AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು

‘ದಿ ಡೆವಿಲ್ಸ್​ ಅರೈವಲ್​’ ಹೆಸರಿನಲ್ಲಿ ‘ವಿಕ್ರಾಂತ್​ ರೋಣ’ ಟೀಸರ್ ಏಪ್ರಿಲ್​ 2ರಂದು ಬೆಳಗ್ಗೆ 9.55ಕ್ಕೆ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗುತ್ತಿದೆ. ಈ ಟೀಸರ್​ಅನ್ನು ಮಲಯಾಳಂನಲ್ಲಿ ಮೋಹನ್​ ಲಾಲ್, ತೆಲುಗಿನಲ್ಲಿ ಚಿರಂಜೀವಿ ಅವರು​ ಅವರು ಲಾಂಚ್ ಮಾಡುತ್ತಿದ್ದಾರೆ.

ಸುದೀಪ್​ ನಟನೆಯ ‘ವಿಕ್ರಾಂತ್​ ರೋಣ’ ಚಿತ್ರಕ್ಕೆ ಸಾಥ್​​ ನೀಡಿದ ಪರಭಾಷೆಯ ಸ್ಟಾರ್​ ನಟರು
ಮೋಹನ್​ ಲಾಲ್​-ಸುದೀಪ್​-ಚರಿಂಜೀವಿ
TV9 Web
| Updated By: ರಾಜೇಶ್ ದುಗ್ಗುಮನೆ|

Updated on: Mar 31, 2022 | 1:45 PM

Share

‘ವಿಕ್ರಾಂತ್​ ರೋಣ’ ಸಿನಿಮಾ (Vikrant Rona Movie) ಬಗ್ಗೆ ಈಗಾಗಲೇ ದೊಡ್ಡ ಮಟ್ಟದ ನಿರೀಕ್ಷೆ ಮೂಡಿದೆ. ಈ ಸಿನಿಮಾ ಯಾವಾಗ ತೆರೆಗೆ ಬರಲಿದೆ ಎನ್ನುವ ಕುತೂಹಲ ಅಭಿಮಾನಿಗಳ ವಲಯದಲ್ಲಿದೆ. ಈ ಮಧ್ಯೆ, ಸಿನಿಮಾ ತಂಡ ಭರ್ಜರಿ ಪ್ರಚಾರಕ್ಕೆ ಸಿದ್ಧತೆ ಮಾಡಿಕೊಂಡಿದೆ. ಇದು ಪ್ಯಾನ್​ ಇಂಡಿಯಾ ಸಿನಿಮಾ ಆದ್ದರಿಂದ ಪ್ರಚಾರ ಕೆಲಸ ದೊಡ್ಡ ಮಟ್ಟದಲ್ಲೇ ನಡೆಯಲಿದೆ ಎಂಬುದನ್ನು ಮತ್ತೆ ಬಿಡಿಸಿ ಹೇಳಬೇಕಿಲ್ಲ. ಪ್ರಚಾರ ಕಾರ್ಯದ ಮ್ಯಾಪ್​ಅನ್ನು ಚಿತ್ರತಂಡ ಇತ್ತೀಚೆಗೆ ಬಿಡುಗಡೆ ಮಾಡಿತ್ತು. ಈಗ ಈ ಸಿನಿಮಾವನ್ನು ಬೆಂಬಲಿಸೋಕೆ ಪರಭಾಷೆಯ ಸ್ಟಾರ್ ನಟರಾದ ಮೋಹನ್​​ ಲಾಲ್​, ‘ಮೆಗಾಸ್ಟಾರ್​’ ಚಿರಂಜೀವಿ ಮುಂದೆ ಬಂದಿದ್ದಾರೆ.

‘ವಿಕ್ರಾಂತ್​ ರೋಣ’ ಸಿನಿಮಾ ತಂಡ ಇತ್ತೀಚೆಗೆ ಟೀಸರ್​ ಮೂಲಕ ಎಲ್ಲರ ಗಮನ ಸೆಳೆದಿತ್ತು. ಇತ್ತೀಚೆಗೆ ಸುದೀಪ್​ ಡಬ್ಬಿಂಗ್ ಮಾಡುತ್ತಿರುವ ವಿಡಿಯೋವನ್ನು ಹಂಚಿಕೊಳ್ಳಲಾಗಿತ್ತು. ಕಿಚ್ಚ ಡಬ್​ ಮಾಡಿದ ದೃಶ್ಯ ಹಾಗೂ ಡೈಲಾಗ್​ಗಳು ಸಾಕಷ್ಟು ಗಮನ ಸೆಳೆದಿದ್ದವು. ಈ ಸಿನಿಮಾದಲ್ಲಿ ಏನೆಲ್ಲ ಇರಲಿದೆ ಎನ್ನುವ ಬಗ್ಗೆ ಸಾಕಷ್ಟು ಕೌತುಕ ಸೃಷ್ಟಿ ಆಗಿದೆ. ಈಗ ಚಿತ್ರತಂಡ ಹೊಸ ಟೀಸರ್​ ರಿಲೀಸ್ ಮಾಡುತ್ತಿದೆ.

