ಮೊಮ್ಮಗನ ಸ್ಮಾರಕದ ಮೇಲೆ ಹೂವಿನ ಮಳೆಗೆರೆದ ಅಜ್ಜಿ, ಕಣ್ಣಾಲಿಗಳು ತೇವ ತೇವ

ಬೆಂಗಳೂರು: ನಟ ಚಿರಂಜೀವಿ ಸರ್ಜಾ‌ಗೆ 36ನೇ ಹುಟ್ಟುಹಬ್ಬ ಇಂದು. ಚಿರು ನಿಧನರಾದ ನಂತರದ ಮೊದಲ ಹುಟ್ಟುಹಬ್ಬವೂ ಇದಾಗಿದೆ. ಸಂಭ್ರಮ ನೆಲೆಸಬೇಕಿದ್ದ ಜಾಗದಲ್ಲಿ ದುಃಖ ಮಡುವುಗಟ್ಟಿದೆ. ಆದರೂ ತಕ್ಕಮಟ್ಟಿಗೆ ನೆಲಗುಳಿ ಗ್ರಾಮದ ಬೃಂದಾವನ ಫಾರ್ಮ್​ ಹೌಸ್ ನಲ್ಲಿ ಚಿರು ಸಮಾಧಿಗೆ ಪೂಜೆ ನೆರವೇರಿಸುವ ಮೂಲಕ ಕುಟುಂಬಸ್ಥರು ತಮ್ಮ ದುಃಖವನ್ನು ಕಡಿಮೆ ಮಾಡಿಕೊಂಡಿದ್ದಾರೆ. ಚಿರಂಜೀವಿ ಸಮಾಧಿ ಬಳಿ ಆಗಮಿಸಿದ ಚಿರಂಜೀವಿ ಸರ್ಜಾ ಅಜ್ಜಿ ಲಕ್ಷ್ಮಿದೇವಿ ಅವರು ಮೊಮ್ಮಗನ ಸ್ಮಾರಕ್ಕೆ ಹೂವುಗಳನ್ನ ಹಾಕಿ, ಪ್ರೀತಿಯ ಮಳೆಗೆರೆದರು. ಚಿರು ಹುಟ್ಟುಹಬ್ಬದ ವಿಶೇಷವಾಗಿ ಸಾಕಷ್ಟು […]

ಮೊಮ್ಮಗನ ಸ್ಮಾರಕದ ಮೇಲೆ ಹೂವಿನ ಮಳೆಗೆರೆದ ಅಜ್ಜಿ, ಕಣ್ಣಾಲಿಗಳು ತೇವ ತೇವ
ಸಾಧು ಶ್ರೀನಾಥ್​

Updated on: Oct 17, 2020 | 10:36 AM

ಬೆಂಗಳೂರು: ನಟ ಚಿರಂಜೀವಿ ಸರ್ಜಾ‌ಗೆ 36ನೇ ಹುಟ್ಟುಹಬ್ಬ ಇಂದು. ಚಿರು ನಿಧನರಾದ ನಂತರದ ಮೊದಲ ಹುಟ್ಟುಹಬ್ಬವೂ ಇದಾಗಿದೆ. ಸಂಭ್ರಮ ನೆಲೆಸಬೇಕಿದ್ದ ಜಾಗದಲ್ಲಿ ದುಃಖ ಮಡುವುಗಟ್ಟಿದೆ. ಆದರೂ ತಕ್ಕಮಟ್ಟಿಗೆ ನೆಲಗುಳಿ ಗ್ರಾಮದ ಬೃಂದಾವನ ಫಾರ್ಮ್​ ಹೌಸ್ ನಲ್ಲಿ ಚಿರು ಸಮಾಧಿಗೆ ಪೂಜೆ ನೆರವೇರಿಸುವ ಮೂಲಕ ಕುಟುಂಬಸ್ಥರು ತಮ್ಮ ದುಃಖವನ್ನು ಕಡಿಮೆ ಮಾಡಿಕೊಂಡಿದ್ದಾರೆ.

ಚಿರಂಜೀವಿ ಸಮಾಧಿ ಬಳಿ ಆಗಮಿಸಿದ ಚಿರಂಜೀವಿ ಸರ್ಜಾ ಅಜ್ಜಿ ಲಕ್ಷ್ಮಿದೇವಿ ಅವರು ಮೊಮ್ಮಗನ ಸ್ಮಾರಕ್ಕೆ ಹೂವುಗಳನ್ನ ಹಾಕಿ, ಪ್ರೀತಿಯ ಮಳೆಗೆರೆದರು. ಚಿರು ಹುಟ್ಟುಹಬ್ಬದ ವಿಶೇಷವಾಗಿ ಸಾಕಷ್ಟು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿರೋ ಕುಟುಂಬಸ್ಥರು ಸಮಾಧಿ ಬಳಿ ಪೂಜೆ ಹಾಗೂ ಅನ್ನದಾನ ಕಾರ್ಯಕ್ರಮವಿಟ್ಟುಕೊಂಡಿದ್ದಾರೆ.

ಚಿರು ಹುಟ್ಟುಹಬ್ಬ ಅಂಗವಾಗಿ ಪುಟ್ಟ ಅಭಿಮಾನಿಗಳು ಬರ್ತ್ ಡೇ ಸೆಲೆಬ್ರೇಷನ್ ಮಾಡುತ್ತಿದ್ದಾರೆ. ನೆಲಗುಳಿ ಗ್ರಾಮದಲ್ಲಿರೋ ಚಿರು ಸಮಾಧಿಯತ್ತ ಆಗಮಿಸಿದ ಅಭಿಮಾನಿಗಳು ತುಸು ನಿರಾಶೆಗೊಂಡಿದ್ದಾರೆ. ಯಾರನ್ನೂ ಒಳಗೆ ಬಿಡದ ಕಾರಣ ಗೇಟಲ್ಲಿಯೇ ನಿಂತು ಅಭಿಮಾನಿಗಳು ಕೇಕ್ ಕತ್ತರಿಸುವ ಮೂಲಕ ತಮ್ಮ ನಾಯಕನಿಗೆ ಅಭಿಮಾನ ಸಲ್ಲಿಸಿದ್ದಾರೆ.

ಪತ್ನಿ ಮೇಘನಾರಿಂದ ಸಮಾಧಿ ಪೂಜೆ
ಚಿರಂಜೀವಿ ಹುಟ್ಟು ಹಬ್ಬದ ಹಿನ್ನೆಲೆ ಚಿರು ಸಮಾಧಿ ಬಳಿ ಅವರ ಪತ್ನಿ ಮೇಘನಾ ರಾಜ್ ಇನ್ನೇನು ಕೆಲವೇ ಕ್ಷಣಗಳಲ್ಲಿ ಆಗಮಿಸಲಿದ್ದಾರೆ. ಹೆಣ್ಣುಕೊಟ್ಟ ಮಾವ ಸುಂದರ್ ರಾಜ್ ಕುಟುಂಬವೂ ಸಮಾಧಿ ಬಳಿ ಬಂದು ಪೂಜೆ ಮಾಡಲಿದೆ. ಮೇಘನಾ ರಾಜ್ ಸದ್ಯ ಜೆಪಿ ನಗರ ಮನೆಯಲ್ಲೆ ಇದ್ದಾರೆ. ಸಮಾಧಿಗೆ ತೆರಳಿ ಪೂಜೆ ಸಲ್ಲಿಸುತ್ತೇವೆ ಎಂದು ಸುಂದರ್ ರಾಜ್ ಇದೇ ವೇಳೆ ತಿಳಿಸಿದ್ದಾರೆ.

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us