AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊಮ್ಮಗನ ಸ್ಮಾರಕದ ಮೇಲೆ ಹೂವಿನ ಮಳೆಗೆರೆದ ಅಜ್ಜಿ, ಕಣ್ಣಾಲಿಗಳು ತೇವ ತೇವ

ಬೆಂಗಳೂರು: ನಟ ಚಿರಂಜೀವಿ ಸರ್ಜಾ‌ಗೆ 36ನೇ ಹುಟ್ಟುಹಬ್ಬ ಇಂದು. ಚಿರು ನಿಧನರಾದ ನಂತರದ ಮೊದಲ ಹುಟ್ಟುಹಬ್ಬವೂ ಇದಾಗಿದೆ. ಸಂಭ್ರಮ ನೆಲೆಸಬೇಕಿದ್ದ ಜಾಗದಲ್ಲಿ ದುಃಖ ಮಡುವುಗಟ್ಟಿದೆ. ಆದರೂ ತಕ್ಕಮಟ್ಟಿಗೆ ನೆಲಗುಳಿ ಗ್ರಾಮದ ಬೃಂದಾವನ ಫಾರ್ಮ್​ ಹೌಸ್ ನಲ್ಲಿ ಚಿರು ಸಮಾಧಿಗೆ ಪೂಜೆ ನೆರವೇರಿಸುವ ಮೂಲಕ ಕುಟುಂಬಸ್ಥರು ತಮ್ಮ ದುಃಖವನ್ನು ಕಡಿಮೆ ಮಾಡಿಕೊಂಡಿದ್ದಾರೆ. ಚಿರಂಜೀವಿ ಸಮಾಧಿ ಬಳಿ ಆಗಮಿಸಿದ ಚಿರಂಜೀವಿ ಸರ್ಜಾ ಅಜ್ಜಿ ಲಕ್ಷ್ಮಿದೇವಿ ಅವರು ಮೊಮ್ಮಗನ ಸ್ಮಾರಕ್ಕೆ ಹೂವುಗಳನ್ನ ಹಾಕಿ, ಪ್ರೀತಿಯ ಮಳೆಗೆರೆದರು. ಚಿರು ಹುಟ್ಟುಹಬ್ಬದ ವಿಶೇಷವಾಗಿ ಸಾಕಷ್ಟು […]

ಮೊಮ್ಮಗನ ಸ್ಮಾರಕದ ಮೇಲೆ ಹೂವಿನ ಮಳೆಗೆರೆದ ಅಜ್ಜಿ, ಕಣ್ಣಾಲಿಗಳು ತೇವ ತೇವ
Follow us
ಸಾಧು ಶ್ರೀನಾಥ್​
|

Updated on: Oct 17, 2020 | 10:36 AM

ಬೆಂಗಳೂರು: ನಟ ಚಿರಂಜೀವಿ ಸರ್ಜಾ‌ಗೆ 36ನೇ ಹುಟ್ಟುಹಬ್ಬ ಇಂದು. ಚಿರು ನಿಧನರಾದ ನಂತರದ ಮೊದಲ ಹುಟ್ಟುಹಬ್ಬವೂ ಇದಾಗಿದೆ. ಸಂಭ್ರಮ ನೆಲೆಸಬೇಕಿದ್ದ ಜಾಗದಲ್ಲಿ ದುಃಖ ಮಡುವುಗಟ್ಟಿದೆ. ಆದರೂ ತಕ್ಕಮಟ್ಟಿಗೆ ನೆಲಗುಳಿ ಗ್ರಾಮದ ಬೃಂದಾವನ ಫಾರ್ಮ್​ ಹೌಸ್ ನಲ್ಲಿ ಚಿರು ಸಮಾಧಿಗೆ ಪೂಜೆ ನೆರವೇರಿಸುವ ಮೂಲಕ ಕುಟುಂಬಸ್ಥರು ತಮ್ಮ ದುಃಖವನ್ನು ಕಡಿಮೆ ಮಾಡಿಕೊಂಡಿದ್ದಾರೆ.

ಚಿರಂಜೀವಿ ಸಮಾಧಿ ಬಳಿ ಆಗಮಿಸಿದ ಚಿರಂಜೀವಿ ಸರ್ಜಾ ಅಜ್ಜಿ ಲಕ್ಷ್ಮಿದೇವಿ ಅವರು ಮೊಮ್ಮಗನ ಸ್ಮಾರಕ್ಕೆ ಹೂವುಗಳನ್ನ ಹಾಕಿ, ಪ್ರೀತಿಯ ಮಳೆಗೆರೆದರು. ಚಿರು ಹುಟ್ಟುಹಬ್ಬದ ವಿಶೇಷವಾಗಿ ಸಾಕಷ್ಟು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿರೋ ಕುಟುಂಬಸ್ಥರು ಸಮಾಧಿ ಬಳಿ ಪೂಜೆ ಹಾಗೂ ಅನ್ನದಾನ ಕಾರ್ಯಕ್ರಮವಿಟ್ಟುಕೊಂಡಿದ್ದಾರೆ.

