AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಾಂಧಿನಗರದಲ್ಲಿ ಈಗ ‘ಚಿಲ್ಲಿ ಚಿಕನ್​’ ಮೇಲೆ ಹೆಚ್ಚಿದೆ ನಿರೀಕ್ಷೆ; ಟ್ರೇಲರ್​ ನೋಡಿ..

ಬೆಂಗಳೂರಿನಲ್ಲಿ ನಡೆದ ಒಂದು ನೈಜ ಘಟನೆಯನ್ನು ಆಧಾರವಾಗಿ ಇಟ್ಟುಕೊಂಡು ‘ಚಿಲ್ಲಿ ಚಿಕನ್​’ ಸಿನಿಮಾ ಮಾಡಲಾಗಿದೆ. ಕಳೆದ ತಿಂಗಳು ಈ ಸಿನಿಮಾದ ಟೀಸರ್ ರಿಲೀಸ್​ ಮಾಡಲಾಗಿತ್ತು. ಈಗ ಟ್ರೇಲರ್ ಸದ್ದು ಮಾಡುತ್ತಿದೆ. ‘ಚಿಲ್ಲಿ ಚಿಕನ್​’ ಸಿನಿಮಾದಲ್ಲಿ ಬಿ.ವಿ. ಶೃಂಗಾ ಅವರು ನಾಯಕನಾಗಿ ಅಭಿನಯಿಸಿದ್ದಾರೆ.

ಗಾಂಧಿನಗರದಲ್ಲಿ ಈಗ ‘ಚಿಲ್ಲಿ ಚಿಕನ್​’ ಮೇಲೆ ಹೆಚ್ಚಿದೆ ನಿರೀಕ್ಷೆ; ಟ್ರೇಲರ್​ ನೋಡಿ..
‘ಚಿಲ್ಲಿ ಚಿಕನ್​’ ಸಿನಿಮಾ ಟ್ರೇಲರ್​ ಬಿಡುಗಡೆ ಕಾರ್ಯಕ್ರಮ
ಮದನ್​ ಕುಮಾರ್​
|

Updated on: Jun 09, 2024 | 4:13 PM

Share

ಕನ್ನಡದ ಚಿಲ್ಲಿ ಚಿಕನ್​’ ಸಿನಿಮಾ (Chilli Chicken Movie) ಈಗ ಬಿಡುಗಡೆಗೆ ಸಜ್ಜಾಗಿದೆ. ಹೋಟೆಲ್ ಕೆಲಸ ಮಾಡುವ ಹುಡುಗರ ಕಥೆ ಇಟ್ಟುಕೊಂಡು ನಿರ್ದೇಶಕ ಪ್ರತೀಕ್ ಪ್ರಜೋಷ್ ಈ ಚಿತ್ರಕ್ಕೆ ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಟ್ರೇಲರ್​ (Chilli Chicken Trailer) ಬಿಡುಗಡೆ ಮಾಡಲಾಯಿತು. ವಿಶೇಷ ಏನೆಂದರೆ, ಈ ಸಿನಿಮಾದ ಕಥೆ ಹುಟ್ಟಿದ್ದೇ ರೆಸ್ಟೋರೆಂಟ್​ವೊಂದರಲ್ಲಿ. ಹೌದು, ರೆಸ್ಟೋರೆಂಟ್​ನಲ್ಲಿ ಸಂಗೀತ ನಿರ್ದೇಶಕ ಸಿದ್ಧಾಂತ್​ ಸುಂದರ್ ಅವರಿಗೆ ಈ ಕಾನ್ಸೆಪ್ಟ್ ಹೊಳೆದಿತ್ತು. ಅದನ್ನು ಅವರು ನಿರ್ದೇಶಕ ಪ್ರತೀಕ್ ಪ್ರಜೋಶ್​ಗೆ ತಿಳಿಸಿದ ಬಳಿಕ ಅವರು ಆ ಒಂದು ಲೈನ್ ಕಥೆಯನ್ನು ಇಟ್ಟುಕೊಂಡು ಸಿನಿಮಾ (Kannada Cinema) ನಿರ್ದೇಶಿಸಿದರು. ಬೆಂಗಳೂರಿನ ಹೋಟೆಲ್​ವೊಂದರಲ್ಲಿ ಕೆಲಸ ಮಾಡುತ್ತಾ ಚೈನೀಸ್ ರೆಸ್ಟೋರೆಂಟ್ ಆರಂಭಿಸಬೇಕು ಎಂದು ಕನಸು ಕಾಣುವ ಹುಡುಗರ ಕನಸಿಗೆ ಯಾವೆಲ್ಲ ಅಡೆ-ತಡೆಗಳು ಬರುತ್ತವೆ ಎಂಬ ಕಹಾನಿ ‘ಚಿಲ್ಲಿ ಚಿಕನ್’ ಸಿನಿಮಾದಲ್ಲಿ ಇದೆ.

