AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ನಿರ್ದೇಶಕಿ ದೇವಿಕಾ ಜನಿತ್ರಿ ಪ್ರಯತ್ನಕ್ಕೆ ಅಶ್ವಿನಿ ಬೆಂಬಲ; ‘ಚಿಕ್ಕಿಯ ಮೂಗುತಿ’ ಟೀಸರ್​ಗೆ ಮೆಚ್ಚುಗೆ

ಬಹುತೇಕ ಹೆಣ್ಣು ಮಕ್ಕಳೇ ಸೇರಿಕೊಂಡು ‘ಚಿಕ್ಕಿಯ ಮೂಗುತಿ’ ಸಿನಿಮಾ ಮಾಡಿದ್ದಾರೆ. ಇದರಲ್ಲಿ ಮಹಿಳಾಪ್ರಧಾನ ಕಥಾಹಂದರ ಇದೆ. ನಿರ್ದೇಶಕಿಯೇ ಬರೆದ ಕಾದಂಬರಿ ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ತಾರಾ ಅನುರಾಧಾ, ಭವಾನಿ ಪ್ರಕಾಶ್, ಶ್ವೇತಾ ಶ್ವೀವಾತ್ಸವ್ ಮುಂತಾದವರು ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ.

ಹೊಸ ನಿರ್ದೇಶಕಿ ದೇವಿಕಾ ಜನಿತ್ರಿ ಪ್ರಯತ್ನಕ್ಕೆ ಅಶ್ವಿನಿ ಬೆಂಬಲ; ‘ಚಿಕ್ಕಿಯ ಮೂಗುತಿ’ ಟೀಸರ್​ಗೆ ಮೆಚ್ಚುಗೆ
ತಾರಾ ಅನುರಾಧ, ತಬಲ ನಾಣಿ, ದೇವಿಕಾ ಜನಿತ್ರಿ
ಮದನ್​ ಕುಮಾರ್​
|

Updated on:Oct 16, 2023 | 12:21 PM

Share

ಚಂದನವನಕ್ಕೆ ಪ್ರತಿಭಾವಂತ ನಿರ್ದೇಶಕಿಯರ ಆಗಮನ ಆಗುತ್ತಿದೆ. ಆ ಸಾಲಿಗೆ ಹೊಸ ನಿರ್ದೇಶಕಿ ದೇವಿಕಾ ಜನಿತ್ರಿ (Devika Janitri) ಅವರು ಹೊಸ ಸೇರ್ಪಡೆ ಆಗಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ಪ್ರೇಮಕಥೆ, ಕ್ರೈಮ್-ಥ್ರಿಲ್ಲರ್​, ಹಾರರ್ ಕಥಾಹಂದರ ಸಿನಿಮಾಗಳಿಗೆ ಕೊರತೆ ಇಲ್ಲ. ಅವುಗಳ ನಡುವೆ ಆಗಾಗ ಡಿಫರೆಂಟ್​ ಪರಿಕಲ್ಪನೆಯ ಸಿನಿಮಾಗಳ ಕೂಡ ಗಮನ ಸೆಳೆಯುತ್ತವೆ. ದೇವಿಕಾ ಜನಿತ್ರಿ ಕೂಡ ಅಂಥದ್ದೇ ಒಂದು ಭಿನ್ನವಾದ ಸಿನಿಮಾವನ್ನು ಜನರಿಗೆ ತೋರಿಸಲು ಸಜ್ಜಾಗುತ್ತಿದ್ದಾರೆ. ‘ಚಿಕ್ಕಿಯ ಮೂಗುತಿ’ (Chikkiya Muguti) ಎಂಬುದು ಈ ಸಿನಿಮಾದ ಹೆಸರು. ಭಾನುವಾರ (ಅಕ್ಟೋಬರ್​ 15) ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಈ ವೇಳೆ ಟೀಸರ್​ ಬಿತ್ತರಿಸಲಾಯಿತು. ನಿರ್ಮಾಪಕಿ ಅಶ್ವಿನಿ ಪುನೀತ್​ ರಾಜ್​ಕುಮಾರ್​ (Ashwini Puneeth Rajkumar) ಅವರು ‘ಚಿಕ್ಕಿಯ ಮೂಗುತಿ’ ಚಿತ್ರತಂಡಕ್ಕೆ ಬೆಂಬಲ ಸೂಚಿಸಿದ್ದಾರೆ. ಸಿನಿಮಾದಲ್ಲಿ ಹಿರಿಯ ನಟಿ ತಾರಾ ಅನುರಾಧಾ ನಟಿಸಿದ್ದಾರೆ.

