AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗನ ಸ್ಮಾರಕದ ಮೇಲೆ ಹೂವಿನ ಮಳೆಗೆರೆದ ಅಜ್ಜಿ, ಕಣ್ಣಾಲಿಗಳು ತೇವ ತೇವ

ಬೆಂಗಳೂರು: ನಟ ಚಿರಂಜೀವಿ ಸರ್ಜಾ‌ಗೆ 36ನೇ ಹುಟ್ಟುಹಬ್ಬ ಇಂದು. ಚಿರು ನಿಧನರಾದ ನಂತರದ ಮೊದಲ ಹುಟ್ಟುಹಬ್ಬವೂ ಇದಾಗಿದೆ. ಸಂಭ್ರಮ ನೆಲೆಸಬೇಕಿದ್ದ ಜಾಗದಲ್ಲಿ ದುಃಖ ಮಡುವುಗಟ್ಟಿದೆ. ಆದರೂ ತಕ್ಕಮಟ್ಟಿಗೆ ನೆಲಗುಳಿ ಗ್ರಾಮದ ಬೃಂದಾವನ ಫಾರ್ಮ್​ ಹೌಸ್ ನಲ್ಲಿ ಚಿರು ಸಮಾಧಿಗೆ ಪೂಜೆ ನೆರವೇರಿಸುವ ಮೂಲಕ ಕುಟುಂಬಸ್ಥರು ತಮ್ಮ ದುಃಖವನ್ನು ಕಡಿಮೆ ಮಾಡಿಕೊಂಡಿದ್ದಾರೆ. ಚಿರಂಜೀವಿ ಸಮಾಧಿ ಬಳಿ ಆಗಮಿಸಿದ ಚಿರಂಜೀವಿ ಸರ್ಜಾ ಅಜ್ಜಿ ಲಕ್ಷ್ಮಿದೇವಿ ಅವರು ಮೊಮ್ಮಗನ ಸ್ಮಾರಕ್ಕೆ ಹೂವುಗಳನ್ನ ಹಾಕಿ, ಪ್ರೀತಿಯ ಮಳೆಗೆರೆದರು. ಚಿರು ಹುಟ್ಟುಹಬ್ಬದ ವಿಶೇಷವಾಗಿ ಸಾಕಷ್ಟು […]

ಮೊಮ್ಮಗನ ಸ್ಮಾರಕದ ಮೇಲೆ ಹೂವಿನ ಮಳೆಗೆರೆದ ಅಜ್ಜಿ, ಕಣ್ಣಾಲಿಗಳು ತೇವ ತೇವ
ಸಾಧು ಶ್ರೀನಾಥ್​
|

Updated on: Oct 17, 2020 | 10:36 AM

Share

ಬೆಂಗಳೂರು: ನಟ ಚಿರಂಜೀವಿ ಸರ್ಜಾ‌ಗೆ 36ನೇ ಹುಟ್ಟುಹಬ್ಬ ಇಂದು. ಚಿರು ನಿಧನರಾದ ನಂತರದ ಮೊದಲ ಹುಟ್ಟುಹಬ್ಬವೂ ಇದಾಗಿದೆ. ಸಂಭ್ರಮ ನೆಲೆಸಬೇಕಿದ್ದ ಜಾಗದಲ್ಲಿ ದುಃಖ ಮಡುವುಗಟ್ಟಿದೆ. ಆದರೂ ತಕ್ಕಮಟ್ಟಿಗೆ ನೆಲಗುಳಿ ಗ್ರಾಮದ ಬೃಂದಾವನ ಫಾರ್ಮ್​ ಹೌಸ್ ನಲ್ಲಿ ಚಿರು ಸಮಾಧಿಗೆ ಪೂಜೆ ನೆರವೇರಿಸುವ ಮೂಲಕ ಕುಟುಂಬಸ್ಥರು ತಮ್ಮ ದುಃಖವನ್ನು ಕಡಿಮೆ ಮಾಡಿಕೊಂಡಿದ್ದಾರೆ.