ಬೆಂಗಳೂರಿನಲ್ಲಿ ನಡೆದ ಒಂದು ನೈಜ ಘಟನೆಯನ್ನು ಆಧಾರವಾಗಿ ಇಟ್ಟುಕೊಂಡು ‘ಚಿಲ್ಲಿ ಚಿಕನ್​’ ಸಿನಿಮಾ ಮಾಡಲಾಗಿದೆ. ಕಳೆದ ತಿಂಗಳು ಈ ಸಿನಿಮಾದ ಟೀಸರ್ ಬಿಡುಗಡೆ ಮಾಡಲಾಗಿತ್ತು. ಈಗ ಟ್ರೇಲರ್ ಸದ್ದು ಮಾಡುತ್ತಿದೆ. ಸಿನಿಮಾ ಬಗ್ಗೆ ಸಂಗೀತ ನಿರ್ದೇಶಕ ಸಿದ್ಧಾಂತ್​ ಸುಂದರ್​ ಮಾತನಾಡಿದ್ದಾರೆ. ‘ಸದ್ಯ ಎಲ್ಲ ಕಡೆಗಳಲ್ಲಿ ನಮ್ಮ ಸಿನಿಮಾದ ಬಗ್ಗೆ ಜನರು ಮಾತಾಡುತ್ತಿದ್ದಾರೆ. ನೈಜ ಘಟನೆಯ ಇಟ್ಟುಕೊಂಡು ಸಿನಿಮಾ ಮಾಡುವುದು ಸುಲಭವಲ್ಲ. ಸಿನಿಮಾದಲ್ಲಿ 5 ಹಾಡುಗಳಿವೆ. ಅವುಗಳಿಗೆ ರ‍್ಯಾಪರ್ ಮಾರ್ಟಿನ್ ಯೋ ಸಾಹಿತ್ಯ ಬರೆದಿದ್ದಾರೆ. ಕನ್ನಡಿಗರು ಮಾತ್ರವಲ್ಲದೇ ಪರಭಾಷೆಯವರೂ ಕೂಡ ನೋಡಲೇ ಬೇಕಾದ ಸಿನಿಮಾ ಇದು’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ಉತ್ತರಕಾಂಡದ “ವೀರವ್ವ”ನಾಗಿ ‘ಜಾಕಿ’ ಬೆಡಗಿ ಭಾವನಾ ಮೆನನ್