ಚಿರು ಹುಟ್ಟುಹಬ್ಬ ಅಂಗವಾಗಿ ಪುಟ್ಟ ಅಭಿಮಾನಿಗಳು ಬರ್ತ್ ಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ನೆಲಗುಳಿ ಗ್ರಾಮದಲ್ಲಿರೋ ಚಿರು ಸಮಾಧಿಯತ್ತ ಆಗಮಿಸಿದ ಅಭಿಮಾನಿಗಳು ತುಸು ನಿರಾಶೆಗೊಂಡಿದ್ದಾರೆ. ಯಾರನ್ನೂ ಒಳಗೆ ಬಿಡದ ಕಾರಣ ಗೇಟಲ್ಲಿಯೇ ನಿಂತು ಅಭಿಮಾನಿಗಳು ಕೇಕ್ ಕತ್ತರಿಸುವ ಮೂಲಕ ತಮ್ಮ ನಾಯಕನಿಗೆ ಅಭಿಮಾನ ಸಲ್ಲಿಸಿದ್ದಾರೆ.

ಪತ್ನಿ ಮೇಘನಾರಿಂದ ಸಮಾಧಿ ಪೂಜೆ ಚಿರಂಜೀವಿ ಹುಟ್ಟು ಹಬ್ಬದ ಹಿನ್ನೆಲೆ ಚಿರು ಸಮಾಧಿ ಬಳಿ ಅವರ ಪತ್ನಿ ಮೇಘನಾ ರಾಜ್ ಇನ್ನೇನು ಕೆಲವೇ ಕ್ಷಣಗಳಲ್ಲಿ ಆಗಮಿಸಲಿದ್ದಾರೆ. ಹೆಣ್ಣುಕೊಟ್ಟ ಮಾವ ಸುಂದರ್ ರಾಜ್ ಕುಟುಂಬವೂ ಸಮಾಧಿ ಬಳಿ ಬಂದು ಪೂಜೆ ಮಾಡಲಿದೆ. ಮೇಘನಾ ರಾಜ್ ಸದ್ಯ ಜೆಪಿ ನಗರ ಮನೆಯಲ್ಲೆ ಇದ್ದಾರೆ. ಸಮಾಧಿಗೆ ತೆರಳಿ ಪೂಜೆ ಸಲ್ಲಿಸುತ್ತೇವೆ ಎಂದು ಸುಂದರ್ ರಾಜ್ ಇದೇ ವೇಳೆ ತಿಳಿಸಿದ್ದಾರೆ.

ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಲೆಫ್ಟಿನೆಂಟ್ ವಿನಯ್ ಅಸ್ತಿ ವಿಸರ್ಜನೆ ಮಾಡಿ ಬಿಕ್ಕಿ ಬಿಕ್ಕಿ ಅತ್ತ ತಂದೆ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಸಹಾಯ ಮಾಡಿ; ಸರ್ಕಾರಕ್ಕೆ ಪಹಲ್ಗಾಮ್ ದಾಳಿಯಲ್ಲಿ ಮಡಿದ ಸಂತೋಷ್ ಪತ್ನಿ ಮನವಿ
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಉಗ್ರರ ದಾಳಿಗೆ ಬಲಿಯಾದ ಮಂಜುನಾಥ್ ಪಹಲ್ಗಾಮ್​ನಲ್ಲಿ ಕಳೆದ ಕೊನೆಯ ಕ್ಷಣಗಳು
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕೆಆರ್​ಎಸ್ ಕ್ರೆಸ್ಟ್​ ಗೇಟ್ ಬದಲಿಸಬೇಕಿದೆಯೇ? ರಿಪೋರ್ಟ್ ಕೇಳಿದ ಶಿವಕುಮಾರ್
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಕಾಂಗ್ರೆಸ್ ನಾಯಕರಿಗೆ ಮಾನವೀಯತೆ ಮತ್ತು ರಾಷ್ಟ್ರವಾದ ಬೇಕಾಗಿಲ್ಲ: ಚಲವಾದಿ
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಪಹಲ್ಗಾಮ್ ಉಗ್ರರ ದಾಳಿಯನ್ನು ಪ್ರತಿಯೊಬ್ಬ ಕಾಶ್ಮೀರಿ ಖಂಡಿಸಿದ್ದಾನೆ: ರಾಹುಲ್
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಕಾಂಗ್ರೆಸ್ ಸರ್ಕಾರದ ಯೋಗ್ಯತೆ ಏನು ಅಂತ ನಮಗೆ ಗೊತ್ತು; ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಬಿಜೆಪಿ ಶಾಸಕರ ಅಮಾನತು ಅಸಂವಿಧಾನಿಕವಾದದ್ದು: ಅಶೋಕ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿಲುವು ಅಭಿನಂದನಾರ್ಹ: ಈಶ್ವರಪ್ಪ
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್
ಶಾಸಕ ಚನ್ನಬಸಪ್ಪ ಹೇಳಿಕೆಗೆ ನಾನು ಪ್ರತಿಕ್ರಿಯೆ ನೀಡಲಾಗದು: ಪರಮೇಶ್ವರ್