‘ಚಿಕ್ಕಿಯ ಮೂಗುತಿ’ ಸಿನಿಮಾದ ಟೀಸರ್​ ಅಕ್ಟೋಬರ್​ 20ರಂದು ‘ಪಿಆರ್​ಕೆ ಆಡಿಯೋ’ ಮೂಲಕ ಬಿಡುಗಡೆ ಆಗಲಿದೆ. ಅಂದಹಾಗೆ, ಇದು ಕಾದಂಬರಿ ಆಧಾರಿತ ಸಿನಿಮಾ. ನಿರ್ದೇಶಕಿ ದೇವಿಕಾ ಜನಿತ್ರಿ ಅವರೇ ಬರೆದಿರುವ ‘ಚಿಕ್ಕಿಯ ಮೂಗುತಿ’ ಕಾದಂಬರಿಯನ್ನು ಆಧರಿಸಿ ಈ ಚಿತ್ರ ನಿರ್ಮಾಣ ಆಗಿದೆ. ವಿಶೇಷ ಏನೆಂದರೆ, ಅವರೇ ನಿರ್ಮಾಣ ಜವಾಬ್ದಾರಿಯನ್ನೂ ನಿಭಾಯಿಸಿದ್ದಾರೆ.

Chikkiya Muguti Press Meet

ಚಿಕ್ಕಿಯ ಮೂಗುತಿ ಸಿನಿಮಾ ತಂಡ

ಶೀರ್ಷಿಕೆ ಸೂಚಿಸುತ್ತಿರುವಂತೆ ‘ಚಿಕ್ಕಿಯ ಮೂಗುತಿ’ ಒಂದು ಮಹಿಳಾ ಪ್ರಧಾನ ಕಥಾಹಂದರ ಇರುವಂತಹ ಸಿನಿಮಾ. ಹೆಣ್ಮಕ್ಕಳ ಹೋರಾಟ, ಶೋಷಣೆ ಮುಂತಾದ ವಿಷಯಗಳ ಕುರಿತಾಗಿ ಇರುವ ಸಿನಿಮಾ ಇದು. ಈ ಸಿನಿಮಾದಲ್ಲಿ ತಾರಾ ಅನುರಾಧಾ, ಭವಾನಿ ಪ್ರಕಾಶ್, ಶ್ವೇತಾ ಶ್ವೀವಾತ್ಸವ್, ಅವಿನಾಶ್, ರಂಗಾಯಣ ರಘು, ತಬಲ ನಾಣಿ, ಭರತ್ ಬೋಪಣ್ಣ ಮುಂತಾದ ಕಲಾವಿದರು ಅಭಿನಯಿಸಿದ್ದಾರೆ.

