ ಎನ್ನಲಾಗಿದೆ. ದರ್ಶನ್ ಕೊಟ್ಟ ಹಣವನ್ನು ಪ್ರದೋಶ್, ಇತರರಿಗೆ ಹಂಚಿಕೆ ಮಾಡಿದ್ದಾನೆ ಎನ್ನಲಾಗುತ್ತಿದೆ.

ಇದನ್ನೂ ಓದಿ:ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಜಸ್ಟ್ ಮಿಸ್, ನತದೃಷ್ಟ ಪ್ರದೋಷ್

ಪ್ರಕರಣದಲ್ಲಿ ದರ್ಶನ್ ಹಾಗೂ ಇತರೆ ಆರೋಪಿಗಳ ಬಂಧನವಾಗಿ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿಟ್ಟು ವಿಚಾರಣೆ ಮಾಡುವ ಸಂದರ್ಭದಲ್ಲಿ ನಟ ಚಿಕ್ಕಣ್ಣ ಅವರನ್ನು ಸಹ ಪೊಲೀಸರು ವಿಚಾರಣೆಗೆ ಕರೆದಿದ್ದರು. ತಾವು ಪಾರ್ಟಿಯಲ್ಲಿ ಮಾತ್ರವೇ ಇದ್ದು ಆ ನಂತರ ಮನೆಗೆ ಹೋಗಿದ್ದಾಗಿ ಚಿಕ್ಕಣ್ಣ ಹೇಳಿದ್ದರು. ಚಿಕ್ಕಣ್ಣನ ಅದೃಷ್ಟ ಚೆನ್ನಾಗಿತ್ತು ಪ್ರಕರಣದಿಂದ ಸ್ವಲ್ಪದರಲ್ಲಿ ಪಾರಾದರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:52 am, Sun, 21 July 24

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!