AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿರಂಜೀವಿ ಸರ್ಜಾ ಪುಣ್ಯತಿಥಿ: ಪತಿ ಅಗಲಿಕೆ ಬಳಿಕ ಮೇಘನಾ ರಾಜ್ ವೈಯಕ್ತಿಕ ಜೀವನದ ಬಗ್ಗೆ ಕೇಳಿ ಬಂದಿತ್ತು ದೊಡ್ಡ ವದಂತಿ

Chiranjeevi Sarja Death Anniversary: ಗಂಡುಮಗುವಿಗೆ ರಾಯನ್ ರಾಜ್ ಸರ್ಜಾ ಎಂದು ಮೇಘನಾ ರಾಜ್ ನಾಮಕರಣ ಮಾಡಿದ್ದಾರೆ. ಆತ ಹುಟ್ಟಿದ ಬಳಿಕ ಮೇಘನಾ ಬದುಕು ಬದಲಾಯಿತು. ಇದರ ಜೊತೆಗೆ ಒಂದು ವದಂತಿ ಹುಟ್ಟಿಕೊಂಡಿತ್ತು.

ಚಿರಂಜೀವಿ ಸರ್ಜಾ ಪುಣ್ಯತಿಥಿ: ಪತಿ ಅಗಲಿಕೆ ಬಳಿಕ ಮೇಘನಾ ರಾಜ್ ವೈಯಕ್ತಿಕ ಜೀವನದ ಬಗ್ಗೆ ಕೇಳಿ ಬಂದಿತ್ತು ದೊಡ್ಡ ವದಂತಿ
ಮೇಘನಾ-ಚಿರು
ರಾಜೇಶ್ ದುಗ್ಗುಮನೆ
| Edited By: |

Updated on:Jun 06, 2023 | 12:14 PM

Share

ನಟಿ ಮೇಘನಾ ರಾಜ್ (Meghana Raj) ಅವರು ವೈಯಕ್ತಿಕ ಜೀವನದಲ್ಲಿ ಸಾಕಷ್ಟು ಏಳು-ಬೀಳುಗಳನ್ನು ಕಂಡಿದ್ದಾರೆ. ಪ್ರೀತಿಸಿ ಮದುವೆ ಆದ ಚಿರಂಜೀವಿ ಸರ್ಜಾ ಹೃದಯಾಘಾತದಿಂದ ಮೃತಪಟ್ಟರು. ಇದು ನಿಜಕ್ಕೂ ಶಾಕಿಂಗ್ ವಿಚಾರ ಆಗಿತ್ತು. ಬುಧವಾರ (ಜೂನ್ 7) ಚಿರಂಜೀವಿ ಸರ್ಜಾ (Chiranjeevi Sarja) ಮೃತಪಟ್ಟು ಮೂರು ವರ್ಷ ಕಳೆಯಲಿದೆ. ಅವರನ್ನು ಕಳೆದುಕೊಂಡಿರುವ ನೋವು ಎಂದಿಗೂ ಕಡಿಮೆ ಆಗುವಂಥದ್ದಲ್ಲ. ಚಿರು ಮೃತಪಟ್ಟ ಬಳಿಕ ಮೇಘನಾ ಬಗ್ಗೆ ದೊಡ್ಡ ವದಂತಿ ಹುಟ್ಟಿಕೊಂಡಿತ್ತು. ಇದಕ್ಕೆ ಅವರು ಸ್ಪಷ್ಟನೆ ನೀಡಿದ್ದರು.

ಅದು 2020, ಜೂನ್ 7. ಚಿರಂಜೀವಿಗೆ ಹೃದಯಾಘಾತವಾಗಿದೆ ಎನ್ನುವ ಸುದ್ದಿ ಮಧ್ಯಾಹ್ನದ ವೇಳೆಗೆ ಹೊರಬಿತ್ತು. ಬಳಿಕ ಅವರು ಮೃತಪಟ್ಟರು. ಈ ಸುದ್ದಿ ಕಾಡ್ಗಿಚ್ಚಿನಂತೆ ಹಬ್ಬಿತು. ಅಕ್ಷರಶಃ ಎಲ್ಲರೂ ಶಾಕ್​ಗೆ ಒಳಗಾದರು. ಅನೇಕ ತಿಂಗಳ ಕಾಲ ಮೇಘನಾ ರಾಜ್ ಅವರು ಕಣ್ಣೀರಲ್ಲಿ ಕೈ ತೊಳೆದರು. ಚಿರು ಮೃತಪಡುವಾಗ ಮೇಘನಾ ಪ್ರೆಗ್ನೆಂಟ್ ಆಗಿದ್ದರು. ಚಿರು ಮೃತಪಟ್ಟ ಕೆಲ ತಿಂಗಳ ನಂತರ ಮೇಘನಾಗೆ ಗಂಡುಮಗು ಜನಿಸಿತು.