ಚಿರಂಜೀವಿ ಸಮಾಧಿ ಬಳಿ ಆಗಮಿಸಿದ ಚಿರಂಜೀವಿ ಸರ್ಜಾ ಅಜ್ಜಿ ಲಕ್ಷ್ಮಿದೇವಿ ಅವರು ಮೊಮ್ಮಗನ ಸ್ಮಾರಕ್ಕೆ ಹೂವುಗಳನ್ನ ಹಾಕಿ, ಪ್ರೀತಿಯ ಮಳೆಗೆರೆದರು. ಚಿರು ಹುಟ್ಟುಹಬ್ಬದ ವಿಶೇಷವಾಗಿ ಸಾಕಷ್ಟು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿರೋ ಕುಟುಂಬಸ್ಥರು ಸಮಾಧಿ ಬಳಿ ಪೂಜೆ ಹಾಗೂ ಅನ್ನದಾನ ಕಾರ್ಯಕ್ರಮವಿಟ್ಟುಕೊಂಡಿದ್ದಾರೆ.

ಚಿರು ಹುಟ್ಟುಹಬ್ಬ ಅಂಗವಾಗಿ ಪುಟ್ಟ ಅಭಿಮಾನಿಗಳು ಬರ್ತ್ ಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ನೆಲಗುಳಿ ಗ್ರಾಮದಲ್ಲಿರೋ ಚಿರು ಸಮಾಧಿಯತ್ತ ಆಗಮಿಸಿದ ಅಭಿಮಾನಿಗಳು ತುಸು ನಿರಾಶೆಗೊಂಡಿದ್ದಾರೆ. ಯಾರನ್ನೂ ಒಳಗೆ ಬಿಡದ ಕಾರಣ ಗೇಟಲ್ಲಿಯೇ ನಿಂತು ಅಭಿಮಾನಿಗಳು ಕೇಕ್ ಕತ್ತರಿಸುವ ಮೂಲಕ ತಮ್ಮ ನಾಯಕನಿಗೆ ಅಭಿಮಾನ ಸಲ್ಲಿಸಿದ್ದಾರೆ.

ಪತ್ನಿ ಮೇಘನಾರಿಂದ ಸಮಾಧಿ ಪೂಜೆ ಚಿರಂಜೀವಿ ಹುಟ್ಟು ಹಬ್ಬದ ಹಿನ್ನೆಲೆ ಚಿರು ಸಮಾಧಿ ಬಳಿ ಅವರ ಪತ್ನಿ ಮೇಘನಾ ರಾಜ್ ಇನ್ನೇನು ಕೆಲವೇ ಕ್ಷಣಗಳಲ್ಲಿ ಆಗಮಿಸಲಿದ್ದಾರೆ. ಹೆಣ್ಣುಕೊಟ್ಟ ಮಾವ ಸುಂದರ್ ರಾಜ್ ಕುಟುಂಬವೂ ಸಮಾಧಿ ಬಳಿ ಬಂದು ಪೂಜೆ ಮಾಡಲಿದೆ. ಮೇಘನಾ ರಾಜ್ ಸದ್ಯ ಜೆಪಿ ನಗರ ಮನೆಯಲ್ಲೆ ಇದ್ದಾರೆ. ಸಮಾಧಿಗೆ ತೆರಳಿ ಪೂಜೆ ಸಲ್ಲಿಸುತ್ತೇವೆ ಎಂದು ಸುಂದರ್ ರಾಜ್ ಇದೇ ವೇಳೆ ತಿಳಿಸಿದ್ದಾರೆ.

ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಮೋದಿಯನ್ನು ಕಾರಲ್ಲಿ ಕೂರಿಸಿಕೊಂಡು ತಾವೇ ಡ್ರೈವ್ ಮಾಡಿದ ಜೋರ್ಡಾನ್ ಪ್ರಿನ್ಸ್
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಬೆಳಗಾವಿ ಅಧಿವೇಶನದಲ್ಲೂ ಸದ್ದು ಮಾಡಿದ ಮೊಟ್ಟೆ ಕ್ಯಾನ್ಸರ್ ಸುದ್ದಿ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಪೊಲೀಸಪ್ಪನ ಜತೆ ಓಡಿಹೋಗಿದ್ದ ಮೋನಿಕಾಳ ಅಸಲಿಯತ್ತು ಬಯಲು
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