AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಯನ್ ವೀಕ್ಷಣೆ ಕಂಡ ‘ಫಾರೆಸ್ಟ್’ ಹಾಡು; ಚಿಕ್ಕಣ ಮತ್ತು ಸಂಗಡಿಗರ ಹೊಸ ವೇಷ

‘ಫಾರೆಸ್ಟ್​’ ಸಿನಿಮಾದಲ್ಲಿ ಚಿಕ್ಕಣ್ಣ, ಶರಣ್ಯ ಶೆಟ್ಟಿ, ಅನೀಶ್ ತೇಜೇಶ್ವರ್, ಗುರುನಂದನ್, ಅವಿನಾಶ್, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸುನೀಲ್ ಕುಮಾರ್ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಈ ಸಿನಿಮಾದ ಹೊಸ ಹಾಡು ಮಿಲಿಯನ್​ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ.

ಮಿಲಿಯನ್ ವೀಕ್ಷಣೆ ಕಂಡ ‘ಫಾರೆಸ್ಟ್’ ಹಾಡು; ಚಿಕ್ಕಣ ಮತ್ತು ಸಂಗಡಿಗರ ಹೊಸ ವೇಷ
ಅನೀಶ್ ತೇಜೇಶ್ವರ್, ಚಿಕ್ಕಣ್ಣ, ಗುರುನಂದನ್
ಮದನ್​ ಕುಮಾರ್​
|

Updated on: Jul 21, 2024 | 10:42 PM

Share

ಸ್ಯಾಂಡಲ್​ವುಡ್​ನಲ್ಲೀಗ ವಿವಿಧ ಕಾನ್ಸೆಪ್ಟ್​ಗಳ ಸಿನಿಮಾ ಮೂಡಿಬರುತ್ತಿವೆ. ಈಗ ಶೂಟಿಂಗ್​ ಮುಗಿಸಿಕೊಂಡಿರುವ ‘ಫಾರೆಸ್ಟ್​’ ಚಿತ್ರದಲ್ಲೂ ಅಂಥ ಡಿಫರೆಂಟ್​ ಕಾನ್ಸೆಪ್ಟ್​ ಇದೆ ಎಂದು ತಂಡ ಹೇಳಿಕೊಂಡಿದೆ. ‘ಎನ್.ಎಂ.ಕೆ. ಸಿನಿಮಾಸ್’ ಬ್ಯಾನರ್​ನಲ್ಲಿ ಎನ್.ಎಂ. ಕಾಂತರಾಜ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚಂದ್ರ ಮೋಹನ್ ಅವರು ನಿರ್ದೇಶನ ಮಾಡಿದ್ದಾರೆ. ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ‘ಫಾರೆಸ್ಟ್’ ಸಿನಿಮಾದ ಹೊಸ ಸಾಂಗ್​ ಬಿಡುಗಡೆಯಾಗಿ ಸದ್ದು ಮಾಡುತ್ತಿದೆ.

‘ಫಾರೆಸ್ಟ್​’ ಸಿನಿಮಾ ಶುರುವಿನಿಂದಲೂ ಸದ್ದು ಮಾಡುತ್ತಾ ಬರುತ್ತಿದೆ. ಈಗ ‘ಓಡೋ ಓಡೋ..’ ಎಂಬ ಹಾಡಿನ ಮೂಲಕ ಗಮನ ಸೆಳೆಯುತ್ತಿದೆ. ಈ ಹಾಡನ್ನು ಪುನೀತ್ ಆರ್ಯ ಅವರು ಬರೆದಿದ್ದಾರೆ. ಧರ್ಮವಿಶ್ ಅವರು ಸಂಗೀತ ನೀಡಿದ್ದಾರೆ. ‘ಎನ್.ಎಂ.ಕೆ ಸಿನಿಮಾಸ್’ ಯೂಟ್ಯೂಬ್ ಚಾನಲ್ ಮೂಲಕ ಈ ಹಾಡು ಬಿಡುಗಡೆ ಆಗಿದೆ. ಖ್ಯಾತ ಸಿಂಗರ್​ ಕೈಲಾಶ್ ಖೇರ್ ಅವರು ಈ ಗೀತೆಯನ್ನು ಹಾಡಿದ್ದಾರೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಜಸ್ಟ್ ಮಿಸ್, ನತದೃಷ್ಟ ಪ್ರದೋಷ್

ಯೂಟ್ಯೂಬ್​ನಲ್ಲಿ ಈ ಹಾಡನ್ನು ಜನರು ಮೆಚ್ಚಿಕೊಂಡಿದೆ. ಇತ್ತೀಚೆಗೆ ಬಿಡುಗಡೆ ಆದ ಈ ಸಾಂಗ್​ ಈಗಾಗಲೇ 1 ಮಿಲಿಯನ್​ಗಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಪಾಸಿಟಿವ್​ ಕಮೆಂಟ್​ಗಳು ಹರಿದು ಬರುತ್ತಿದೆ. ಬಹುತಾರಾಗಣ ಇರುವ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ. ಎಂ.ಎಂ. ಹಿಲ್ಸ್, ಮಡಿಕೇರಿ, ಸಂಪಾಜೆ ಫಾರೆಸ್ಟ್ ಮತ್ತು ಬೆಂಗಳೂರಿನಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ.

‘ಫಾರೆಸ್ಟ್​’ ಚಿತ್ರದ ನಿರ್ದೇಶಕ ಚಂದ್ರಮೋಹನ್ ಹಾಗೂ ಸತ್ಯಶೌರ್ಯ ಸಾಗರ್ ಅವರ ಜಂಟಿಯಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಸತ್ಯಶೌರ್ಯ ಸಾಗರ್ ಅವರ ಸಂಭಾಷಣೆ ಈ ಸಿನಿಮಾದಲ್ಲಿದೆ. ಚಿತ್ರದಲ್ಲಿ 2 ಹಾಡುಗಳಿದ್ದು, ಧರ್ಮವಿಶ್ ಅವರು ಸಂಗೀತ ನೀಡಿದ್ದಾರೆ. ಆನಂದ್ ರಾಜವಿಕ್ರಮ್ ಅವರು ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ, ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