ಗಂಡುಮಗುವಿಗೆ ರಾಯನ್ ರಾಜ್ ಸರ್ಜಾ ಎಂದು ಮೇಘನಾ ರಾಜ್ ನಾಮಕರಣ ಮಾಡಿದ್ದಾರೆ. ಆತ ಹುಟ್ಟಿದ ಬಳಿಕ ಮೇಘನಾ ಬದುಕು ಬದಲಾಯಿತು. ಇದರ ಜೊತೆಗೆ ಒಂದು ವದಂತಿ ಹುಟ್ಟಿಕೊಂಡಿತ್ತು. ‘ಮೇಘನಾ ರಾಜ್ ಮತ್ತೆ ಮದುವೆ ಆಗುತ್ತಾರಂತೆ’ ಎಂದೆಲ್ಲ ಸುದ್ದಿ ಹಬ್ಬಿಸಲಾಯಿತು. ಇದಕ್ಕೆ ಮೇಘನಾ ಅವರು ಸ್ಪಷ್ಟನೆ ನೀಡಿದ್ದರು. ಕಡ್ಡಿಮುರಿದಂತೆ ಅವರು ತಮ್ಮ ಅಭಿಪ್ರಾಯ ತಿಳಿಸಿದ್ದರು.

ಇದನ್ನೂ ಓದಿ: ‘ಅವಿವಾ ಕೂಡ ನಮ್ಮ ಫ್ಯಾಮಿಲಿ ಸೇರಿದ್ದಾರೆ’; ಖುಷಿಖುಷಿಯಿಂದ ಮಾತನಾಡಿದ ಮೇಘನಾ ರಾಜ್

ಬಾಲಿವುಡ್ ಬಬಲ್​ ವೆಬ್​​ಸೈಟ್​ಗೆ ನೀಡಿದ ಸಂದರ್ಶನದಲ್ಲಿ ಮೇಘನಾ ರಾಜ್​ ಮಾತನಾಡಿದ್ದರು. ‘ಒಂದು ವರ್ಗದ ಜನರು ನನ್ನ ಬಳಿ ಎರಡನೇ ಮದುವೆ ಆಗು ಎಂದು ಸಲಹೆ ನೀಡಿದ್ದಾರೆ. ಇನ್ನೂ ಒಂದು ವರ್ಗದ ಜನ ನಿಮ್ಮ ಮಗುವಿನ ಜತೆ ಖುಷಿಯಿಂದ ಇರಿ ಎಂದಿದ್ದಾರೆ. ನಾನು ಯಾರ ಮಾತನ್ನು ಕೇಳಬೇಕು. ಜಗತ್ತು ಏನನ್ನು ಬೇಕಾದರೂ ಹೇಳಲಿ, ನೀನು ಮನಸ್ಸಿನ ಮಾತನ್ನು ಕೇಳು ಎಂದು ಚಿರು ಯಾವಾಗಲೂ ನನಗೆ ಹೇಳುತ್ತಿದ್ದರು. ಎಂದಿಗೂ ಮತ್ತೊಂದು ಮದುವೆಯ ಪ್ರಶ್ನೆಯನ್ನು ನನಗೆ ನಾನು ಕೇಳಿಕೊಂಡಿಲ್ಲ. ನಾಳೆ ಏನಾಗುತ್ತದೆ ಎಂಬ ಬಗ್ಗೆ ಯೋಚಿಸಲ್ಲ. ಮುಂದಿನ ದಿನಗಳಲ್ಲಿ ನನ್ನ ಜೀವನ ಹೇಗಿರಬಹುದು ಎಂಬ ಬಗ್ಗೆ ನಾನು ಚಿಂತಿಸಲ್ಲ’ ಎಂದಿದ್ದರು ಮೇಘನಾ ರಾಜ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 12:10 pm, Tue, 6 June 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!