AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಯನ್ ವೀಕ್ಷಣೆ ಕಂಡ ‘ಫಾರೆಸ್ಟ್’ ಹಾಡು; ಚಿಕ್ಕಣ ಮತ್ತು ಸಂಗಡಿಗರ ಹೊಸ ವೇಷ

‘ಫಾರೆಸ್ಟ್​’ ಸಿನಿಮಾದಲ್ಲಿ ಚಿಕ್ಕಣ್ಣ, ಶರಣ್ಯ ಶೆಟ್ಟಿ, ಅನೀಶ್ ತೇಜೇಶ್ವರ್, ಗುರುನಂದನ್, ಅವಿನಾಶ್, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸುನೀಲ್ ಕುಮಾರ್ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಈ ಸಿನಿಮಾದ ಹೊಸ ಹಾಡು ಮಿಲಿಯನ್​ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ.

ಮಿಲಿಯನ್ ವೀಕ್ಷಣೆ ಕಂಡ ‘ಫಾರೆಸ್ಟ್’ ಹಾಡು; ಚಿಕ್ಕಣ ಮತ್ತು ಸಂಗಡಿಗರ ಹೊಸ ವೇಷ
ಅನೀಶ್ ತೇಜೇಶ್ವರ್, ಚಿಕ್ಕಣ್ಣ, ಗುರುನಂದನ್
ಮದನ್​ ಕುಮಾರ್​
|

Updated on: Jul 21, 2024 | 10:42 PM

Share

ಸ್ಯಾಂಡಲ್​ವುಡ್​ನಲ್ಲೀಗ ವಿವಿಧ ಕಾನ್ಸೆಪ್ಟ್​ಗಳ ಸಿನಿಮಾ ಮೂಡಿಬರುತ್ತಿವೆ. ಈಗ ಶೂಟಿಂಗ್​ ಮುಗಿಸಿಕೊಂಡಿರುವ ‘ಫಾರೆಸ್ಟ್​’ ಚಿತ್ರದಲ್ಲೂ ಅಂಥ ಡಿಫರೆಂಟ್​ ಕಾನ್ಸೆಪ್ಟ್​ ಇದೆ ಎಂದು ತಂಡ ಹೇಳಿಕೊಂಡಿದೆ. ‘ಎನ್.ಎಂ.ಕೆ. ಸಿನಿಮಾಸ್’ ಬ್ಯಾನರ್​ನಲ್ಲಿ ಎನ್.ಎಂ. ಕಾಂತರಾಜ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚಂದ್ರ ಮೋಹನ್ ಅವರು ನಿರ್ದೇಶನ ಮಾಡಿದ್ದಾರೆ. ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ‘ಫಾರೆಸ್ಟ್’ ಸಿನಿಮಾದ ಹೊಸ ಸಾಂಗ್​ ಬಿಡುಗಡೆಯಾಗಿ ಸದ್ದು ಮಾಡುತ್ತಿದೆ.

‘ಫಾರೆಸ್ಟ್​’ ಸಿನಿಮಾ ಶುರುವಿನಿಂದಲೂ ಸದ್ದು ಮಾಡುತ್ತಾ ಬರುತ್ತಿದೆ. ಈಗ ‘ಓಡೋ ಓಡೋ..’ ಎಂಬ ಹಾಡಿನ ಮೂಲಕ ಗಮನ ಸೆಳೆಯುತ್ತಿದೆ. ಈ ಹಾಡನ್ನು ಪುನೀತ್ ಆರ್ಯ ಅವರು ಬರೆದಿದ್ದಾರೆ. ಧರ್ಮವಿಶ್ ಅವರು ಸಂಗೀತ ನೀಡಿದ್ದಾರೆ. ‘ಎನ್.ಎಂ.ಕೆ ಸಿನಿಮಾಸ್’ ಯೂಟ್ಯೂಬ್ ಚಾನಲ್ ಮೂಲಕ ಈ ಹಾಡು ಬಿಡುಗಡೆ ಆಗಿದೆ. ಖ್ಯಾತ ಸಿಂಗರ್​ ಕೈಲಾಶ್ ಖೇರ್ ಅವರು ಈ ಗೀತೆಯನ್ನು ಹಾಡಿದ್ದಾರೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಜಸ್ಟ್ ಮಿಸ್, ನತದೃಷ್ಟ ಪ್ರದೋಷ್

ಯೂಟ್ಯೂಬ್​ನಲ್ಲಿ ಈ ಹಾಡನ್ನು ಜನರು ಮೆಚ್ಚಿಕೊಂಡಿದೆ. ಇತ್ತೀಚೆಗೆ ಬಿಡುಗಡೆ ಆದ ಈ ಸಾಂಗ್​ ಈಗಾಗಲೇ 1 ಮಿಲಿಯನ್​ಗಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಪಾಸಿಟಿವ್​ ಕಮೆಂಟ್​ಗಳು ಹರಿದು ಬರುತ್ತಿದೆ. ಬಹುತಾರಾಗಣ ಇರುವ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ. ಎಂ.ಎಂ. ಹಿಲ್ಸ್, ಮಡಿಕೇರಿ, ಸಂಪಾಜೆ ಫಾರೆಸ್ಟ್ ಮತ್ತು ಬೆಂಗಳೂರಿನಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ.

‘ಫಾರೆಸ್ಟ್​’ ಚಿತ್ರದ ನಿರ್ದೇಶಕ ಚಂದ್ರಮೋಹನ್ ಹಾಗೂ ಸತ್ಯಶೌರ್ಯ ಸಾಗರ್ ಅವರ ಜಂಟಿಯಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಸತ್ಯಶೌರ್ಯ ಸಾಗರ್ ಅವರ ಸಂಭಾಷಣೆ ಈ ಸಿನಿಮಾದಲ್ಲಿದೆ. ಚಿತ್ರದಲ್ಲಿ 2 ಹಾಡುಗಳಿದ್ದು, ಧರ್ಮವಿಶ್ ಅವರು ಸಂಗೀತ ನೀಡಿದ್ದಾರೆ. ಆನಂದ್ ರಾಜವಿಕ್ರಮ್ ಅವರು ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ, ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮದನ್​ ಕುಮಾರ್​
ಮದನ್​ ಕುಮಾರ್​

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು