AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಲಿಯನ್ ವೀಕ್ಷಣೆ ಕಂಡ ‘ಫಾರೆಸ್ಟ್’ ಹಾಡು; ಚಿಕ್ಕಣ ಮತ್ತು ಸಂಗಡಿಗರ ಹೊಸ ವೇಷ

‘ಫಾರೆಸ್ಟ್​’ ಸಿನಿಮಾದಲ್ಲಿ ಚಿಕ್ಕಣ್ಣ, ಶರಣ್ಯ ಶೆಟ್ಟಿ, ಅನೀಶ್ ತೇಜೇಶ್ವರ್, ಗುರುನಂದನ್, ಅವಿನಾಶ್, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು ಅವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸುನೀಲ್ ಕುಮಾರ್ ಮುಂತಾದವರು ಕೂಡ ಪಾತ್ರವರ್ಗದಲ್ಲಿ ಇದ್ದಾರೆ. ಈ ಸಿನಿಮಾದ ಹೊಸ ಹಾಡು ಮಿಲಿಯನ್​ ವೀಕ್ಷಣೆ ಕಂಡು ಮುನ್ನುಗ್ಗುತ್ತಿದೆ.

ಮಿಲಿಯನ್ ವೀಕ್ಷಣೆ ಕಂಡ ‘ಫಾರೆಸ್ಟ್’ ಹಾಡು; ಚಿಕ್ಕಣ ಮತ್ತು ಸಂಗಡಿಗರ ಹೊಸ ವೇಷ
ಅನೀಶ್ ತೇಜೇಶ್ವರ್, ಚಿಕ್ಕಣ್ಣ, ಗುರುನಂದನ್
ಮದನ್​ ಕುಮಾರ್​
|

Updated on: Jul 21, 2024 | 10:42 PM

Share

ಸ್ಯಾಂಡಲ್​ವುಡ್​ನಲ್ಲೀಗ ವಿವಿಧ ಕಾನ್ಸೆಪ್ಟ್​ಗಳ ಸಿನಿಮಾ ಮೂಡಿಬರುತ್ತಿವೆ. ಈಗ ಶೂಟಿಂಗ್​ ಮುಗಿಸಿಕೊಂಡಿರುವ ‘ಫಾರೆಸ್ಟ್​’ ಚಿತ್ರದಲ್ಲೂ ಅಂಥ ಡಿಫರೆಂಟ್​ ಕಾನ್ಸೆಪ್ಟ್​ ಇದೆ ಎಂದು ತಂಡ ಹೇಳಿಕೊಂಡಿದೆ. ‘ಎನ್.ಎಂ.ಕೆ. ಸಿನಿಮಾಸ್’ ಬ್ಯಾನರ್​ನಲ್ಲಿ ಎನ್.ಎಂ. ಕಾಂತರಾಜ್ ಅವರು ಈ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಚಂದ್ರ ಮೋಹನ್ ಅವರು ನಿರ್ದೇಶನ ಮಾಡಿದ್ದಾರೆ. ಚಿಕ್ಕಣ್ಣ, ಗುರುನಂದನ್, ಅನೀಶ್ ತೇಜೇಶ್ವರ್, ರಂಗಾಯಣ ರಘು ಅವರು ಮುಖ್ಯ ಭೂಮಿಕೆ ನಿಭಾಯಿಸಿದ್ದಾರೆ. ‘ಫಾರೆಸ್ಟ್’ ಸಿನಿಮಾದ ಹೊಸ ಸಾಂಗ್​ ಬಿಡುಗಡೆಯಾಗಿ ಸದ್ದು ಮಾಡುತ್ತಿದೆ.

‘ಫಾರೆಸ್ಟ್​’ ಸಿನಿಮಾ ಶುರುವಿನಿಂದಲೂ ಸದ್ದು ಮಾಡುತ್ತಾ ಬರುತ್ತಿದೆ. ಈಗ ‘ಓಡೋ ಓಡೋ..’ ಎಂಬ ಹಾಡಿನ ಮೂಲಕ ಗಮನ ಸೆಳೆಯುತ್ತಿದೆ. ಈ ಹಾಡನ್ನು ಪುನೀತ್ ಆರ್ಯ ಅವರು ಬರೆದಿದ್ದಾರೆ. ಧರ್ಮವಿಶ್ ಅವರು ಸಂಗೀತ ನೀಡಿದ್ದಾರೆ. ‘ಎನ್.ಎಂ.ಕೆ ಸಿನಿಮಾಸ್’ ಯೂಟ್ಯೂಬ್ ಚಾನಲ್ ಮೂಲಕ ಈ ಹಾಡು ಬಿಡುಗಡೆ ಆಗಿದೆ. ಖ್ಯಾತ ಸಿಂಗರ್​ ಕೈಲಾಶ್ ಖೇರ್ ಅವರು ಈ ಗೀತೆಯನ್ನು ಹಾಡಿದ್ದಾರೆ.

ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಚಿಕ್ಕಣ್ಣ ಜಸ್ಟ್ ಮಿಸ್, ನತದೃಷ್ಟ ಪ್ರದೋಷ್

ಯೂಟ್ಯೂಬ್​ನಲ್ಲಿ ಈ ಹಾಡನ್ನು ಜನರು ಮೆಚ್ಚಿಕೊಂಡಿದೆ. ಇತ್ತೀಚೆಗೆ ಬಿಡುಗಡೆ ಆದ ಈ ಸಾಂಗ್​ ಈಗಾಗಲೇ 1 ಮಿಲಿಯನ್​ಗಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಪಾಸಿಟಿವ್​ ಕಮೆಂಟ್​ಗಳು ಹರಿದು ಬರುತ್ತಿದೆ. ಬಹುತಾರಾಗಣ ಇರುವ ಈ ಸಿನಿಮಾದ ಶೂಟಿಂಗ್​ ಮುಕ್ತಾಯ ಆಗಿದೆ. ಎಂ.ಎಂ. ಹಿಲ್ಸ್, ಮಡಿಕೇರಿ, ಸಂಪಾಜೆ ಫಾರೆಸ್ಟ್ ಮತ್ತು ಬೆಂಗಳೂರಿನಲ್ಲಿ ಈ ಚಿತ್ರದ ಶೂಟಿಂಗ್​ ಮಾಡಲಾಗಿದೆ.

‘ಫಾರೆಸ್ಟ್​’ ಚಿತ್ರದ ನಿರ್ದೇಶಕ ಚಂದ್ರಮೋಹನ್ ಹಾಗೂ ಸತ್ಯಶೌರ್ಯ ಸಾಗರ್ ಅವರ ಜಂಟಿಯಾಗಿ ಕಥೆ, ಚಿತ್ರಕಥೆ ಬರೆದಿದ್ದಾರೆ. ಸತ್ಯಶೌರ್ಯ ಸಾಗರ್ ಅವರ ಸಂಭಾಷಣೆ ಈ ಸಿನಿಮಾದಲ್ಲಿದೆ. ಚಿತ್ರದಲ್ಲಿ 2 ಹಾಡುಗಳಿದ್ದು, ಧರ್ಮವಿಶ್ ಅವರು ಸಂಗೀತ ನೀಡಿದ್ದಾರೆ. ಆನಂದ್ ರಾಜವಿಕ್ರಮ್ ಅವರು ಹಿನ್ನೆಲೆ ಸಂಗೀತ ಒದಗಿಸಿದ್ದಾರೆ. ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ, ರವಿವರ್ಮ ಅವರ ಸಾಹಸ ನಿರ್ದೇಶನದಲ್ಲಿ ಈ ಸಿನಿಮಾ ಸಿದ್ಧವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ಪಡಿಕ್ಕಲ್, ಕೊಹ್ಲಿ ಬಾಲ್ಯದಲ್ಲಿ ಹೇಗಿದ್ರು ನೋಡಿ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
ತೆಂಗಿನಕಾಯಿ ಬೆಳೆಗಾರರಿಗೆ ಜಾಕ್​​ಪಾಟ್​​: ದಾಖಲೆ ಬರೆದ ಕೊಬ್ಬರಿ ಬೆಲೆ
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
'ಝೋಂಬಿ ಡ್ರಗ್ಸ್​ ಎನ್ನುವುದು ಏನೂ ಇಲ್ಲ': ಗೃಹ ಸಚಿವ ಪರಮೇಶ್ವರ್
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ನಾಪತ್ತೆಯಾದ ಬಾಲಕಿಯ ಕಿಡ್ನ್ಯಾಪ್ ಶಂಕೆ ವ್ಯಕ್ತಪಡಿಸಿದ ಜಿ. ಪರಮೇಶ್ವರ್!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ದೇವರಿಗೆ ಕೈ ಮುಗಿದು, ಕುಂಕುಮ ಹಚ್ಚಿಕೊಂಡು ಹುಂಡಿ ಹಣ ಕದ್ದ ಕಳ್ಳ!
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ
ಎಲೆಕ್ಟ್ರಾನಿಕ್ ಸಿಟಿಯ ನೀಲಾದ್ರಿ ರಸ್ತೆಯಲ್ಲಿ ಸಂಚರಿಸುವುದು ನರಕಯಾತನೆ