‘ದಿ ಡೆವಿಲ್ಸ್​ ಅರೈವಲ್​’ ಹೆಸರಿನಲ್ಲಿ ‘ವಿಕ್ರಾಂತ್​ ರೋಣ’ ಟೀಸರ್ ಏಪ್ರಿಲ್​ 2ರಂದು ಬೆಳಗ್ಗೆ 9.55ಕ್ಕೆ ಯೂಟ್ಯೂಬ್​ನಲ್ಲಿ ಬಿಡುಗಡೆ ಆಗುತ್ತಿದೆ. ಈ ಟೀಸರ್​ನಲ್ಲಿ ಯಾವೆಲ್ಲ ವಿಚಾರ ಇರಲಿದೆ? ರಿಲೀಸ್ ದಿನಾಂಕದ ಬಗ್ಗೆ ಚಿತ್ರತಂಡ ಮಾಹಿತಿ ಬಿಟ್ಟುಕೊಡಲಿದೆಯೇ? ಸುದೀಪ್​ ಅವರ ಹೊಸ ಲುಕ್​ ಅನಾವರಣಗೊಳ್ಳಲಿದೆಯೇ? ಎಂಬಿತ್ಯಾದಿ ಕುತೂಹಲ ಮೂಡಿದೆ. ಈ ಎಲ್ಲ ಪ್ರಶ್ನೆಗೆ ಟೀಸರ್​ನಲ್ಲೇ ಉತ್ತರ ಸಿಗಬೇಕಿದೆ. ಈ ಟೀಸರ್​ಅನ್ನು ಮಲಯಾಳಂನಲ್ಲಿ ಮೋಹನ್​ ಲಾಲ್, ತೆಲುಗಿನಲ್ಲಿ ಚಿರಂಜೀವಿ ಅವರು​ ಅವರು ಲಾಂಚ್ ಮಾಡುತ್ತಿದ್ದಾರೆ.

ಹಾಗಾದರೆ, ಟೀಸರ್ ಲಾಂಚ್​ ಮಾಡೋಕೆ ಈ ಸ್ಟಾರ್​ ನಟರು​ ಬೆಂಗಳೂರಿಗೆ ಬರುತ್ತಿದ್ದಾರಾ? ಅದ್ದೂರಿ ಕಾರ್ಯಕ್ರಮ ನಡೆಯಲಿದೆಯೇ? ಇಲ್ಲ. ಸದ್ಯ, ಕೊವಿಡ್ ಕಡಿಮೆ ಆದರೂ ಎಲ್ಲವೂ ಸರಿ ಸ್ಥಿತಿಗೆ ಬಂದಿಲ್ಲ. ಈ ಕಾರಣಕ್ಕೆ ಅವರು ಬೆಂಗಳೂರಿಗೆ ಆಗಮಿಸುತ್ತಿಲ್ಲ. ಬದಲಿಗೆ ತಮ್ಮ ಸೋಶಿಯಲ್​ ಮೀಡಿಯಾ ಖಾತೆಯಲ್ಲಿ ಟೀಸರ್​ ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭಕೋರಲಿದ್ದಾರೆ.  ಈ ವಿಚಾರವನ್ನು ನಿರ್ದೇಶಕ ಅನೂಪ್​ ಭಂಡಾರಿ ಘೋಷಣೆ ಮಾಡಿದ್ದಾರೆ.

‘ವಿಕ್ರಾಂತ್​ ರೋಣ’ ಸಿನಿಮಾ ಬಗ್ಗೆ ದೊಡ್ಡ ನಿರೀಕ್ಷೆ ಇದೆ. ‘ರಂಗಿತರಂಗ’ ಖ್ಯಾತಿಯ ಅನೂಪ್​ ಭಂಡಾರಿ ಅವರು ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದಾರೆ. ಶಾಲಿನಿ ಮಂಜುನಾಥ್​ ಮತ್ತು ಅಲಂಕಾರ್​ ಪಾಂಡಿಯನ್​ ಬಂಡವಾಳ ಹೂಡಿದ್ದಾರೆ. ಮುಖ್ಯಪಾತ್ರದಲ್ಲಿ ಕಿಚ್ಚ ಸುದೀಪ್​, ನೀತಾ ಅಶೋಕ್​, ನಿರೂಪ್​ ಭಂಡಾರಿ, ಜಾಕ್ವೆಲಿನ್​ ಫರ್ನಾಂಡಿಸ್​ ಮುಂತಾದವರು ನಟಿಸಿದ್ದಾರೆ. ಬೃಹತ್​ ಸೆಟ್​ಗಳನ್ನು ನಿರ್ಮಿಸಿ ‘ವಿಕ್ರಾಂತ್​ ರೋಣ’ ಚಿತ್ರೀಕರಣ ಮಾಡಲಾಗಿದೆ. ಸುದೀಪ್​ ಕೂಡ ಈ ಸಿನಿಮಾ ಬಗ್ಗೆ ವಿಶೇಷ ಆಸಕ್ತಿ ವಹಿಸುತ್ತಿದ್ದಾರೆ. ಈಗಾಗಲೇ ಪೋಸ್ಟರ್​ಗಳು ಗಮನ ಸೆಳೆದಿವೆ. ಬುರ್ಜ್​ ಖಲೀಫಾ ಕಟ್ಟಡದ ಮೇಲೆ ಟೈಟಲ್​ ಲಾಂಚ್​ ಮಾಡಿದ್ದು ವಿಶೇಷವಾಗಿತ್ತು.

ಇದನ್ನೂ ಓದಿ: Jacqueline Fernandez: ‘ವಿಕ್ರಾಂತ್ ರೋಣ’ ಬೆಡಗಿ ಜಾಕ್ವೆಲಿನ್ ಫರ್ನಾಂಡಿಸ್ ಮನಮೋಹಕ ಫೋಟೋಗಳು ಇಲ್ಲಿವೆ

Vikrant Rona Teaser: ‘ವಿಕ್ರಾಂತ್ ರೋಣ’ ಟೀಸರ್ ರಿಲೀಸ್ ಘೋಷಣೆ; ಯುಗಾದಿ ಕಿಚ್ಚನ ಅಭಿಮಾನಿಗಳಿಗೆ ಮತ್ತಷ್ಟು ವಿಶೇಷ!

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