ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರ ಮೇಲೆ ಜೇನುನೊಣ ದಾಳಿ! ಮುಂದೇನಾಯ್ತು?

ಹೈದರಾಬಾದ್‌: ಮಾಜಿ IAS ಅಧಿಕಾರಿ ಉಮಾಪತಿ ರಾವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರ ಮೇಲೆ ಜೇನುನೊಣಗಳು ದಾಳಿ ನಡೆಸಿವೆ. ಕ್ಷಣಾರ್ಧದಲ್ಲಿ ಜೇನುಹುಳಗಳ ದಾಳಿಯಿಂದ ಚಿರಂಜೀವಿ, ರಾಮ್ ಚರಣ್ ಹಾಗೂ ಉಪಾಸನ ಪಾರಾಗಿದ್ದಾರೆ. ಅನಾರೋಗ್ಯದಿಂದ ಮೇ 27ರಂದು ಉಪಾಸನ ಅವರ ತಾತ ಉಮಾಪತಿ ಸಾವನ್ನಪ್ಪಿದ್ದರು. ಇಂದು ನಿಜಾಮಾಬಾದ್ ಜಿಲ್ಲೆಯ ದೊಮಕೊಂಡದಲ್ಲಿ ಅಂತ್ಯಕ್ರಿಯೆ ಇತ್ತು. ಹೀಗಾಗಿ ಚಿರು ಫ್ಯಾಮಿಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಏಕಾಏಕಿ ಜೇನುನೊಣಗಳು ದಾಳಿ ನಡೆಸಿವೆ. ತಕ್ಷಣ ಚಿರಂಜೀವಿ ಕುಟುಂಬಸ್ಥರನ್ನು ಪಕ್ಕದಲ್ಲೇ ಇದ್ದ ಮನೆಯೊಳಗೆ […]

ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರ ಮೇಲೆ ಜೇನುನೊಣ ದಾಳಿ! ಮುಂದೇನಾಯ್ತು?
ಸಾಧು ಶ್ರೀನಾಥ್​ Edited By:

Updated on: May 31, 2020 | 7:06 PM

ಹೈದರಾಬಾದ್‌: ಮಾಜಿ IAS ಅಧಿಕಾರಿ ಉಮಾಪತಿ ರಾವ್ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದ ಮೆಗಾಸ್ಟಾರ್ ಚಿರಂಜೀವಿ ಕುಟುಂಬಸ್ಥರ ಮೇಲೆ ಜೇನುನೊಣಗಳು ದಾಳಿ ನಡೆಸಿವೆ. ಕ್ಷಣಾರ್ಧದಲ್ಲಿ ಜೇನುಹುಳಗಳ ದಾಳಿಯಿಂದ ಚಿರಂಜೀವಿ, ರಾಮ್ ಚರಣ್ ಹಾಗೂ ಉಪಾಸನ ಪಾರಾಗಿದ್ದಾರೆ.

ಅನಾರೋಗ್ಯದಿಂದ ಮೇ 27ರಂದು ಉಪಾಸನ ಅವರ ತಾತ ಉಮಾಪತಿ ಸಾವನ್ನಪ್ಪಿದ್ದರು. ಇಂದು ನಿಜಾಮಾಬಾದ್ ಜಿಲ್ಲೆಯ ದೊಮಕೊಂಡದಲ್ಲಿ ಅಂತ್ಯಕ್ರಿಯೆ ಇತ್ತು. ಹೀಗಾಗಿ ಚಿರು ಫ್ಯಾಮಿಲಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದ್ದರು. ಈ ವೇಳೆ ಏಕಾಏಕಿ ಜೇನುನೊಣಗಳು ದಾಳಿ ನಡೆಸಿವೆ. ತಕ್ಷಣ ಚಿರಂಜೀವಿ ಕುಟುಂಬಸ್ಥರನ್ನು ಪಕ್ಕದಲ್ಲೇ ಇದ್ದ ಮನೆಯೊಳಗೆ ಸಿಬ್ಬಂದಿ ಕರೆದುಕೊಂಡು ಹೋಗಿದ್ದಾರೆ.

ಇನ್ನು ಅಂತ್ಯಕ್ರಿಯೆಯಲ್ಲಿ ಭಾಗಿಯಾಗಿದ್ದ ಕೆಲವರಿಗೆ ಜೇನುನೊಣಗಳು ಕಚ್ಚಿ ಸ್ವಲ್ಪ ಗಾಯಗಳಾಗಿದೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಜೇನುನೊಣಗಳನ್ನು ಚದುರಿಸಿದ ನಂತರ ಅಂತ್ಯಕ್ರಿಯೆ ನೆರವೇರಿಸಿದ್ದಾರೆ.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us