‘ಚಿಲ್ಲಿ ಚಿಕನ್​’ ಸಿನಿಮಾದಲ್ಲಿ ಬಿ.ವಿ. ಶೃಂಗಾ ಅವರು ನಾಯಕನಾಗಿ ಅಭಿನಯಿಸಿದ್ದಾರೆ. ತಮ್ಮ ಪಾತ್ರದ ಕುರಿತು ಅವರು ಮಾಹಿತಿ ಹಂಚಿಕೊಂಡಿದ್ದಾರೆ. ‘ನಾವೆಲ್ಲಾ ಇಂದು ದೊಡ್ಡ ಸಾಹಸಕ್ಕೆ ಕೈ ಹಾಕಿದ್ದೇವೆ. ಜನರ ಸಹಕಾರ ನಮಗೆ ಬೇಕು. ನಾನು ಈ ಸಿನಿಮಾದಲ್ಲಿ ರೆಸ್ಟೋರೆಂಟ್ ಮಾಲೀಕನ ಪಾತ್ರವನ್ನು ಮಾಡಿದ್ದೇನೆ. ಈ ಕಥೆ ಕೇಳಿದಾಗ ಇಂದಿನ ಯುವಜನರಿಗೆ ಹೇಳಬೇಕಾದ ವಿಷಯ ಇದರಲ್ಲಿ ಇದೆ ಅನಿಸಿತು. ಹ್ಯೂಮರ್, ಫ್ಯಾಮಿಲಿ ಡ್ರಾಮಾವನ್ನು ನಿರ್ದೇಶಕರು ಬಳಸಿದ್ದಾರೆ. ಮಧ್ಯಮ ವರ್ಗದ ಕುಟುಂಬದಿಂದ ಬಂದು ಚೈನೀಸ್ ರೆಸ್ಟೋರೆಂಟ್ ಶುರುಮಾಡುವ ಆಸೆ ಇರುವ ಹುಡುಗನ ಪಾತ್ರ ನನ್ನದು’ ಎಂದು ಅವರು ಹೇಳಿದ್ದಾರೆ.

ಈ ಸಿನಿಮಾವನ್ನು ಈಗಾಗಲೇ ನೋಡಿದ ರಮೇಶ್‌ ಅರವಿಂದ್, ಹೇಮಂತ್ ರಾವ್ ಮತ್ತು ಬೇರೆ ಭಾಷೆಯ ಅನೇಕರು ಮೆಚ್ಚಿಕೊಂಡಿದ್ದಾರೆ. ಬೆಂಗಳೂರಿನಲ್ಲಿ ಇತ್ತೀಚೆಗೆ ಒಡೆದು ಹಾಕಲ್ಪಟ್ಟ ಕಾವೇರಿ ಚಿತ್ರಮಂದಿರದ ಬಗ್ಗೆ ಈ ಚಿತ್ರತಂಡ ಒಂದು ಹಾಡು ಸಿದ್ಧಪಡಿಸಿದೆ. ಈ ಗೀತೆಗೆ ಪತ್ರಕರ್ತ ಶ್ರೀಧರ್ ಶಿವಮೊಗ್ಗ ಅವರು ಸಾಹಿತ್ಯ ಬರೆದಿದ್ದಾರೆ. ನಟಿ ನಿತ್ಯಶ್ರೀ ಅವರು ಕನ್ನಡದಲ್ಲಿ ಇದು 2ನೇ ಸಿನಿಮಾ. ಈಗಾಗಲೇ ಅವರು ತಮಿಳು, ತೆಲಗು, ಮಲಯಾಳಂ, ಹಿಂದಿ ಭಾಷೆಗಳಲ್ಲಿ ಒಂದಿಷ್ಟು ಸಿನಿಮಾಗಳನ್ನು ಮಾಡಿದ್ದಾರೆ. ‘ಈ ಸಿನಿಮಾಗೆ ತಂಡದ ಶ್ರಮ ತುಂಬಾ ಇದೆ. ಎಲ್ಲ ಕಲಾವಿದರು ಭಾಷೆಯನ್ನು ಕಲಿತು ನಟಿಸಿ, ಡಬ್ಬಿಂಗ್ ಸಹ ಮಾಡಿದ್ದಾರೆ’ ಎಂದು ಅವರು ಹೇಳಿದರು. ಕಲಾವಿದರಾದ ರಿನಿ, ಬಿಜು ತಾಂಜಿಂ, ಹಿರಾಕ್ ಸೋನಾವಾಲ್, ಜಿಂಪಾ ಭುಟಿಯಾ, ನಿರ್ಮಾಪಕ ದೀಪ್ ಭೀಮಾಜಿಹಾನಿ ಅವರು ಟ್ರೇಲರ್​ ಬಿಡುಗಡೆ ವೇಳೆ ಸಿನಿಮಾ ಬಗ್ಗೆ ಮಾತನಾಡಿದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!