AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chiranjeevi Sarja: ಚಿರಂಜೀವಿ ಬರ್ತ್​ಡೇಗೆ ಸ್ವೀಟ್ ಆಗಿ ವಿಶ್ ಮಾಡಿದ ನಟಿ ಮೇಘನಾ ರಾಜ್

ಕೆಲ ವರ್ಷಗಳ ಹಿಂದೆ ಹೃದಯಾಘಾತದಿಂದ ಚಿರಂಜೀವಿ ಅವರು ಮೃತಪಟ್ಟರು. ಆದರೆ, ಮೇಘನಾ ರಾಜ್ ಹಾಗೂ ಅಭಿಮಾನಿಗಳ ಪಾಲಿಗೆ ಅವರಿನ್ನೂ ಜೀವಂತವಾಗಿದ್ದಾರೆ. ಅವರನ್ನು ನಾನಾ ರೀತಿಯಲ್ಲಿ ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

Chiranjeevi Sarja: ಚಿರಂಜೀವಿ ಬರ್ತ್​ಡೇಗೆ ಸ್ವೀಟ್ ಆಗಿ ವಿಶ್ ಮಾಡಿದ ನಟಿ ಮೇಘನಾ ರಾಜ್
ಮೇಘನಾ-ಚಿರಂಜೀವಿ
ರಾಜೇಶ್ ದುಗ್ಗುಮನೆ
|

Updated on: Oct 17, 2023 | 11:36 AM

Share

ಇಂದು (ಅಕ್ಟೋಬರ್ 17) ಚಿರಂಜೀವಿ ಸರ್ಜಾ (Chiranjeevi Sarja) ಜನ್ಮದಿನ. ಈ ವಿಶೇಷ ದಿನದಂದು ಅಭಿಮಾನಿ ವಲಯದಲ್ಲಿ ಅವರನ್ನು ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ. ಇಷ್ಟೇ ಅಲ್ಲ, ಅವರ ಪತ್ನಿ ನಟಿ ಮೇಘನಾ ರಾಜ್ ಕೂಡ ಪತಿಯನ್ನು ನೆನಪಿಸಿಕೊಂಡಿದ್ದಾರೆ. ಚಿರು ಜೊತೆ ಇದ್ದ ಫೋಟೋ ಹಂಚಿಕೊಂಡಿರುವ ಅವರು, ಪತಿಗೆ ಬರ್ತ್​ಡೇ ವಿಶ್ ಮಾಡಿದ್ದಾರೆ. ಈ ಫೋಟೋ ಮೇಘನಾ ಹಾಗೂ ಚಿರಂಜೀವಿ ಸರ್ಜಾ ಅವರ ಅಭಿಮಾನಿ ವಲಯದಲ್ಲಿ ವೈರಲ್ ಆಗುತ್ತಿದೆ.

ಚಿರಂಜೀವಿ ಸರ್ಜಾ ಅವರು ಜನಿಸಿದ್ದು 1984ರ ಅಕ್ಟೋಬರ್ 17ರಂದು. ಅವರು ನಮ್ಮ ಜೊತೆ ಇದ್ದಿದ್ದರೆ 39ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದರು. ಆದರೆ ಕೆಲ ವರ್ಷಗಳ ಹಿಂದೆ ಹೃದಯಾಘಾತದಿಂದ ಚಿರಂಜೀವಿ ಅವರು ಮೃತಪಟ್ಟರು. ಆದರೆ, ಮೇಘನಾ ರಾಜ್ ಹಾಗೂ ಅಭಿಮಾನಿಗಳ ಪಾಲಿಗೆ ಅವರಿನ್ನೂ ಜೀವಂತವಾಗಿದ್ದಾರೆ. ಅವರನ್ನು ನಾನಾ ರೀತಿಯಲ್ಲಿ ನೆನಪಿಸಿಕೊಳ್ಳುವ ಕೆಲಸ ಆಗುತ್ತಿದೆ.

ಚಿರಂಜೀವಿ ಸರ್ಜಾ ಅವರ ಜೊತೆ ಕಳೆದ ಕ್ಷಣದ ಫೋಟೋ ಹಂಚಿಕೊಂಡಿದ್ದಾರೆ ಮೇಘನಾ ರಾಜ್. ‘ಹ್ಯಾಪಿ ಬರ್ತ್​ಡೇ ಹಸ್ಬಂಡ್’ ಎಂದು ಅವರು ಬರೆದುಕೊಂಡಿದ್ದಾರೆ. ಈ ಫೋಟೋಗೆ ಬಗೆಬಗೆಯಲ್ಲಿ ಕಮೆಂಟ್​ಗಳು ಬಂದಿವೆ. ‘ಹುಟ್ಟುಹಬ್ಬದ ಶುಭಾಶಯಗಳು ಚಿರಂಜೀವಿ ಅವರೇ. ನಾವು ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇವೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

ಚಿರಂಜೀವಿ ಸರ್ಜಾ ಅವರು ಮೃತಪಟ್ಟ ನಂತರದಲ್ಲಿ ಮೇಘನಾ ರಾಜ್ ಮತ್ತೊಂದು ಮದುವೆ ಆಗಲಿದ್ದಾರೆ ಎಂದೆಲ್ಲ ಸುದ್ದಿ ಹಬ್ಬಿತು. ಆದರೆ, ಅದು ಸುಳ್ಳು ಎಂಬುದನ್ನು ಅವರು ಸ್ಪಷ್ಟನೆ ನೀಡಾಗಿದೆ. ಅವರಿಗೆ ಈಗ ಮಗ ರಾಯನ್ ರಾಜ್ ಸರ್ಜಾನೇ ಎಲ್ಲಾ ಆಗಿದ್ದಾನೆ. ಅವನ ಆರೈಕೆಯಲ್ಲಿ ಮೇಘನಾ ಬ್ಯುಸಿ ಆಗಿದ್ದಾರೆ. ಅವರು ರಾಯನ್​ನಲ್ಲಿ ಚಿರಂಜೀವಿಯನ್ನು ಕಾಣುತ್ತಿದ್ದಾರೆ.

View this post on Instagram

A post shared by Meghana Raj Sarja (@megsraj)

ಇದನ್ನೂ ಓದಿ: ಅಳಿಯ ಚಿರಂಜೀವಿ ಸರ್ಜಾ ನಟಿಸಿದ ಕೊನೇ ಸಿನಿಮಾ ‘ರಾಜಮಾರ್ತಾಂಡ’ ನೋಡಿ ಸುಂದರ್​ ರಾಜ್​ ಹೇಳಿದ್ದೇನು?

ಇತ್ತೀಚೆಗೆ ಚಿರಂಜೀವಿ ಸರ್ಜಾ ಅವರ ಕೊನೆಯ ಸಿನಿಮಾ ‘ರಾಜಮಾರ್ತಾಂಡ’ ರಿಲೀಸ್ ಆಗಿದೆ. ಈ ಕಾರಣಕ್ಕೂ ಚಿರಂಜೀವಿ ಅವರ ಬರ್ತ್​ಡೇ ಸಾಕಷ್ಟು ವಿಶೇಷ ಎನಿಸಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