ಇದನ್ನೂ ಓದಿ: ಗರುಡ ಪುರಾಣ ಟೀಸರ್ ಬಿಡುಗಡೆ ಮಾಡಿದ ಅಶ್ವಿನಿ ಪುನೀತ್ ರಾಜ್​ಕುಮಾರ್

ಬಹುತೇಕ ಮಹಿಳೆಯರೇ ‘ಚಿಕ್ಕಿಯ ಮೂಗುತಿ’ ಸಿನಿಮಾದಲ್ಲಿ ಕೆಲಸ ಮಾಡಿರುವುದು ವಿಶೇಷ. ಸಿನಿಮಾದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ತಾರಾ ಅನುರಾಧಾ ಮಾತನಾಡಿದ್ದಾರೆ. ‘ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ ರೀತಿಯೇ ಈ ಚಿತ್ರದಲ್ಲೂ ಸ್ತ್ರೀಯರಿಗೆ ಮೀಸಲಾತಿ ನೀಡಲಾಗಿದೆ. ಹೆಣ್ಣು ಮಕ್ಕಳೇ ಸೇರಿಕೊಂಡು ಈ ಸಿನಿಮಾ ಮಾಡಿದ್ದು, ಚೆನ್ನಾಗಿ ಮೂಡಿಬಂದಿದೆ. ನಿರ್ದೇಶಕಿ ದೇವಿಕಾ ಅವರು ಹೊಸಬರು ಅಂತ ಎನಿಸುವುದಿಲ್ಲ’ ಎಂದು ತಾರಾ ಹೇಳಿದ್ದಾರೆ. ಶ್ವೇತಾ ಶ್ರೀವಾತ್ಸವ್​ ಮತ್ತು ಭವಾನಿ ಪ್ರಕಾಶ್ ಅವರಿಗೂ ತಮ್ಮ ಪಾತ್ರದ ಬಗ್ಗೆ ಖುಷಿ ಇದೆ.

ಇದನ್ನೂ ಓದಿ: ಅಂಗಾಂಗ ದಾನದ ಮಹತ್ವ ಸಾರಿದ ಕಾರುಣ್ಯ ರಾಮ್​, ಅಶ್ವಿನಿ ಪುನೀತ್ ರಾಜ್​ಕುಮಾರ್​, ಧ್ರುವ ಸರ್ಜಾ

‘ಜನಿತ್ರಿ ಪ್ರೊಡಕ್ಷನ್’ ಮೂಲಕ ಈ ಸಿನಿಮಾ ನಿರ್ಮಾಣ ಆಗುತ್ತಿದೆ. ಈ ಸಿನಿಮಾಗೆ ಪೂರ್ಣಚಂದ್ರ ತೇಜಸ್ವಿ ಅವರು ಸಂಗೀತ ನೀಡುತ್ತಿದ್ದಾರೆ. ವೆಂಕಟೇಶ್ ಆರ್. ಛಾಯಾಗ್ರಹಣ ಮಾಡಿದ್ದಾರೆ. ಸಂಕಲನದ ಜವಾಬ್ದಾರಿಯನ್ನೂ ಅವರೇ ನಿಭಾಯಿಸುತ್ತಿದ್ದಾರೆ. ಈ ಹಿಂದೆ ನಿರ್ದೇಶಕಿ ದೇವಿಕಿ ಅವರು ವಸ್ತ್ರ ವಿನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. ಅವರು ಬರಹಗಾರ್ತಿ ಕೂಡ ಹೌದು. 40ಕ್ಕೂ ಹೆಚ್ಚು ಕಾದಂಬರಿಗಳನ್ನು ಅವರು ಬರೆದಿದ್ದಾರೆ ಎಂಬುದು ವಿಶೇಷ. ಈಗ ತಮ್ಮದೇ ಕಾದಂಬರಿಗೆ ಸಿನಿಮಾ ರೂಪ ನೀಡಿದ್ದಾರೆ. ಈ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ. ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಪ್ರಗತಿಯಲ್ಲಿವೆ. 2023ರ ಕೊನೆಯಲ್ಲಿ ಅಥವಾ 2024ರ ಆರಂಭದಲ್ಲಿ ಈ ಸಿನಿಮಾ ಬಿಡುಗಡೆ ಆಗುವ ನಿರೀಕ್ಷೆ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:13 pm, Mon, 16 October 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!
ಡಿಕೆ ಶಿವಕುಮಾರ್​​​​​​​ ಸಿಎಂ ಆಗಲು ಈಕೆಯೇ ಕಾರಣ!